ಬೆಂಗಳೂರಲ್ಲಿ ಮಲಯಾಳಂನ “ಕೋಲ್ಡ್‌ ಕೇಸ್‌” ಸಿನೆಮಾ ಹೋಲುವ ಪ್ರಕರಣ

ಒಂದೇ ದಿನದಲ್ಲಿ ಅಸ್ತಿಪಂಜರ ಮೂಲ ಗುರುತಿಸಿದ ಪೊಲೀಸರು

Team Udayavani, Feb 4, 2023, 12:02 PM IST

TDY-1

ಬೆಂಗಳೂರು: ಮಲೆಯಾಳಂನ ಪ್ರಸಿದ್ಧ ಥ್ರಿಲ್ಲರ್‌ ಸಿನೆಮಾ “ಕೋಲ್ಡ್‌ ಕೇಸ್‌’ʼನ ಮಾದರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಅಸ್ತಿ ಪಂಜರದ ಮೂಲವನ್ನು ಒಂದೇ ದಿನದಲ್ಲಿ ಪತ್ತೆಹಚ್ಚುವಲ್ಲಿ ಹುಳಿಮಾವು ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಸ್ತಿ ಪಂಜರ ನೇಪಾಳ ಮೂಲದ ಪುಷ್ಪಾದಾಮಿ (22) ಅವರದ್ದು ಎಂದು ಗುರುತಿಸಲಾಗಿದೆ.

ಅವರು ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ವಾಸವಿದ್ದರು. ಮದ್ಯ ಸೇವಿಸಿ ಜಗಳವಾಡುತ್ತಿದ್ದ ಪತಿಯ ಚಟಕ್ಕೆ ಬೇಸತ್ತ ಪುಷ್ಪಾ ಕಳೆದ ಜು.8ರಂದು ನೇಪಾಳಕ್ಕೆ ಹೋಗಿದ್ದರು.ಬಳಿಕ ವಾಪಸ್‌ ಬಂದಿರಲಿಲ್ಲ. ಪತ್ನಿ ಕಾಣೆಯಾಗಿರುವ ಬಗ್ಗೆ ಹುಳಿಮಾವು ಠಾಣೆಯಲ್ಲಿ ಅಮರ್‌ ದಾಮಿ ಪ್ರಕರಣ ದಾಖಲಿಸಿದ್ದರು. ಹುಳಿಮಾವಿನ ಅಕ್ಷಯ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಫೆ.2ರಂದು ನೇಣು ಬಿಗಿದ ಸ್ಥಿತಿಯಲ್ಲಿ ಮಾನವನ ಅಸ್ತಿಪಂಜರ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.

ಅಸ್ಥಿ ಸಸ್ಪೆನ್ಸ್‌ ಬೆನ್ನತ್ತಿದ ಪೋಲಿಸರಿಗೆ ಸಿಕ್ಕಿತ್ತು ಸಣ್ಣ ಸಾಕ್ಷ್ಯ:

ಸ್ಥಳದಲ್ಲಿ ಮಹಿಳೆಯ ಚಪ್ಪಲಿ, ಕತ್ತಿನ ನೆಕ್ಲೆಸ್‌ ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಮಿಸ್ಸಿಂಗ್‌ ಕೇಸ್‌ ಹುಡುಕಲು ಶುರು ಮಾಡಿದಾಗ ಕಳೆದ ಜುಲೈನಲ್ಲಿ ಹುಳಿಮಾವು ಠಾಣೆಯಲ್ಲಿ ನೇಪಾಳಿ ಮಹಿಳೆ ನಾಪತ್ತೆ ಬಗ್ಗೆ ಕೇಸ್‌ ದಾಖಲಾಗಿರುವುದು ಗಮನಕ್ಕೆಬಂದಿತ್ತು. ಅಸ್ಥಿ ಪಂಜರದ ಬಳಿ ಸಿಕ್ಕಿರುವ ವಸ್ತುಗಳನ್ನು ನಾಪತ್ತೆಯಾಗಿದ್ದ ಪುಷ್ಪಾ ದಾಮಿಗೆ ಸೇರಿದ್ದಾಗಿದೆಯೇ ಎಂಬುದನ್ನು ಪರಿಶೀಲಿಸಿದಾಗ ಹೋಲಿಕೆಯಾಗಿತ್ತು. ಆ ಸಂದರ್ಭದಲ್ಲಿ ಇದು ಪುಷ್ಪ ದಾಮಿ ಅಸ್ಥಿ ಪಂಜರ ಎಂಬುದು ದೃಢಪಟ್ಟಿತ್ತು. ಮಲೆಯಾಳಂನ ಖ್ಯಾತ ಥ್ರಿಲ್ಲರ್‌ಸಿನಿಮಾಗಳಲ್ಲೊಂದಾದ ʼಕೋಲ್ಡ್‌ ಕೇಸ್‌ʼನಲ್ಲೂ ಇದೇ ಮಾದರಿಯಲ್ಲಿ ಅಸ್ಥಿ ಪಂಜರದಲ್ಲಿ ಪತ್ತೆಯಾದ ಸಣ್ಣ ಸಾಕ್ಷ್ಯದಿಂದ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿತ್ತು. ಇದೀಗ ನೈಜ ಪ್ರಕರಣವೊಂದರಲ್ಲಿ ಸಿನಿಮೀಯ ಶೈಲಿಯಲ್ಲೇ ಪೊಲೀಸರು ಮಹಿಳೆಯ ಗುರುತು ಪತ್ತೆ ಹಚ್ಚಿದ್ದಾರೆ. ಅಸ್ಥಿ ಪಂಜರದ ಡಿಎನ್‌ ಎ , ಸತ್ತಅವಧಿಯ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.