ಶಾಲೆ ಕಾಲೇಜು ಸಂಪೂರ್ಣ ಬಂದ್
Team Udayavani, Sep 11, 2018, 6:35 AM IST
ಬೆಂಗಳೂರು : ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್ಗೆ ಬೆಂಬಲ ನೀಡಿದಂತಾಗಿದೆ.
ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲಾಡಳಿತ ಮಂಡಳಿಗಳು ಭಾನುವಾರ ಸಂಜೆಯೇ ಸೋಮವಾರದ ರಜೆ ಖಚಿತಪಡಿಸಿದ್ದರಿಂದ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಖಾಸಗಿ ಶಾಲಾಡಳಿತ ಮಂಡಳಿಗಳು ತರಗತಿ ಕೊಠಡಿ ಸಹಿತವಾಗಿ ಶಾಲೆಯ ಪರಿಕರಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಭಾನುವಾರವೇ ತೆಗೆದುಕೊಂಡಿದ್ದರು.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ಮಂಗಳೂರು, ರಾಯಚೂರು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸಹಿತವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾನುವಾರ ಸಂಜೆಯೇ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಹೀಗಾಗಿ ರಾಜ್ಯದ ಯಾವುದೇ ಶಾಲಾ, ಕಾಲೇಜು ಸೋಮವಾರ ತೆರೆದಿರಲಿಲ್ಲ. ಕೆಲವೊಂದು ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳ ಶಿಕ್ಷಕ, ಉಪನ್ಯಾಸಕರು ಸೋಮವಾರವೂ ಶಾಲಾ ಕಾಲೇಜಿಗೆ ಹೋಗಿ ಆಡಳಿತಾತ್ಮಕ ಕೆಲಸ ನಡೆಸಿದ್ದಾರೆ. ಎಲ್ಲಿಯೂ ತರಗತಿಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆ ಖಚಿತ ಪಡಿಸಿದೆ.
ಖಾಸಗಿ ಶಾಲಾಡಳಿತ ಮಂಡಳಿಗಳು ಬಂದ್ನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಅಥವಾ ಶಾಲೆಯ ಪರಿಕರಗಳ ನಾಶವಾಗ ಬಹುದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ರಜಾ ಘೋಷಣೆ ಮಾಡುವ ಮೊದಲೇ ತಮ್ಮ ಶಾಲೆಗಳಿಗೆ ರಜೆ ನೀಡಿ, ಪಾಲಕ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಮಾಹಿತಿ ನೀಡಿದ್ದರು. ಹೀಗಾಗಿ ಸೋಮವಾರ ಖಾಸಗಿ ಶಾಲೆಗಳಲ್ಲೂ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ.
ಖಾಸಗಿ ಶಾಲೆಗಳು ಸೋಮವಾರ ತರಗತಿಯನ್ನು ಶನಿವಾರ ಮಧ್ಯಾಹ್ನ ಅಥವಾ ಬೇರ್ಯಾವುದಾದರು ಸರ್ಕಾರಿ ರಜಾ ದಿನದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ, ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜಾ ಕಡಿತಗೊಳಿಸಿ, ಅದರಲ್ಲೇ ಸೋಮವಾರದ ತರಗತಿಯನ್ನು ಸೇರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ