ಯುವತಿಗೆ ಮೊಬೈಲ್ ಸಂದೇಶ ಕಳುಹಿಸಿದ್ದಕ್ಕೆ ಯುವಕನ ಕೊಲೆ?
Team Udayavani, Feb 1, 2023, 10:09 AM IST
ಬೆಂಗಳೂರು: ಪಕ್ಕದ ಮನೆ ಯುವತಿಯ ಮೊಬೈಲ್ಗೆ ಸಂದೇಶ ಕಳುಹಿಸಿದ್ದಾನೆಎಂಬ ಕಾರಣಕ್ಕೆ ಗೋವಿಂದರಾಜು (20)ಎಂಬಾತನನ್ನು ಅಪಹರಿಸಿ ಕೊಲೆಗೈದಿರುವಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕುಟುಂಬಸ್ಥರು ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೂಂದೆಡೆ ಪ್ರಕರಣ ಸಂಬಂಧ ಅನಿಲ್(30) ಎಂಬಾತನನ್ನು ವಶಕ್ಕೆಪಡೆದು ವಿಚಾರಣೆ ನಡೆಸಲಾಗಿದೆ.
ಮತ್ತಿಕೆರೆ ನಿವಾಸಿ ಗೋವಿಂದರಾಜು ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಪಕ್ಕದ ಮನೆಯ 20 ವರ್ಷದ ಯುವತಿ ಜತೆ ಸ್ನೇಹವಿಟ್ಟುಕೊಂಡಿದ್ದ. ಇಬ್ಬರೂ ಪರಸ್ಪರಸಂದೇಶ ಕಳುಹಿಸುತ್ತಿದ್ದರು. ಇತ್ತೀಚೆಗೆಯುವತಿ ಮನೆಯಲ್ಲೇ ಮೊಬೈಲ್ ಬಿಟ್ಟು ಹೋಗಿದ್ದರು. ಅದನ್ನು ಕುಟುಂಬದ ಸದಸ್ಯರು ಗಮನಿಸಿದಾಗ ಗೋವಿಂದರಾಜು ಸಂದೇಶ ಕಳುಹಿಸಿರುವುದು ಗೊತ್ತಾಗಿದೆ. ಅದರಿಂದ ಆಕ್ರೋಶಗೊಂಡ ಅನಿಲ್, ಗೋವಿಂದರಾಜುನನ್ನು ಮಾತ ನಾಡ ಲೆಂದು ಕರೆದುಕೊಂಡು ಹೋಗಿದ್ದಾನೆ. ನಂತರ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಸಂಜೆ ವೇಳೆಗೆ ತನ್ನ ತಾಯಿಗೆ ಕರೆ ಮಾಡಿದ ಅನಿಲ್, ಗೋವಿಂದ ರಾಜು ಮೇಲೆ ಹಲ್ಲೆ ನಡೆಸಿದ್ದೇನೆ ಎಂದಿದ್ದಾನೆ.
ಮತ್ತೂಂದೆಡೆ ಗೋವಿಂದರಾಜು ಪೋಷಕರು, ಯುವತಿಯ ಸಂಬಂಧಿಕರು ಗೋವಿಂದರಾಜುನನ್ನು ಅಪಹರಿಸಿ ಅರಣ್ಯ ಪ್ರದೇಶದಲ್ಲಿ ಮೃತದೇಹ ಎಸೆದಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಈ ಸಂಬಂಧ ಅನಿಲ್ನನ್ನು ವಶಕ್ಕೆ ಪಡೆಯಲಾಗಿದೆ.
ಮತ್ತೂಂದೆಡೆ ಈ ವಿಚಾರ ತಿಳಿದ ಗೋವಿಂದರಾಜುಪೋಷಕರು ಯಶವಂತಪುರ ಠಾಣೆಗೆಬಂದು, ಪೊಲೀಸರ ಜತೆ ಹೋಗುತ್ತಿದ್ದಅನಿಲ್ ಮೇಲೆ ಹಲ್ಲೆಗೂ ಮುಂದಾಗಿದ್ದಾರೆ.ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ
ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ