ಬೆಂಗಳೂರು: ಮಳೆಯಿಂದ ಬೈಕ್ ಸ್ಕಿಡ್ ಆಗಿ ಕೆಳಕ್ಕೆ ಬಿದ್ದವನ ಮೇಲೆ ಹರಿದ ಟಿಪ್ಪರ್: ಸವಾರ ಸಾವು
ಹಬ್ಬಕ್ಕೆ ಹೊಸಬಟ್ಟೆ ಖರೀದಿ ಮಾಡಿ ವಾಪಾಸ್ ಬರುವಾಗ ದುರಂತ
Team Udayavani, Apr 20, 2022, 1:16 PM IST
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಹರಿದ ಹಿನ್ನೆಲೆಯಲ್ಲಿ ಮೆಕ್ಯಾನಿಕ್ ಮೃತಪಟ್ಟಿರುವ ಘಟನೆ ಕಾರ್ಪೋರೆಷನ್ ಸರ್ಕಲ್ ಬಳಿಯ ಪಲ್ಲವಿ ಥಿಯೇಟರ್ ಬಸ್ ನಿಲ್ದಾಣದ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ಸಿಟಿ ಮಾರುಕಟ್ಟೆಯ ಮೆಕ್ಯಾನಿಕ್ ಮೊಹಮ್ಮದ್ ಆಲಿ ಜಿನ್ನಾ (22) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಆತನ ಸ್ನೇಹಿತ ಮುಬಾರಕ್ ಅಹಮದ್ (20) ತೀವ್ರವಾಗಿ ಗಾಯ ಗೊಂಡು ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಚಿಂತಾಜಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಬಿಬಿಎಂಪಿ ಕಸದ ಲಾರಿಗೆ ತಿಂಗಳಲ್ಲಿ ಮೂವರು ಸಾವು: ಯಮರೂಪಿ ಲಾರಿಗೆ ಇನ್ನೆಷ್ಟು ಬಲಿಯಾಗಬೇಕು?
ರಂಜಾನ್ ಹಬ್ಬಕ್ಕೆ ಶಿವಾಜಿನಗರದಲ್ಲಿ ಹೊಸಬಟ್ಟೆಗಳನ್ನು ತೆಗೆದುಕೊಂಡು ಸ್ಕೂಟರ್ನಲ್ಲಿ ಇವರಿಬ್ಬರೂ ಸಿಟಿ ಮಾರುಕಟ್ಟೆಗೆ ಮಧ್ಯರಾತ್ರಿ 12 ಗಂಟೆಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯದ ಪಲ್ಲವಿ ಥಿಯೇಟರ್ ಬಸ್ ನಿಲ್ದಾಣದ ಬಳಿ ಮಳೆಯಿಂದ ಮೋಟರ್ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ.
ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಹರಿದು ಮೊಹಮ್ಮದ್ ಆಲಿ ಜಿನ್ನಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮುಬಾರಕ್ ಅಹಮದ್ ಸೊಂಟದ ಭಾಗ ಛಿದ್ರವಾಗಿದೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ