ಸೋಂಕು ಪತ್ತೆಯಲ್ಲಿ ಬೆಂಗಳೂರು ಮೀರಿಸಿದ ಬಳ್ಳಾರಿ


Team Udayavani, May 19, 2021, 3:36 PM IST

Bellary surpasses Bangalore in infection detection

ಬಳ್ಳಾರಿ: ಬಳ್ಳಾರಿ ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಪ್ರತಿದಿನ ಕೋವಿಡ್‌ಪರೀಕ್ಷೆಗೆ ಒಳಗಾಗುತ್ತಿರುವವರಲ್ಲಿ ಶೇ.46.92 ಜನರಲ್ಲಿ ಸೋಂಕು ಪತ್ತೆಯಾಗುತ್ತಿದ್ದು, ಉಭಯ ಜಿಲ್ಲೆಗಳು ರಾಜ್ಯದಲ್ಲೇಪ್ರಥಮ ಸ್ಥಾನದಲ್ಲಿವೆ.

ರಾಜ್ಯ ಸರ್ಕಾರ ಏ.18ರಿಂದ ಮೇ15ರವರೆಗೆ ಪ್ರತಿ ಏಳು ದಿನಗಳ ಶೇಕಡಾವಾರು ಮಾಹಿತಿ ಪ್ರತ್ಯೇಕವಾಗಿ ಸಂಗ್ರಹಿಸಿದ್ದು, ಈ ಪೈಕಿ ಮೇ9ರಿಂದ 15ವರೆಗಿನ ಏಳು ದಿನಗಳಲ್ಲಿ ರಾಜ್ಯಾದ್ಯಂತ ಕೋವಿಡ್‌ಪರೀಕ್ಷೆಗೊಳಗಾದವರಲ್ಲಿ ಸರಾಸರಿ ಶೇ.32.17ಜನರಲ್ಲಿ ಸೋಂಕು ಪತ್ತೆಯಾಗಿದ್ದರೆ,ಈ ಪೈಕಿ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿಅತಿ ಹೆಚ್ಚು ಸೋಂಕು ಪತ್ತೆಯಾಗಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಪ್ರತಿದಿನ ಸಾವಿರಾರು ಸೋಂಕಿತರು ಪತ್ತೆಯಾಗುತ್ತಿರುವ ಬೆಂಗಳೂರು ನಗರವನ್ನೇ  ಹಿಂದಿಕ್ಕಿದೆ.

ಶೇಕಡಾವಾರು ಸೋಂಕಿತರು: ಬಳ್ಳಾರಿ-ವಿಜಯನಗರ ಜಿಲ್ಲೆಗಳು (ಶೇ.46.92) ಪ್ರಥಮ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಉತ್ತರ ಕನ್ನಡ(ಶೇ.46.40), ಮೂರನೇ ಸ್ಥಾನದಲ್ಲಿ ಶಿವಮೊಗ್ಗ (ಶೇ.42.44), ನಾಲ್ಕನೇ ಸ್ಥಾನದಲ್ಲಿ ಹಾಸನ(ಶೇ.40.94), ಮೈಸೂರು (ಶೇ.40.90), ಬೆಳಗಾವಿ(ಶೇ.39.35), ತುಮಕೂರು (ಶೇ.37.50), ಉಡುಪಿ(ಶೇ.36.16), ಧಾರವಾಡ (ಶೇ.34.56), ಚಾಮರಾಜನಗರ(ಶೇ.34.36), ಗದಗ (ಶೇ.34.17), ಬೆಂಗಳೂರು ಗ್ರಾಮೀಣ(ಶೇ.33.49),ಕೊಪ್ಪಳ (ಶೇ.33.29),ಕೋಲಾರ (ಶೇ.33.20),ಬೆಂಗಳೂರು ನಗರ (ಶೇ.31.91), ಚಿಕ್ಕಮಗಳೂರು(ಶೇ.31.70), ರಾಯಚೂರು (ಶೇ.31.24), ಕೊಡಗು(ಶೇ.29.30), ರಾಮನಗರ (ಶೇ.28.15), ಕಲಬುರ್ಗಿ(ಶೇ.26.80), ಚಿಕ್ಕಬಳ್ಳಾಪುರ (ಶೇ.26.71), ದಕ್ಷಿಣ ಕನ್ನಡ(ಶೇ.26.61), ವಿಜಯಪುರ (ಶೇ.26.49), ಬಾಗಲಕೋಟೆ(ಶೇ.26.41), ಮಂಡ್ಯ (ಶೇ.25.15), ದಾವಣಗೆರೆ(ಶೇ.22.24), ಯಾದಗಿರಿ (ಶೇ.21.44), ಚಿತ್ರದುರ್ಗ(ಶೇ.17.77),ಹಾವೇರಿ (ಶೇ.14.40),ಬೀದರ್‌(ಶೇ.12.49)ಜಿಲ್ಲೆಗಳು ಕೊನೆಯ ಸ್ಥಾನದಲ್ಲಿವೆ.

ನಿಯಂತ್ರಣಕ್ಕೆ ಬಾರದ ಗಣಿನಾಡು:ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಏ.18ರಿಂದ ಮೇ15ವರೆಗೆ ನಾಲ್ಕು ವಾರಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಏ.18ರಿಂದ 24ರವರೆಗಿನಏಳು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡವರ ಪೈಕಿ ಶೇ.18.40 ಜನರಲ್ಲಿ ಸೋಂಕುಪತ್ತೆಯಾಗಿತ್ತು. ಅದು ಏ.25ರಿಂದ ಮೇ 1ರವರೆಗೆ ಏಳುದಿನಗಳಲ್ಲಿ ಶೇ.26.68ಕ್ಕೆ, 3ನೇ ವಾರ ಮೇ 2ರಿಂದ 8ರವರೆಗೆ ಶೇ.40.89, ನಾಲ್ಕನೇ ವಾರ ಮೇ9ರಿಂದ 15ರವರೆಗೆಶೇ.46.92 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಉಭಯಜಿಲ್ಲೆಗಳು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿವೆ ಎಂದುಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿರುವ ಅಂಕಿ-ಅಂಶಗಳು ಸ್ಪಷ್ಟಪಡಿಸಿವೆ.

5ಜಿಲ್ಲೆಗಳಲ್ಲಿ ಶೇ.64.14 ಸೋಂಕು ಪತ್ತೆರಾಜ್ಯಾದ್ಯಂತ ಕಳೆದ 28 ದಿನಗಳಲ್ಲಿ 10,42,397ಜನರಲ್ಲಿ ಸೋಂಕು ಪತ್ತೆಯಾಗಿದ್ದರೆ, ಇದರಲ್ಲಿಬೆಂಗಳೂರು ನಗರ ಶೇ.48.39 (5,04,423), ಮೈಸೂರು ಶೇ.4.83 (50376),ತುಮಕೂರು ಶೇ.4.81 (43057),ಬಳ್ಳಾರಿ-ವಿಜಯನಗರ ಶೇ.3.10 (32315), ಹಾಸನಶೇ.3.01 (31376) ಸೇರಿಈಐದು ಜಿಲ್ಲೆಗಳಲ್ಲಿ ಶೇ.64.14 ಜನರಲ್ಲಿ ಸೋಂಕು ಪತ್ತೆಯಾಗಿದೆ.ಇನ್ನುಳಿದ ಜಿಲ್ಲೆಗಳಲ್ಲಿ ಶೇ.35.86 (373764)ಜನರಲ್ಲಿ ಸೋಂಕು ಪತ್ತೆಯಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.