ಬಾಲ ಯೇಸುವಿನ ಆರಾಧನೆಯಲಿ ಮಿಂದೆದ್ದ ಭಕ್ತರು


Team Udayavani, Jan 15, 2019, 6:39 AM IST

bala-yesu.jpg

ಬೆಂಗಳೂರು: ನಕ್ಷತ್ರಗಳ ಮಿಂಚು, ಬಲೂನ್‌ಗಳ ಚಿತ್ತಾರ, ಶುಭ ಸಂಕೇತದ ಗಂಟೆ ನಾದ, ವಿದ್ಯುತ್‌ ದೀಪಾಲಂಕಾರಗಳಿಂದ ವರ್ಣರಂಜಿತವಾಗಿ ಸಿಂಗಾರಗೊಂಡಿರುವ ಬಾಲ ಯೇಸುವಿನ ದೇವಾಲಯ. ಒಳಗಿನ ಸಭಾಂಗಣದಲ್ಲಿ ಧರ್ಮ ಗುರುಗಳಿಂದ ಬಲಿಪೂಜೆ, ಹೊರಭಾಗದ ಮೈದಾನದಲ್ಲಿ ಸಾವಿರಾರು ಭಕ್ತರಿಂದ ಶಾಂತಿ ಪ್ರಾರ್ಥನೆ – ಇದು ಸೋಮವಾರ ಸಂಜೆ ವಿವೇಕ ನಗರದ ಇನಾ#ಂಟ್‌ ಜೀಸಸ್‌ ಚರ್ಚ್‌ನ 48ನೇ ವಾರ್ಷಿಕೋತ್ಸವದಲ್ಲಿ ಕಂಡುಬಂದ ದೃಶ್ಯ.

ನಗರದ ಪುರಾತನ ಚರ್ಚ್‌ಗಳಲ್ಲಿ ಒಂದಾಗಿರುವ ವಿವೇಕ ನಗರದ ಇನ್ಫಾಂಟ್ ಜೀಸಸ್‌ ಚರ್ಚ್‌ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜ.5ರಿಂದ ಜ.14ರವರೆಗೆ ವಾರ್ಷಿಕೋತ್ಸವ ಸಮಾರಂಭ (ಬಾಲ ಯೇಸುವಿನ ಹಬ್ಬ) ಆಯೋಜಿಸಲಾಗಿತ್ತು. ಕೊನೆ ದಿನವಾದ ಸೋಮವಾರ ಸಂಜೆ 6 ಗಂಟೆಗೆ ಬಾಲ ಯೇಸುವಿನ ತೇರನ್ನು ಏಳೆಯುವ ಮೂಲಕ ಹಬ್ಬಕ್ಕೆ ತೆರೆ ಏಳೆಯಲಾಯಿತು.

ಹಬ್ಬದ ಹಿನ್ನೆಲೆ ಸುತ್ತಮುತ್ತಲ ಬಡಾವಣೆಗಳ  ಕ್ರೈಸ್ತ ಬಾಂಧವರು ಬಡವರಿಗೆ ಬಟ್ಟೆ, ಆಹಾರ ಇತ್ಯಾದಿ ದಾನ ಮಾಡಿ, ಸ್ನೇಹಿತರೊಂದಿಗೆ ಉಡುಗೊರೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ತಮ್ಮ ಮನೆಗಳಲ್ಲಿ ಸಿಹಿ ತಿಂಡಿಗಳು, ವಿಶೇಷ ಖಾದ್ಯಗಳನ್ನು ತಯಾರಿಸಿ ಬಂಧು ಮಿತ್ರರೊಂದಿಗೆ ಸವಿದು ಸಡಗರ ಸಂಭ್ರಮದಿಂದ ಬಾಲ ಏಸುವಿನ ಹಬ್ಬವನ್ನು ಆಚರಿಸಿದರು.

ಡಿ.4 ರಂದು ಬೆಂಗಳೂರು ಮಾಹಾಧರ್ಮಾಧ್ಯಕ್ಷ ಪೀಟರ್‌ ಮಚಾದೋ ಅವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದ್ದರು. ಆ ನಂತರ ನಿತ್ಯ ಚರ್ಚ್‌ನಲ್ಲಿ ವಿಶೇಷ ಪೂಜೆ, ಕನ್ನಡ, ತಮಿಳು, ಕೊಂಕಣಿ ಹಾಗೂ ಇಂಗ್ಲೀಷ್‌ನಲ್ಲಿ ಪ್ರಾರ್ಥನೆಗಳು ಜರುಗಿದವು. ವಿಶೇಷವಾಗಿ ಡಿ.5ರಂದು ವ್ಯಾದಿಷ್ಠರಿಗಾಗಿ ಬಲಿಪೂಜೆ, ಡಿ.6ರಂದು ಸಾಮೂಹಿಕ ವಿವಾಹ, ದಂಪತಿಗಳ ಬಲಿ ಪೂಜೆಗಳು ನಡೆಸಲಾಗಿತ್ತು ಎಂದು ಚರ್ಚ್‌ನ ಅಧಿಕಾರಿಗಳು ತಿಳಿಸಿದರು.

ಇನ್ನು ವಾರ್ಷಿಕೊತ್ಸವದ ಕೊನೆಯ ದಿನವೂ ಮುಂಜಾನೆ 5 ಗಂಟೆಯಿಂದಲೇ ಪ್ರಾರ್ಥನೆಗಳು ನಡೆದವು. ಸಂಜೆ 7 ಗಂಟೆಗೆ ಮಾಜಿ ಬೆಂಗಳೂರು ಮಹಾಧರ್ಮಾಧ್ಯಕ್ಷ ಡಾ.ಬರ್ನಾಡ್‌ ಮೋರಸ್‌ ತೇರಿಗೆ ಆಶೀರ್ವಾದ ಮಾಡಿದರು. ಆನಂತರ ತೇರು ಎಲ್‌.ಆರ್‌.ನಗರ, ವಿವೇಕ ನಗರ, ಆನೇಪಾಳ್ಯ, ಈಜೀಪುರ, ನೀಲಸಂದ್ರ, ಹಲಸೂರಿನ ಸುತ್ತಮುತ್ತ ಸಾಗಿತು. ಅಪಾರ ಭಕ್ತರು ಭಾಗವಹಿಸಿದ್ದರು. ರಾತ್ರಿ 12 ಗಂಟೆಗೆ ತೇರು ಚರ್ಚ್‌ಗೆ ಹಿಂದಿರುಗಿತು.

ಕ್ರೈಸ್ತರು ಮೃದು ಸ್ವಭಾವ ಸರಳ ವ್ಯಕ್ತಿತ್ವದವರು – ಸಿಎಂ: ನಾನು ಚಿಕ್ಕವಯಸ್ಸಿನಿಂದ ಗಮನಿಸಿದಂತೆ ಕ್ರೈಸ್ತ ಸಮಯದಾಯವು ಅತ್ಯಂತ ಮೃದು ಸ್ವಾಭಾವದ, ಸರಳ ವ್ಯಕ್ತಿತ್ವದವರು. ಅಲ್ಲದೇ ಕ್ರೈಸ್ತರು ತಮ್ಮೊಡನೆ ಇತರೆ ಸಮುದಾಯವನ್ನು ಅತೀ ಹೆಚ್ಚು ಗೌರವಿಸುವ ಗುಣವನ್ನು ಹೊಂದಿದ್ದಾರೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ವಾರ್ಷಿಕೋತ್ಸವ ಕೊನೆಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ಬಾರಿ ಸಿಎಂ ಆಗಿದ್ದಾಗ ಜನತಾದರ್ಶನದಲ್ಲಿ ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಮಹತ್ವಾಕಾಂಕ್ಷೆಯುಳ್ಳ ವಿದ್ಯಾವಂತ 600 ವಿಕಲಚೇತನರಿಗೆ ಕೆಪಿಟಿಸಿಎಲ್‌ನಲ್ಲಿ ತಾತ್ಕಾಲಿಕ ಹುದ್ದೆಯನ್ನು ಕೊಡಿಸಿದ್ದೆ. ಆನಂತರ ದಿನಗಳಲ್ಲಿ ಹುದ್ದೆಯ ಖಾಯಂ ಮಾಡಿಕೊಡಲು ಸಾಕಷ್ಟು ಮನವಿ ಬಂದಿದ್ದವು ಎಂದು ಹೇಳಿದರು.

ಕುಮಾರಸ್ವಾಮಿ ಕೇವಲ ರೈತರ ಸಿಎಂ ಎನ್ನುವುದು ಬೇಡ. ಬೆಂಗಳೂರಿನಲ್ಲಿ 42 ಸಾವಿರ ಕೋಟಿ ರೂ ವೆಚ್ಚದಲ್ಲಿ ಫೆರಿಫೆರಲ್‌ ರಿಂಗ್‌ ರಸ್ತೆ ಹಾಗೂ ಎಲಿವೇಟೆಡ್‌ ಕಾರಿಡಾರ್‌ ರಸ್ತೆ, 36 ಸಾವಿರ ಕೋಟಿ ರೂ. ವೆಚ್ಚದಲ್ಲಿ ಉಪನಗರ ರೈಲು ಯೋಜನೆಗೆ ಚಾಲನೆ ನೀಡಿ ನಗರ ವಾಸಿಗಳ ಸಂಚಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುಲು ಮುಂದಾಗಿದ್ದೇವೆ.

ಇನ್ನು ಕ್ರೈಸ್ತರಿಗೆ ಸ್ಮಶಾನದ ಕೊರತೆ ಇದೆ ಎಂದು ಧರ್ಮಾಧ್ಯಕ್ಷರು ಗಮನಕ್ಕೆ ತಂದಿದ್ದು, ಅದನ್ನು ನಿವಾರಿಸಲು ನಿಟ್ಟಿನಲ್ಲಿ ಈಗಾಗಲೇ ಮೈತ್ರಿ ಸರ್ಕಾರ ಕ್ರಮಕೈಗೊಳ್ಳತ್ತಿದೆ ಎಂದರು. ಮಾಜಿ ಬೆಂಗಳೂರು ಮಹಾಧರ್ಮಾಧ್ಯಕ್ಷ ಡಾ.ಬರ್ನಾಡ್‌ ಮೋರಸ್‌ ಮಾತನಾಡಿದರು.

ಈ ವೇಳೆ ಬೆಂಗಳೂರಿನ ಕ್ಯಾಥೋಲಿಕ್‌ ಚರ್ಚ್‌ಗಳಿಗೆ ಸಂಬಂಧಿಸಿದಂತೆ www.bangalorearchdiocese.org ನೂತನ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಶಾಸಕ ಎನ್‌.ಎ.ಹ್ಯಾರಿಸ್‌, ಜಯನಗರ ಶಾಸಕಿ ಸೌಮ್ಯರೆಡ್ಡಿ, ಶಾಸಕಿ ವಿನೇಶಾ, ರೆವೆರಂಡ್‌ ಫಾದರ್‌ ಜಯನಾಥನ್‌, ಫಾದರ್‌ ಅಂಥೋನಿಸ್ವಾಮಿ, ಫಾದರ್‌ ಜೋಸೆಪ್‌ ಮಿನಾನ್ಸ್‌, ಸ್ಥಳೀಯ ಬಿಬಿಎಂಪಿ ಸದಸ್ಯ ಶಿವಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.