ವ್ಹೀಲಿಂಗ್ ತಡೆಯಲು ಹೋದ ಪೇದೆಗೆ ಬೈಕ್ ಡಿಕ್ಕಿ
Team Udayavani, Apr 22, 2019, 3:00 AM IST
ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸ್ ಪೇದೆಗೇ ಬೈಕ್ ಡಿಕ್ಕಿ ಹೊಡೆಸಿ ದುಷ್ಕರ್ಮಿ ಪರಾರಿಯಾದ ಘಟನೆ ಯಲಹಂಕದಲ್ಲಿ ನಡೆದಿದೆ.
ಬೈಕ್ ಡಿಕ್ಕಿಯಿಂದ ಗಾಯಗೊಂಡಿರುವ ಪೊಲೀಸ್ ಪೇದೆ ಮರ್ತಾಂಡಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಠಾಣೆ ಪೊಲೀಸರು, ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಇತ್ತೀಚೆಗೆ ಯುವಕರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದು, ವಾಹನಸವಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಮಾರ್ತಾಂಡಪ್ಪ ಹಾಗೂ ಇತರೆ ಸಿಬ್ಬಂದಿ ಭಾನುವಾರ ಮುಂಜಾನೆ 3.30ರ ಸುಮಾರಿಗೆ ಜಕ್ಕೂರು ಜಂಕ್ಷನ್ ಸಮೀಪ ಗಸ್ತಿನಲ್ಲಿದ್ದರು. ಈ ವೇಳೆ ಯುವಕರ ಗುಂಪು ಬೈಕ್ ವ್ಹೀಲಿಂಗ್ ಮಾಡಿಕೊಂಡು ಬಂದಿದೆ.
ಪೊಲೀಸರನ್ನು ಕಂಡ ಕೂಡಲೇ ಹಲವರು ಬೈಕ್ ತಿರುಗಿಸಿಕೊಂಡು ಪರಾರಿಯಾಗಿದ್ದಾರೆ. ಒಬ್ಬ ಮುಂದೆ ಬರುತ್ತಿದ್ದ ಯುವಕನನ್ನು ಪೊಲೀಸರು ತಡೆಯಲು ಯತ್ನಿಸಿದಾಗಲೇ ಪೇದೆ ಮಾರ್ತಾಂಡಪ್ಪನಿಗೆ ಡಿಕ್ಕಿ ಹೊಡೆಸಿದ ಯುವಕ ಪರಾರಿಯಾಗಿದ್ದಾನೆ.
ಬೈಕ್ ಡಿಕ್ಕಿಯಾಗಿ ಕೆಳಗೆ ಬಿದ್ದ ಮಾರ್ತಾಂಡಪ್ಪ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಆರೋಪಿ ಬೈಕ್ ನಂಬರ್ ಆಧರಿಸಿ ಆತನ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾ ಕ್ಯಾಂಟೀನ್ಗೆ ಇಸ್ಕಾನ್ ಊಟ; ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ
ತಾಜಾ ಮಾವು, ಹಲಸು ಬೇಕಾ?ಮೇಳಕ್ಕೆ ಬನ್ನಿ;ಲಾಲ್ಬಾಗ್ನಲ್ಲಿ ಜೂ.13ರವರೆಗೆ ಪ್ರದರ್ಶನ, ಮಾರಾಟ
ಸ್ತ್ರೀಯರ ವೇಷದಲ್ಲಿ ಫೈನಾನ್ಸ್ನಲ್ಲಿ ಕಳವಿಗೆ ಯತ್ನ: ಸೈರನ್ ಶಬ್ದ ಕೇಳಿ ಆರೋಪಿಗಳು ಪರಾರಿ
ಮೆಡಿಕಲ್ ಸೀಟ್ ನೆಪದಲ್ಲಿ ವಂಚನೆ: ವಂಚಿಸಿದ ಹಣ ಕೇಳಿದ್ದಕ್ಕೆ ಹನಿಟ್ರ್ಯಾಪ್
ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು