ಮಾಲಿನ್ಯ ತಡೆಗೆ ಮಹಾನಗರಗಳಲ್ಲಿ ಬೈಸಿಕಲ್‌ ವ್ಯವಸ್ಥೆ


Team Udayavani, Aug 29, 2018, 12:33 PM IST

malinya.jpg

ಬೆಂಗಳೂರು: ನಗರದಲ್ಲಿ ವಾಹನ ದಟ್ಟಣೆಯಿಂದ ಆಗುತ್ತಿರುವ ವಾಯು ಮತ್ತು ಶಬ್ದ ಮಾಲಿನ್ಯ ತಡೆಯಲು “ಸಾರ್ವಜನಿಕ ಬೈಸಿಕಲ್‌ ಹಂಚಿಕೆ’ (ಪಿಬಿಎಸ್‌) ಯೋಜನೆಗೆ ಈಚೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ರಾಜ್ಯದ ಎರಡನೇ ಹಂತದ ನಗರಗಳಿಗೂ ಈ ಯೋಜನೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಳೆದ ವರ್ಷ ಯೋಜನೆ ಜಾರಿಯಾಗಿದ್ದು, ಸಾವಿರ ಬೈಸಿಕಲ್‌ಗ‌ಳನ್ನು ನಿತ್ಯ ಎಂಟು ಸಾವಿರ ಜನ ಬಳಸುತ್ತಿದ್ದಾರೆ. ಈಗ ಬೆಂಗಳೂರಿನಲ್ಲಿ 400 ಕೇಂದ್ರಗಳಲ್ಲಿ ಆರು ಸಾವಿರ ಬೈಸಿಕಲ್‌ಗ‌ಳನ್ನು ಬಳಕೆಗೆ ನಿರ್ಧರಿಸಲಾಗಿದೆ. ಈ ಸಂಬಂಧದ ಪ್ರಸ್ತಾವನೆಗೆ ಈಚೆಗೆ ಪಾಲಿಕೆ ಸಭೆಯಲ್ಲಿ ಅನುಮೋದನೆಯೂ ದೊರೆತಿದೆ.

ಇದೇ ಮಾದರಿಯಲ್ಲಿ ಎರಡನೇ ಹಂತದ ನಗರಗಳಿಗೆ ಸಾರ್ವಜನಿಕ ಬೈಸಿಕಲ್‌ ಹಂಚಿಕೆ ಯೋಜನೆ ಪರಿಚಯಿಸಲು ಉದ್ದೇಶಿಸಲಾಗಿದೆ. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾದ ಬೈಸಿಕಲ್‌ ಸೊಸೈಟಿ ಅಡಿ ಈ ಯೋಜನೆ ಜಾರಿಗೆ ಚಿಂತನೆ ನಡೆದಿದೆ.

ಮೊದಲ ಆದ್ಯತ: ಬೆಂಗಳೂರು ಮಾತ್ರವಲ್ಲದೆ ಉಳಿದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ ಇದೇ ಮಾದರಿಯ ವ್ಯವಸ್ಥೆ ಜಾರಿಗೊಳಿಸುವ ಉದ್ದೇಶ ಇದೆ. ಈ ಸಂಬಂಧ ಬಜೆಟ್‌ನಲ್ಲಿ 25 ಕೋಟಿ ರೂ. ಮೀಸಲಿಡಲಾಗಿದ್ದು, ಶೀಘ್ರದಲ್ಲೇ ಈ ಕುರಿತ ಪ್ರಸ್ತಾವನೆಯು ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆಬರಲಿದೆ. ಒಪ್ಪಿಗೆ ದೊರೆತ ನಂತರ ಆಯಾ ಪಾಲಿಕೆಗಳಿಗೆ ಪ್ರಸ್ತಾವನೆ ಕಳುಹಿಸಲಾಗುವುದು.

ಸ್ಥಳೀಯ ಸಂಸ್ಥೆಗಳ ಆಸಕ್ತಿ, ಬೈಸಿಕಲ್‌ಗ‌ಳ ಬಳಕೆ, ವಾಹನದಟ್ಟಣೆ ಮತ್ತಿತರ ಅಂಶಗಳನ್ನು ಆಧರಿಸಿ ಯೋಜನೆ ಅನುಷ್ಠಾನ ಗೊಳಿಸಲಾಗುವುದು. ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬಳ್ಳಾರಿ, ಬೆಳಗಾವಿ, ಮೈಸೂರು, ದಾವಣಗೆರೆ, ಮಂಗಳೂರು, ವಿಜಯಪುರ, ಶಿವಮೊಗ್ಗ, ತುಮಕೂರು ಪಾಲಿಕೆಗಳಲ್ಲಿ ಜಾರಿಗೊಳಿಸುವುದು ಬಾಕಿ ಇದೆ ಎಂದು ನಗರ ಭೂಸಾರಿಗೆ ನಿರ್ದೇಶನಾಲಯದ, ಹೆಸರು ಹೇಳಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಎರಡನೇ ಹಂತದ ನಗರಗಳಲ್ಲಿ ಎಷ್ಟು ಬೈಸಿಕಲ್‌ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಅದೆಲ್ಲವೂ ಸ್ಥಳೀಯ ಸಂಸ್ಥೆ ಸ್ಪಂದನೆಯನ್ನು ಅವಲಂಬಿಸಿದೆ. ಸಾಧ್ಯವಾದರೆ ಖಾಸಗಿ ಸಹಭಾಗಿತ್ವದೊಂದಿಗೆ ಜಾರಿಗೊಳಿಸುವ ಯೋಚನೆಯೂ ಇದೆ ಎಂದು ಅವರು ಹೇಳಿದರು.

ಪಾಲಿಕೆಯಿಂದಲೇ ಸ್ಥಾಪನೆ: ಪಾಲಿಕೆ ವ್ಯಾಪ್ತಿಯ ಜಾಗಗಳಲ್ಲಿ ಪಾಲಿಕೆಯೇ ಕಾಮಗಾರಿ ಕೈಗೆತ್ತಿಕೊಂಡು, ಬೈಸಿಕಲ್‌ ಕೇಂದ್ರಗಳನ್ನು ಸ್ಥಾಪಿಸಲಿದೆ. ನಿರ್ವಹಣಾ ಸಂಸ್ಥೆಗಳನ್ನು ಇ-ಪ್ರಾಕ್ಯುರ್‌ವೆುಂಟ್‌ ಮೂಲಕ ಆಯ್ಕೆ ಮಾಡುವುದು, ಬೈಸಿಕಲ್‌ ಸೊಸೈಟಿ ಅಡಿ ಬಿಬಿಎಂಪಿ ಮತ್ತು ನಗರ ಭೂಸಾರಿಗೆ ನಿರ್ದೇಶನಾಲಯ ಜಂಟಿಯಾಗಿ ಯೋಜನೆಯ ಕಾಮಗಾರಿಗಳ ಅನುಷ್ಠಾನಗೊಳಿಸುವುದು, ವಿಸ್ತೃತ ಯೋಜನಾ ವರದಿ ತಯಾರಿಸಲು ನಿರ್ದೇಶನಾಲಯಕ್ಕೆ ವಹಿಸುವುದು ಸೇರಿದಂತೆ ಹಲವು ಅಂಶಗಳಿಗೆ ಈಚೆಗೆ ಬಿಬಿಎಂಪಿ ಅನುಮೋದನೆ ನೀಡಿದೆ.

187.38 ಕೋಟಿ ವೆಚ್ಚ – 122 ಕಿ.ಮೀ. ಮಾರ್ಗ: ಈ ಮಧ್ಯೆ ಉದ್ಯಾನ ನಗರಿಯಲ್ಲಿ ನಗರ ಭೂಸಾರಿಗೆ ನಿರ್ದೇಶನಾಲಯ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಸುಮಾರು 187.38 ಕೋಟಿ ಮೊತ್ತದಲ್ಲಿ ಒಟ್ಟಿಗೆ ಸಾರ್ವಜನಿಕ ಬೈಸಿಕಲ್‌ ಹಂಚಿಕೆ ಮತ್ತು ಪಾದಚಾರಿ ವ್ಯವಸ್ಥೆ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ಇದಕ್ಕಾಗಿ ಮೂರು ಮಾದರಿಯಲ್ಲಿ ಬೈಸಿಕಲ್‌ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಇದಕ್ಕೆ ಅಗತ್ಯ ಇರುವ ಜಾಗವನ್ನು ಪಾಲಿಕೆ ಪೂರೈಸಲಿದೆ.

900 ಮೀ.x2.00 ಮೀ., 18.00 ಮೀ. x2.00ಮೀ.,3,600 ಮೀ.x 2.00 ಮೀ. ವಿಸ್ತೀರ್ಣದಲ್ಲಿ ವಿನ್ಯಾಸಗೊಳಿಸಿ ನಿರ್ಮಿಸಲಾಗುತ್ತಿದೆ. ಒಟ್ಟಾರೆ 122 ಕಿ.ಮೀ.  ಉದ್ದದ ಬೈಸಿಕಲ್‌ ಮಾರ್ಗ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಒಂಬತ್ತು ಖಾಸಗಿ ನಿರ್ವಹಣಾ ಸಂಸ್ಥೆಗಳು ಬೈಸಿಕಲ್‌ ಪೂರೈಕೆಗೆ ಮುಂದೆ ಬಂದಿದ್ದಾರೆ.

ಎಂ.ಜಿ.ರಸ್ತೆ ಸುತ್ತ ಕೇಂದ್ರಗಳು: ನಗರ ಭೂಸಾರಿಗೆ ನಿರ್ದೇಶನಾಲಯ ನಡೆಸಿದ ಸಮೀಕ್ಷೆ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಮಾರ್ಗಸೂಚಿಯಂತೆ ನಗರದಲ್ಲಿ ಎಂ.ಜಿ.ರಸ್ತೆ ಮತ್ತು ವಿಧಾನಸೌಧ ಸುತ್ತಮುತ್ತ, ಇಂದಿರಾನಗರ, ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌, ಬಾಣಸವಾಡಿ, ಎಚ್‌ಆರ್‌ಬಿಆರ್‌ ಲೇಔಟ್‌, ಎಚ್‌ಬಿಆರ್‌ ಲೇಔಟ್‌ ಸುತ್ತಲಿನ ಪ್ರದೇಶಗಳಲ್ಲಿ ಬೈಸಿಕಲ್‌ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಬೈಸಿಕಲ್‌ಗ‌ಳ ನಿರ್ವಹಣೆ, ಸುರಕ್ಷತೆ ಸೇರಿದಂತೆ ಪ್ರತಿಯೊಂದನ್ನೂ ಖಾಸಗಿ ಸಂಸ್ಥೆ ನೋಡಿಕೊಳ್ಳಲಿದ್ದು, ಸಂಸ್ಥೆಗಳಿಗೆ ಟೆಂಡರ್‌ ಆಧಾರದ ಮೇಲೆ ಪರವಾನಗಿ ಶುಲ್ಕ ವಿಧಿಸಲಾಗುತ್ತದೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.