ಬಿಐಎಎಲ್‌: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ


Team Udayavani, Apr 23, 2019, 4:10 AM IST

bial

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ‌ (ಬಿಐಎಎಲ್‌) ಪ್ರಸಕ್ತ ಹಣಕಾಸು ವರ್ಷದ ಫ‌ಲಿತಾಂಶ ಪ್ರಕಟಗೊಂಡಿದ್ದು, 2018-19ರ ವರ್ಷಾಂತ್ಯಕ್ಕೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 33.30ರಷ್ಟು ಏರಿಕೆ ಕಂಡುಬಂದಿದೆ.

ಕಳೆದೊಂದು ವರ್ಷದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 33.30 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದು, 2.40 ಲಕ್ಷ ವಿಮಾನಗಳು ಹಾರಾಟ ನಡೆಸಿವೆ. ಈ ಮೂಲಕ ಪ್ರಯಾಣಿಕರ ಸಂಖ್ಯೆ ಶೇ. 33.30ರಷ್ಟು ಹಾಗೂ ವಿಮಾನಗಳ ಸಂಚಾರದಟ್ಟಣೆಯಲ್ಲಿ ಶೇ. 21.8ರಷ್ಟು ವೃದ್ಧಿಯಾಗಿದೆ.

ಒಟ್ಟಾರೆ ಪ್ರಯಾಣಿಕರಲ್ಲಿ ದೇಶೀಯ ವಿಮಾನಗಳಲ್ಲಿ 28.82 ಹಾಗೂ ಅಂತಾರಾಷ್ಟ್ರೀಯ ವಿಮಾನಗಳಲ್ಲಿ 4.48 ದಶಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶೀಯ 23.09 ಹಾಗೂ ಅಂತಾರಾಷ್ಟ್ರೀಯ 3.81 ಸೇರಿದಂತೆ 26.91 ದಶಲಕ್ಷ ಜನ ಸಂಚರಿಸಿದ್ದರು. ಅಲ್ಲದೆ, ಈ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಕೂಡ ಶೇ. 11.0ರಷ್ಟು ಪ್ರಗತಿ ಸಾಧಿಸಿದೆ ಎಂದು ಬಿಐಎಎಲ್‌ ತಿಳಿಸಿದೆ.

ಬಿಐಎಎಲ್‌ ಪ್ರಯಾಣಿಕರಿಗೆ ಪೂರಕವಾದ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೇವಲ 45 ಸೆಕೆಂಡ್‌ಗಳಲ್ಲಿ ಬ್ಯಾಗೇಜ್‌ ಚೆಕ್‌ಇನ್‌ ವ್ಯವಸ್ಥೆಯನ್ನು ಈ ಅವಧಿಯಲ್ಲಿ ಅಳವಡಿಸಲಾಯಿತು. ಅಟೋಮೇಟೆಡ್‌ ಟ್ರೇರಿಟ್ರೀವಲ್‌ ಇರುವ ಸ್ಮಾರ್ಟ್‌ ಸೆಕ್ಯುರಿಟಿ ಲೇನ್‌ಗಳು ಸೇರಿದಂತೆ ಹಲವು ಮೈಲುಗಲ್ಲುಗಳಿಗೆ ಈ ವರ್ಷ ಸಾಕ್ಷಿಯಾಯಿತು ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್‌ ತಿಳಿಸಿದ್ದಾರೆ.

ಅಲ್ಲದೆ, ಆಗಾಗ್ಗೆ ಮಂಜಿನಿಂದಾಗಿ ವಿಮಾನಗಳ ಸೇವೆಯಲ್ಲಿ ಉಂಟಾಗುತ್ತಿರುವ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಂಬಂಧದ ಅಧ್ಯಯನಕ್ಕಾಗಿ ಜವಾಹರಲಾಲ್‌ ನೆಹರು ಮುಂದುವರಿದ ವಿಜ್ಞಾನ ಸಂಶೋಧನಾ ಕೇಂದ್ರದೊಂದಿಗೆ 20 ತಿಂಗಳ ಒಪ್ಪಂದ ಕೂಡ ಮಾಡಿಕೊಳ್ಳಲಾಯಿತು. ಈಗ 13 ಸಾವಿರ ಕೋಟಿ ವೆಚ್ಚದಲ್ಲಿ ಬಿಐಎಎಲ್‌ ವಿಸ್ತರಣೆ ಆಗುತ್ತಿದ್ದು, 2,55,000 ಚ.ಮೀ.ನಲ್ಲಿ ಟರ್ಮಿನಲ್‌-2 ನಿರ್ಮಾಣ ಆಗುತ್ತಿದೆ.

2021ರ ವೇಳೆಗೆ ಟರ್ಮಿನಲ್‌-2 ಕಾರ್ಯಾರಂಭಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಎರಡು ಹಂತಗಳಲ್ಲಿ ಉದ್ದೇಶಿತ ಟರ್ಮಿನಲ್‌ ನಿರ್ಮಾಣಗೊಳ್ಳಲಿದ್ದು, ಮೊದಲ ಹಂತದಲ್ಲಿ 25 ದಶಲಕ್ಷ ಪ್ರಯಾಣಿಕರಿಗೆ ಮತ್ತು 2ನೇ ಹಂತದಲ್ಲಿ 20 ದಶಲಕ್ಷ ಪ್ರಯಾಣಿಕರ ಸಾಮರ್ಥ್ಯ ಹೆಚ್ಚಿಸಲಿದೆ ಎಂದು ಹೇಳಿದರು.

ಪ್ರಯಾಣಿಕರ ಸಂಚಾರ (ದಶಲಕ್ಷಗಳಲ್ಲಿ) 2018-19 2017-18 ಪ್ರಗತಿ (ಶೇಕಡಾವಾರು)
-ದೇಶೀಯ 28.82 23.09 24.8
-ಅಂತಾರಾಷ್ಟ್ರೀಯ 4.48 3.81 17.5
-ಒಟ್ಟಾರೆ 33.30 26.91 23.8

ವಿಮಾನಗಳ ಸಂಚಾರ 2018-19 2017-18 ಪ್ರಗತಿ (ಶೇಕಡಾವಾರು)
-ದೇಶೀಯ 2,11,795 1,72,665 22.7
-ಅಂತಾರಾಷ್ಟ್ರೀಯ 2,11,795 24,665 15.4
-ಒಟ್ಟಾರೆ 2,40,251 1,97,330 21.8

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.