ಗೌರಿ ಹತ್ಯೆ ಪ್ರಕರಣ: ರಾಘವೇಶ್ವರ ಶ್ರೀ ವಿರುದ್ಧ ದೂರು


Team Udayavani, Sep 17, 2017, 12:00 PM IST

g-lankesh-farewell.jpg

ಬೆಂಗಳೂರು :ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಪ್ರಕರಣದಲ್ಲಿ ರಾಮಚಂದ್ರಪುರ ಮಠದ ರಾಘವೇಶ್ವರ ಶ್ರೀಗಳ ಕೈವಾಡವಿದೆ ಎಂದು ಆರೋಪಿಸಿ ಎಸ್‌ಐಟಿಯಲ್ಲಿ ದೂರು ದಾಖಲಿಸಲಾಗಿದೆ.

ಈ ಹಿಂದೆ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ಪ್ರೇಮಲತಾ ಹಾಗೂ ದಿವಾಕರಶಾಸಿŒ ದಂಪತಿ ಈ ದೂರು ನೀಡಿದ್ದು, ಅತ್ಯಾಚಾರ ಆರೋಪ ಸಂಬಂಧ ರಾಘವೇಶ್ವರ ಶ್ರೀಗಳ ವಿರುದ್ಧ ಗೌರಿ ಲಂಕೇಶ್‌ ತಮ್ಮ ಪತ್ರಿಕೆಯಲ್ಲಿ ಸರಣಿ ಲೇಖನಗಳನ್ನು ಪ್ರಕಟಿಸಿದ್ದರು. ಈ ಸಂಬಂಧ ಮಾನನಷ್ಟ ಮೊಕದ್ದಮೆ ಸಹ ದಾಖಲಾಗಿದೆ. ಹೀಗಾಗಿ ರಾಘವೇಶ್ವರ ಶ್ರೀಗಳೇ ಸುಪಾರಿ ಹಂತಕರಿಗೆ ಹಣ ಕೊಟ್ಟು ಕೃತ್ಯವೆಸಗಿರುವ ಸಾಧ್ಯತೆಯಿದೆ. ಈ ಕೋನದಲ್ಲಿಯೂ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಆರೋಪ ಸಂಬಂಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಇದುವರೆಗೂ ಆರೋಪಕ್ಕೆ ಪೂರಕವಾದ ಸಾಕ್ಷ್ಯಳು ಪತ್ತೆಯಾಗಿಲ್ಲ. ಆದರೆ, ರಾಘವೇಶ್ವರ ಶ್ರೀಗಳಿಗೆ ನೋಟಿಸ್‌ ಜಾರಿ ಮಾಡಿ ತಮ್ಮ ಹೇಳಿಕೆ ದಾಖಲಿಸುವಂತೆ ಕೇಳಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗೌರಿ ಲಂಕೇಶ್‌ ಹತ್ಯೆ ನಡೆದ ಮೂರನೇ ದಿನ ಪ್ರೇಮಲತಾ ದಂಪತಿ ದೂರು ನೀಡಿದ್ದು, ಕೆಲವೊಂದು ದಾಖಲೆಗಳನ್ನು ಕೊಟ್ಟಿದ್ದಾರೆ. ಇದರೊಂದಿಗೆ ಶ್ರೀಗಳ ವಿರುದ್ಧ ಎಸ್‌ಐಟಿಯ ಸಹಾಯವಾಣಿಗೆ ನೂರಕ್ಕೂ ಅಧಿಕ ಕರೆಗಳು ಬರುತ್ತಿದ್ದು, ಕೃತ್ಯದಲ್ಲಿ ಅವರನ್ನು ಕರೆದು ವಿಚಾರಣೆ ನಡೆಸಿದರೆ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ನಡುವೆ ಬೆಂಗಳೂರು ಸಾಹಿತ್ಯ ಉತ್ಸವ ಸಂಸ್ಥಾಪಕ ವಿಕ್ರಂ ಸಂಪತ್‌ರನ್ನು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಕುರಿತು ಖುದ್ದು ಸಾಮಾಜಿಕ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಕ್ರಂ ಸಂಪತ್‌, ತನ್ನನ್ನು ವಿಚಾರಣೆಗೆ ಕರೆಸಿಕೊಂಡಿದ್ದನ್ನು ಖಂಡಿಸಿದ್ದಾರೆ. ತಾವು ಇದುವರೆಗೂ ಗೌರಿ ಲಂಕೇಶ್‌ ಅವರನ್ನು ಭೇಟಿಯೇ ಮಾಡಿಲ್ಲ. ಲಂಡನ್‌ನಲ್ಲಿದ್ದುಕೊಂಡೆ ಆಕೆಯ ಕೊಲೆಯನ್ನು ಟ್ವಿಟರ್‌ ಮೂಲಕ ಖಂಡಿಸಿದ್ದೆ. ಇಷ್ಟಾದರೂ  ವಿಚಾರಣೆಯಲ್ಲಿ ನನಗೆ ಅತ್ಯಧಿಕ ಪ್ರಶ್ನೆಗಳನ್ನು ಕೇಳಲಾಯಿತು.

ಗೌರಿ ಲಂಕೇಶ್‌ ನನ್ನ ವಿರುದ್ಧ ಬರೆದ ಲೇಖನಗಳಿಗೂ ನಾನು ಪ್ರತಿಕ್ರಿಯೆ ನೀಡಿರಲಿಲ್ಲ. ಅದರ ಅಗತ್ಯವೂ ನನಗೆ ಇರಲಿಲ್ಲ. ಹೀಗಿರುವಾಗ ನನಗೂ ಗೌರಿ ಹತ್ಯೆಗೂ ಏನು ಸಂಬಂಧ? ಗೌರಿ ಲಂಕೇಶ್‌ ಸರ್ಕಾರ ಸೇರಿದಂತೆ ಕೆಲ ವ್ಯಕ್ತಿಗಳ ವಿರುದ್ಧ ತಮ್ಮ ಲೇಖನಗಳ ಮೂಲಕ ಟೀಕಿಸಿದ್ದಾರೆ. ಅವರನ್ನು ಸಹ ಎಸ್‌ಐಟಿ ವಿಚಾರಣೆ ನಡೆಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಕೌಟುಂಬಿಕ ಕಲಹ ಇಲ್ಲ
ಪ್ರಕರಣದಲ್ಲಿ ಕೌಟುಂಬಿಕ ಕಲಹ ಇಲ್ಲ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಎಲ್ಲ ಸಂಬಂಧಿಕರ ವಿಚಾರಣೆಯಲ್ಲಿ ಯಾವುದೇ ಗಲಾಟೆ ವಿಚಾರಗಳಿಲ್ಲವೆಂದು ಸ್ಪಷ್ಟವಾಗಿದೆ. ಅವರ ಆಸ್ತಿ ಹಂಚಿಕೆ ವಿಚಾರ ಗೊಂದಲ ಬಗೆ ಹರಿದಿದೆ. 2005ರಲ್ಲಿ ಸಹೋದರ ಇಂದ್ರಜಿತ್‌ ಲಂಕೇಶ್‌ ಪಿಸ್ತೂಲ್‌ ತೋರಿಸಿದ್ದ ಗಲಾಟೆ ಆಗಲೇ ಹಿರಿಯ ಸಮ್ಮುಖದಲ್ಲಿ ಮುಕ್ತಾಯವಾಗಿದೆ. ಘಟನೆ ಬಳಿಕ ಇಂದ್ರಜಿತ್‌ ಲಂಕೇಶ್‌ ಪಿಸ್ತೂಲ್‌ ಮಾರಾಟ ಮಾಡಿದ್ದರು. ಈ ದಾಖಲೆಗಳನ್ನು ಇದೀಗ ಇಂದ್ರಜಿತ್‌ ಲಂಕೇಶ್‌ ಎಸ್‌ಐಟಿಗೆ ತೋರಿಸಿದ್ದಾರೆ. ಇದೇ ವೇಳೆ ನೆಲಮಂಗಲದ ಆಸ್ತಿ ವಿಚಾರದಲ್ಲಿ ಗಲಾಟೆಯಾಗಿತ್ತು. ಬಳಿಕ ಇಂದ್ರಜಿತ್‌ ಸೂಚನೆ ಮೇರೆಗೆ ರಿಯಲ್‌ ಎಸ್ಟೇಟ್‌ ಉದ್ಯಮಿ ಅರುಣ್‌ ಗೌರಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿತ್ತು. ಆದರೆ, ತಾಯಿ ಇಂದಿರಾ ಅವರು ಮಧ್ಯ ಪ್ರವೇಶಿಸಿ ಗಲಾಟೆ ಇತ್ಯರ್ಥ ಪಡಿಸಿದ್ದರು. ಹೀಗಾಗಿ ಕೌಟುಂಬಿಕ ಪ್ರಕರಣದಲ್ಲಿ ಯಾವುದೇ ಘರ್ಷಣೆಗಳಿಲ್ಲ ಎಂಬುದು ತಿಳಿದು ಬಂದಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಆದರೆ ವಿಚಾರಣೆಗೆ ಹಾಜರಾಗಬೇಕಾದ ಅರುಣ್‌ ಮುಖ್ಯಮಂತ್ರಿ ಕಚೇರಿಯಿಂದ ಕರೆ ಮಾಡಿಸಿ ವಿಚಾರಣೆಯಿಂದ ರಿಯಾಯಿತಿ ಕೇಳಿಕೊಂಡಿದ್ದ ಎನ್ನಲಾಗಿದೆ. ಆದರೆ, ಇತ್ತ ಕರೆ ಸ್ವೀಕರಿಸಿದ ಎಸ್‌ಐಟಿ ಅಧಿಕಾರಿ, ದಯವಿಟ್ಟು ಅವರನ್ನು ವಿಚಾರಣೆಗೆ ಕಳುಹಿಸಿಕೊಡಿ. ನಾವು ಅವರನ್ನು ಬಂಧಿಸುವುದಿಲ್ಲ ಎಂದು ಹೇಳಲಾಯಿತು ಎನ್ನಲಾಗಿದೆ.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.