ಗೌರವ ಪಡೆಯಲು ಭಾಗವತನಾದೆ: ಕಲ್ಮನೆ ನಂಜಪ್ಪ


Team Udayavani, Sep 22, 2019, 3:06 AM IST

gowrava

ಬೆಂಗಳೂರು: “ಹಿಂದೆ ರಂಗ ಕ್ಷೇತ್ರದಲ್ಲಿ ಭಾಗವತರಿಗೆ ಭಾರೀ ಗೌರವ, ಮನ್ನಣೆಯಿತ್ತು. ಆ ಗೌರವ ಪಡೆಯಲು ನಾನು ಮೂಡಲಪಾಯ ಯಕ್ಷಗಾನ ಕ್ಷೇತ್ರದ ಭಾಗವತನಾದೆ,’ ಎಂದು ಹಿರಿಯ ಕಲಾವಿದ, ತುಮಕೂರು ಜಿಲ್ಲೆ ತಿಪಟೂರು ಸಮೀಪದ ಅರಳಗುಪ್ಪೆಯ ಕಲ್ಮನೆ ನಂಜಪ್ಪ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾಗವಹಿಸಿ, ತಾವು ಸಾಗಿಬಂದ ಹಾದಿಯ ಬಗ್ಗೆ ಮೆಲಕು ಹಾಕಿದರು.

“ನಮ್ಮದು ಕಲಾವಿದರ ಮನೆತನ. ಮನೆ ವಾತಾವರಣದಿಂದ ಸಿಕ್ಕ ಪ್ರೋತ್ಸಾಹದಿಂದಾಗಿ ನಾನು 6ನೇ ವಯಸ್ಸಿನಲ್ಲೇ ಯಕ್ಷಗಾನ ಪಾತ್ರಕ್ಕೆ ಬಣ್ಣ ಹಚ್ಚಿದೆ. ಹಲವು ಪಾತ್ರ ನಿರ್ವಹಿಸಿ ಮೆಚ್ಚುಗೆ ಪಡೆದ ಬಳಿಕ, ಭಾಗವತ ಕ್ಷೇತ್ರದತ್ತ ಹೆಜ್ಜೆಯಿರಿಸಿ ಆ ಕ್ಷೇತ್ರದಲ್ಲೂ ಸೈ ಎನಿಸಿಕೊಂಡೆ,’ ಎಂದು ನಂಜಪ್ಪ ಮುಗುಳ್ನಗೆ ಬೀರಿದರು.

“ಈ ಕಲೆಯನ್ನು ನನ್ನ ಮಕ್ಕಳು ಹಾಗೂ ಮೊಮ್ಮಕ್ಕಳಿಗೆ ಧಾರೆ ಎರೆದಿದ್ದೇನೆ. ಆದರೆ, ಈಗಿನ ಯುವಕರು ಮೂಡಲಪಾಯ ಯಕ್ಷಗಾನದತ್ತ ಒಲವು ತೋರುತ್ತಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾಹಿತಿಗಳು, ವಿಚಾರವಂತರು ಕೈಜೋಡಿಸಿ ಈ ಕಲೆಯನ್ನು ಉಳಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕು,’ ಎಂದು ಮನವಿ ಮಾಡಿದರು.

“ತಿಪಟೂರಿನ ಸಮೀಪದ ಸ್ವಗ್ರಾಮ ಅರಳಗುಪ್ಪೆ ಮತ್ತು ತಿಪಟೂರಿನಲ್ಲಿ ಯಕ್ಷಗಾನ ಕಲಿಕಾ ಕೇಂದ್ರ ಆರಂಭಿಸಲಾಗಿದೆ. ಆದರೆ, ಅಲ್ಲಿಗೆ ಯುವಕರು ಬರುತ್ತಿಲ್ಲ. ಉಚಿತವಾಗಿ ಹೇಳಿಕೊಡುತ್ತೇನೆ ಎಂದರೂ ಆರಂಭದಲ್ಲಿ ಬಂದು ನಂತರ ಮಾಯವಾಗುತ್ತಾರೆ. ಹೀಗಾದರೆ ಕಲೆ ಉಳಿಸುವುದು ಹೇಗೆ,’ ಎಂದು ಬೇಸರ ವ್ಯಕ್ತಪಡಿಸಿದರು.

ಕಲ್ಲಿನ ಮನೆಯ ನಂಜಪ್ಪ: ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ನಡೆಯಿತು. ನಂತರ ಅಜ್ಜಿ ಊರಾದ ನೊಣವಿನಕೆರೆಗೆ ತೆರಳಿ ಮೆಟ್ರಿಕ್ಯೂಲೇಷನ್‌ ಓದಿದೆ. ಈ ವೇಳೆ ಮನೆ ಕಟ್ಟುವ ಸಲುವಾಗಿ ನಮ್ಮಪ್ಪ ಶಾಲೆ ಬಿಡಿಸಿದರು. ಹೀಗಾಗಿ ವ್ಯವಸಾಯದಲ್ಲಿ ತೊಡಗಿದೆ. ನಂತರ ನಾನೇ ಸ್ವತಃ ಕಲ್ಲಿನ ಮನೆ ಕಟ್ಟಿದೆ. ಅದಕ್ಕಾಗಿಯೇ “ಕಲ್ಮನೆ ನಂಜಪ್ಪ’ ಎಂದು ಹೆಸರು ಬಂತು ಎಂದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಉಪಸ್ಥಿತರಿದ್ದರು.

ಬಡಗಿ ಕೆಲಸದಲ್ಲೂ ಎತ್ತಿದ ಕೈ: “ಯಕ್ಷಗಾನದ ಭಾಗವತಿಕೆ ಮಾತ್ರವಲ್ಲ. ಬಡಗಿ ಕೆಲಸದಲ್ಲೂ ನಾನು ಹೆಸರು ಮಾಡಿದ್ದೇನೆ. ಆ ಕಾಲದಲ್ಲೇ ಮರ ಹಾಗೂ ಟಯರ್‌ ಎತ್ತಿನ ಗಾಡಿಗಳನ್ನು ತಯಾರಿಸುತ್ತಿದ್ದೆ. ಸುಮಾರು 250 ಮರದ ಗಾಡಿ ಹಾಗೂ 20 ಟಯರ್‌ ಗಾಡಿಗಳನ್ನು ತಯಾರಿಸಿದ್ದೇನೆ. ತುಮಕೂರು ಮಾತ್ರವಲ್ಲದೆ ಅನ್ಯ ಜಿಲ್ಲೆಗಳಿಂದ ಎತ್ತಿನ ಗಾಡಿಗಳನ್ನು ಮಾಡಿಸಿಕೊಳ್ಳಲು ನಮ್ಮ ಊರಿಗೆ ಬರುತ್ತಿದ್ದರು,’ ಎಂದು ಕಲ್ಮನೆ ನಂಜಪ್ಪ ಹೇಳಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.