ಮದ್ಯಕ್ಕಾಗಿ ಬೈಕ್ ಕಳ್ಳತನ: ಇಬ್ಬರ ಬಂಧನ, ಓರ್ವ ಪರಾರಿ
Team Udayavani, Aug 16, 2022, 12:03 PM IST
ಬೆಂಗಳೂರು: ಮದ್ಯ ಖರೀದಿಗಾಗಿ ಹಣ ಹೊಂದಿಸಲು ಬೈಕ್ಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.
ಹುಳಿಮಾವು ನಿವಾಸಿ ನದೀಂ ಅಹಮ್ಮದ್ ಹಾಗೂ ಗುಲಾಂ ಹುಸೇನ್ ಬಂಧಿತರು. ಮತ್ತೂಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ 2 ಆಟೋ, 6 ದ್ವಿಚಕ್ರ ವಾಹನ ಹಾಗೂ 1 ಕಾರು ಜಪ್ತಿ ಮಾಡಲಾಗಿದೆ.
ಪದೇ ಪದೆ ಅಪರಾಧ ಎಸಗುತ್ತಿದ್ದ ಆರೋಪಿಗಳು, ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಜಾಮೀನು ಪಡೆದು ಹೊರ ಬಂದಿದ್ದರು. ಮದ್ಯ ಖರೀದಿಗೆಹಣ ಹೊಂದಿಸಲು ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆನಿಲ್ಲಿಸುತ್ತಿದ್ದ ವಾಹನಗಳನ್ನು ಕದಿಯುತ್ತಿದ್ದರು. ಅವುಗಳ ನಂಬರ್ ಪ್ಲೇಟ್ ಬದಲಾಯಿಸಿ, ಕಡಿಮೆ ಬೆಲೆಗೆ ಮಾರುತ್ತಿದ್ದರು. ಕೆಲ ಮನೆಗಳಲ್ಲೂ ಆರೋಪಿಗಳು ಕಳ್ಳತನ ಮಾಡಿರುವುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ