Bengaluru Bandh: ಇಂದು ಮಧ್ಯರಾತ್ರಿಯಿಂದಲೇ ಬಂದ್‌


Team Udayavani, Sep 10, 2023, 1:32 PM IST

Bengaluru Bandh: ಇಂದು ಮಧ್ಯರಾತ್ರಿಯಿಂದಲೇ ಬಂದ್‌

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ, ಚಾಲಕರಿಗೆ ಮಾಸಿಕ 10 ಸಾವಿರ ರೂ. ಪರಿಹಾರ ಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.11ರಂದು “ಬೆಂಗಳೂರು ಬಂದ್‌’ಗೆ ಕರೆ ನೀಡಿದ್ದು ಭಾನುವಾರ ಮಧ್ಯ ರಾತ್ರಿಯಿಂದಲೇ ಖಾಸಗಿ ವಾಹನಗಳ ಸೇವೆ ಸ್ಥಗಿತವಾಗುವ ಹಿನ್ನೆಲೆಯಲ್ಲಿ ದೂರದ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.

ಜತೆಗೆ ಸೋಮವಾರ ರಾಜಧಾನಿ ವ್ಯಾಪ್ತಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳ ಖಾಸಗಿ ವಾಹನ ಸೌಲಭ್ಯ ಕೂಡ ಬಂದ್‌ ಆಗುವ ಸಾಧ್ಯತೆ ದಟ್ಟವಾಗಿದ್ದು, ಶಾಲಾ ಮಕ್ಕಳಿಗೂ ಬಿಸಿ ತಟ್ಟುವ ನಿರೀಕ್ಷೆಯಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್‌.ನಟರಾಜ್‌ ಶರ್ಮ, ಈಗಾಗಲೇ 36 ಸಂಘಟನೆಗಳ ಮುಖಂಡರು ಬಂದ್‌ಗೆ ಬೆಂಬಲ ನೀಡಿದ್ದು, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸೇವೆ ನೀಡುವ ಖಾಸಗಿ ವಾಹನಗಳು ಸೇರಿವೆ. ಈಗಾಗಲೇ ಸಂಬಂಧಪಟ್ಟ ಶಾಲಾ-ಕಾಲೇಜು ಆಡಳಿತ ಮಂಡಳಿಗೆ ಖಾಸಗಿ ಸಾರಿಗೆ ಸಂಸ್ಥೆಯ ಮಾಲೀಕರು ಮಾಹಿತಿ ನೀಡಿದ್ದಾರೆ ಎಂದು ಹೇಳಿ ದ್ದಾರೆ. ಜತೆಗೆ ಒಕ್ಕೂಟ ಕೂಡ ಖಾಸಗಿ ಸಾರಿಗೆ ಸಂಸ್ಥೆಗಳ ಬಂದ್‌ ಹಿನ್ನೆಲೆಯಲ್ಲಿ ಒಂದು ದಿನ ಮಕ್ಕಳ ರಜೆ ನೀಡುಂತೆ ರಾಜಧಾನಿ ವ್ಯಾಪ್ತಿಯ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟಗಳ ಬಂದ್‌ ಹಿನ್ನೆಲೆ ನಗರದಲ್ಲಿ 3 ಲಕ್ಷ ಆಟೋ, 1.5ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್‌ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೆಟ್‌ ಕಂಪನಿ ಬಸ್‌ಗಳು ಬಂದ್‌ ಆಗಲಿದ್ದು ಸಿಲಿಕಾನ್‌ ಸಿಟಿ ಜನರಿಗೆ ಬಂದ್‌ ಬಿಸಿ ತಟ್ಟಲಿದೆ.

ಇವು ಇರುವುದಿಲ್ಲ :

 ಆಟೋಗಳು

 ಓಲಾ ಉಬರ್‌ ಆಟೋ, ಕ್ಯಾಬ್‌ಗಳು

 ಶಾಲಾ ಆಟೋಗಳು

 ಕಂಪನಿ ಕ್ಯಾಬ್‌ಗಳು

 ಏರ್ಪೋರ್ಟ್‌ ಕ್ಯಾಬ್‌ಗಳು

 ಸ್ಕೂಲ್‌ ಬಸ್‌ಗಳು

 ಖಾಸಗಿ ಬಸ್‌ಗಳು ಯಾವ ವಾಹನ ಇರುತ್ತೆ?

 ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌

 ಬೈಕ್‌ ಟ್ಯಾಕ್ಸಿ

 ಮೆಟ್ರೋ ರೈಲು

 ಸ್ವಂತ ವಾಹನಗಳ ಸಂಚಾರ

ಸರ್ಕಾರಿ ಸಾರಿಗೆಯಲ್ಲಿ ಪ್ರಯಾಣಿಸಿ: ಖಾಸಗಿ ಸಾರಿಗೆ ಸಂಘನೆಗಳ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಆಟೋ ರಿಕ್ಷಾಗಳು, ಓಲಾ, ಉಬರ್‌ ಆಟೋಗಳು, ಶಾಲಾ ಆಟೋಗಳು, ಕಂಪನಿಗಳ ಕ್ಯಾಬ್‌, ಏರ್ಪೋರ್ಟ್‌ ಕ್ಯಾಬ್‌ ಗಳು ರಸ್ತೆಗಿಳಿಯುವುದು ಬಹುತೇಕ ಅನುಮಾನ. ಸ್ಕೂಲ್‌ ವ್ಯಾನ್‌ಗಳು, ಸ್ಕೂಲ್‌ ಬಸ್‌ಗಳು, ಖಾಸಗಿ ಬಸ್‌ಗಳು ಕೂಡ ಬಂದ್‌ ಗೆ ಬೆಂಬಲ ಸೂಚಿಸಿದ್ದು, ಈ ಎಲ್ಲಾ ವಾಹನಗಳ ಸಂಚಾರ ಬಂದ್‌ ಆಗಲಿದೆ. ಬಂದ್‌ನಿಂದ ಸರ್ಕಾರಿ ಸಾರಿಗೆ ಬಿಟ್ಟು ಖಾಸಗಿ ಸಾರಿಗೆ ಬಳಕೆ ಮಾಡುವವರಿಗೆ ಹೆಚ್ಚು ಸಮಸ್ಯೆ ಆಗುವ ಸಾಧ್ಯತೆ ಇದೆ. ಏರ್‌ಪೋರ್ಟ್‌ ಟ್ಯಾಕ್ಸಿ ಸಂಪೂರ್ಣ ಸ್ಥಗಿತ ಹಿನ್ನೆಲೆ ವಿಮಾನ ಪ್ರಯಾಣಿರಿಗೆ ತೊಂದರೆ ಆಗಲಿದೆ.

ಶಾಲಾ ಬಸ್‌ಗಳ ಸಂಘಟನೆಯು ಬಂದ್‌ಗೆ ಬೆಂಬಲ ನೀಡಿರುವುದರಿಂದ ಬೆಂಗಳೂರು ನಗರದ ಹೃದಯ ಭಾಗ ಮತ್ತು ಹೊರ ವಲಯದ ಶಾಲೆಗಳಲ್ಲಿ ಓದುತ್ತಿರುವ ಸ್ಕೂಲ್‌ ಬಸ್‌ ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಲೆಗಳು ಸ್ವಯಂ ಪ್ರೇರಿತವಾಗಿ ಶಾಲೆಗಳಿಗೆ ರಜೆ ಘೋಷಿಸಿವೆ. ಆದರೆ, ಒಕ್ಕೂಟದಿಂದ ರಜೆಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ●ಶಶಿಕುಮಾರ್‌, ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ.

ನಮಗೆ ಸರ್ಕಾರದಿಂದ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಆದ್ದರಿಂದ ಸೋಮವಾರ ನಿಗದಿಯಾಗಿರುವ ಪದವಿ ಪರೀಕ್ಷೆಗಳು ಎಂದಿನಂತೆ ಸಾಗಲಿದೆ. ನಮ್ಮ ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ಅನ್ನು ಹೆಚ್ಚು ಅವಲಂಬಿಸಿದ್ದಾರೆ. ಹಾಗೆಯೇ ಬಿಎಂಟಿಸಿ ಬಸ್‌ ಸೇವೆ ಎಂದಿನಂತೆ ಇರಲಿದೆ. ●ಡಾ.ಶ್ರೀನಿವಾಸ್‌, ಕುಲಸಚಿವ (ಮೌಲ್ಯಮಾಪನ), ಬೆಂಗಳೂರು ವಿವಿ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.