ಬೆಂಗಳೂರು ಈಗ ಕೋವಿಡ್ ರಾಜಧಾನಿ: ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!


Team Udayavani, Oct 8, 2020, 7:38 AM IST

ಬೆಂಗಳೂರು ಈಗ ಕೋವಿಡ್ ರಾಜಧಾನಿ: ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ದೇಶಕ್ಕೆ ಕೋವಿಡ್ ರಾಜಧಾನಿಯಾಗಿ ಪರಿವರ್ತನೆ ಗೊಂಡಿದೆ! ಕಳೆದ ಒಂದು ವಾರದಲ್ಲಿ ದೇಶದ ಮಹಾ ನಗರಗಳ ಪೈಕಿ ಅತಿ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಕಾಣಿಸಿಕೊಂಡಿರುವುದು ಬೆಂಗಳೂರಿನಲ್ಲಿಯೇ.

ಸದ್ಯ ಬೆಂಗಳೂರು ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿರಬಹುದು. ಆದರೆ, ಮಅಕ್ಟೋಬರ್‌ನಿಂದೀಚೆಗೆ ಬೆಂಗಳೂರಿನಲ್ಲಿ ಪ್ರಕರಣಗಳ ತೀವ್ರತೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅ.1 ರಿಂದ 7 ರ ನಡುವೆ ಬೆಂಗಳೂರಿನಲ್ಲಿ 29,578 ಮಂದಿಗೆ ಸೋಂಕು ತಗುಲಿದೆ. ಅಂದರೆ ನಿತ್ಯ ಸರಾಸರಿ 4,225 ಮಂದಿ ಸೋಂಕಿತರಾಗಿದ್ದಾರೆ. ಇದೇ ಅವಧಿಯಲ್ಲಿ ನಿತ್ಯ ಸರಾಸರಿ ಪೂನಾದಲ್ಲಿ 2,195, ಮುಂಬೈನಲ್ಲಿ 2099, ದೆಹಲಿಯಲ್ಲಿ 3,111 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸೋಂಕು ಪ್ರಕರಣಗಳಲ್ಲಿ ದೇಶದ ಎಲ್ಲಾ ಮಹಾನಗರಗಳನ್ನು ಬೆಂಗಳೂರು ಮೀರಿಸಿದೆ.

ಐದು ಸಾವಿರಕ್ಕೆ ಹೆಚ್ಚಳ: ಕಳೆದ ಎರಡು ದಿನಗಳಿಂದ ಮುಂಬೈ, ದೆಹಲಿ, ಪೂನಾದಲ್ಲಿ 3 ಸಾವಿರದ ಆಸುಪಾಸಿನಲ್ಲಿ ಸೋಂಕು ವರದಿಯಾಗುತ್ತಿವೆ. ಆದರೆ, ಬೆಂಗಳೂರಿನಲ್ಲಿ 5ಸಾ ವಿರಕ್ಕೆ ಹೆಚ್ಚಳವಾಗಿವೆ. ಸೋಂಕಿನ ತೀವ್ರತೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪ್ರಕರಣಗಳ ಪಟ್ಟಿಯಲ್ಲಿಯೂ ಬೆಂಗಳೂರು ಅಗ್ರಸ್ಥಾನಕ್ಕೇರಲಿದೆ.

250ಕ್ಕೂ ಹೆಚ್ಚು ಮಂದಿ ಸಾವು: ಸೋಂಕಿತರ ಸಾವಿನ ವಿಚಾರದಲ್ಲಿಯೂ ಬೆಂಗಳೂರು ಮುಂಚೂಣಿಯಲ್ಲಿದೆ. ಕಳೆದ 1 ವಾರದಲ್ಲಿ 254 ಸೋಂಕಿತರು ಮೃತಪಟ್ಟಿದ್ದಾರೆ. ನಿತ್ಯ ಸರಾಸರಿ 37 ಮಂದಿ ಮೃತಪಟ್ಟಂತಾಗಿದೆ. ಇತರೆ ಮಹಾನಗರಗಳಲ್ಲಿಯೂ ನಿತ್ಯ 40 ಸೋಂಕಿತರ ಸಾವಾಗುತ್ತಿದೆ.

30 ಸಾವಿರ ಸೋಂಕು ಪರೀಕ್ಷೆ: ನಗರದಲ್ಲಿ ಸೋಂಕು ಪರೀಕ್ಷೆಗಳ ಸಂಖ್ಯೆಯೂ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸೆಪ್ಟೆಂಬರ್‌ನಲ್ಲಿ ನಿತ್ಯ ಸರಾಸರಿ 20 ಸಾವಿರ ಪರೀಕ್ಷೆ ನಡೆದಿದ್ದವು. ಸದ್ಯ ಆ ಪ್ರಮಾಣ 30 ಸಾವಿರಕ್ಕೆ ಹೆಚ್ಚಳವಾಗಿದೆ. ಅ.1 ರಿಂದ ಅ.7ರವರೆಗೆ ಒಟ್ಟು 2,16,739 ಸೋಂಕು ಪರೀಕ್ಷೆಗಳು ನಡೆದಿವೆ. ಬುಧವಾರ ಹಿಂದೆಂದಿಗಿಂತಲೂ ಅತಿ ಹೆಚ್ಚು 35183 ಪರೀಕ್ಷೆ ನಡೆದಿವೆ. ಇನ್ನು ದೇಶದಲ್ಲಿಯೇ ದೆಹಲಿ ಹೊರತುಪಡಿಸಿದರೆ ಅತಿ ಹೆಚ್ಚು ಪರೀಕ್ಷೆ ಬೆಂಗಳೂರಿನಲ್ಲಿ ನಡೆಯುತ್ತಿವೆ. ಇದೇ ಕಾರಣಕ್ಕೆ ಸೋಂಕು ಹೆಚ್ಚಳವಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

ಸದ್ಯ ಅತಿ ಹೆಚ್ಚು ಸೋಂಕಿತರು ಬೆಂಗಳೂರಿನಲ್ಲಿದ್ದಾರೆ!: ನಿರಂತರ ಗುಣಮುಖರ ಸಂಖ್ಯೆಗಿಂತಲೂ ಸೋಂಕು ಪ್ರಕರಣಗಳ ಹೆಚ್ಚಾದ ಹಿನ್ನೆಲೆ ಬೆಂಗಳೂರಿನ ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನಕ್ಕೇ ತಲುಪಿದೆ. ಅಂದರೆ, ಸದ್ಯ ದೇಶದಲ್ಲಿಯೇ ಅತಿಹೆಚ್ಚು ಪಾಸಿಟಿವ್‌ ಪ್ರಕರಣ ಇಲ್ಲಿವೆ. ಮಂಗಳವಾರ ದವರೆಗೂ ಪೂನಾ ಮೊದಲ ಸ್ಥಾನದಲ್ಲಿತ್ತು. ಆದರೆ, ಬುಧವಾರ ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣ ಬೆಂಗಳೂರಿನಲ್ಲಿ ವರದಿ ಯಾದ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 58624 ಸಾವಿರಕ್ಕೆ ತಲುಪಿದೆ. ಪೂನಾ 57926 ಪ್ರಕರಣಗಳೊಂದಿಗೆ2ನೇ ಸ್ಥಾನಕ್ಕೆ ಇಳಿಕೆಯಾಗಿದೆ.

ಒಂದೇ ದಿನ 35 ಸಾವಿರ ಸೋಂಕು 
ಪಾಲಿಕೆ ಬುಧವಾರ ಒಂದೇ ದಿನ 35 ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಿದೆ. ಕಳೆದ 10ದಿನಗಳಿಂದ ನಗರದಲ್ಲಿ  ಸೋಂಕು ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ಆದರೆ, ಇದೇ ಮೊದಲ ಒಂದೇ ದಿನ 35 ಸಾವಿರ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಬುಧವಾರ 35,183 ಮಂದಿ ಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ25,053 ಆರ್‌ಟಿಪಿಸಿಆರ್‌, 10,130 ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ನಡೆಸಲಾಗಿದೆ ಎಂದು ಪಾಲಿಕೆ ಆರೋ ಗ್ಯಾಧಿ ಕಾರಿಗಳು ತಿಳಿಸಿದ್ದಾರೆ. ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, ಮೃತರ ಪ್ರಮಾಣ ಶೇ.1ಕ್ಕಿಂತ ಕಡಿಮೆ ಮಾಡುವ ಉದ್ದೇಶದಿಂದ ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!

ಅ. 1ರಿಂದ 7 ರ ನಡುವೆ 29,578 ಮಂದಿಗೆ ಸೋಂಕು

ಮಹಾನಗರ ಸೋಂಕು ಪ್ರಕರಣ ಸಾವು ಪ್ರಕರಣ ಸಕ್ರಿಯ ಪ್ರಕರಣ
ಬೆಂಗಳೂರು 29,578 254  58624
ದೆಹಲಿ 21,782 255 22186
ಪೂನಾ 15,370 260 57926
ಮುಂಬೈ 14,693 276 26544

ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.