![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವರ್ಷದ ಬಳಿಕ ಬೈಕ್ ಕಳ್ಳನ ಬಂಧನ
Team Udayavani, Jul 4, 2018, 12:41 PM IST
![arrest.jpg](https://www.udayavani.com/wp-content/uploads/2018/07/4/arrest.jpg)
ಬೆಂಗಳೂರು: ಒಎಲ್ಎಕ್ಸ್ ಜಾಹಿರಾತು ನೋಡಿ ಬೈಕ್ ಖರೀದಿಸಲು ಬಂದು ಟೆಸ್ಟ್ಡ್ರೈವ್ಗೆಂದು ಬೈಕ್ ಕದ್ದೊಯ್ದಿದ್ದ ಆರೋಪಿಯನ್ನು ಒಂದು ವರ್ಷದ ಬಳಿಕ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿ ಉಪನಗರದ ಭರತ್ (27)ಬಂಧಿತ. ಆರೋಪಿಯಿಂದ 2.50 ಲಕ್ಷ ರೂ. ಮೌಲ್ಯದ 3 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ದೇವನಹಳ್ಳಿಯ ಪ್ರೀತಂ ತಮ್ಮ ಬೈಕ್ ಮಾರಾಟ ಮಾಡುವುದಾಗಿ 2017ರಲ್ಲಿ ಒಎಲ್ಎಕ್ಸ್ನಲ್ಲಿ ಜಾಹಿರಾತು ಹಾಕಿದ್ದರು. ಇದನ್ನು ಗಮನಿಸಿದ ಆರೋಪಿ ಮೇ. 13 ರಂದು ಪ್ರೀತಂಗೆ ಕರೆ ಮಾಡಿ 45,500 ರೂ.ಗೆ ಬೈಕ್ ಖರೀದಿ ಮಾಡುವುದಾಗಿ ತಿಳಿಸಿದ್ದು, ಯಲಹಂಕದ ಸರ್ಕಾರಿ ಆಸ್ಪತ್ರೆ ಬಳಿ ನೀಡುವಂತೆ ಹೇಳಿದ್ದ. ಅದರಂತೆ ಪ್ರೀತಂ, ಭರತ್ ಹೇಳಿದ ಸ್ಥಳಕ್ಕೆ ಬೈಕ್ ಕೊಂಡೊಯ್ದಿದ್ದಾರೆ.
ಬಳಿಕ ಸ್ಥಳಕ್ಕೆ ಬಂದ ಆರೋಪಿ ಬೈಕ್ನ್ನು ಟೆಸ್ಟ್ಡ್ರೈವ್ ಮಾಡುವುದಾಗಿ ಹೇಳಿ ತೆಗೆದುಕೊಂಡು ಹೋಗಿದ್ದಾನೆ. ಒಂದು ಗಂಟೆಯಾದರೂ ವಾಪಸ್ ಬಂದಿಲ್ಲ. ಇದರಿಂದ ಅನುಮಾನಗೊಂಡು ಆರೋಪಿಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈ ಸಂಬಂಧ ಪ್ರೀತಂ ಮೇ.20ರಂದು ಯಲಹಂಕ ಠಾಣೆಗೆ ದೂರು ನೀಡಿದ್ದರು. ಆರೋಪಿಯ ಪತ್ತೆಗಾಗಿ ವಿಶೇಷ ತಂಡ ಕೂಡ ರಚಿಸಲಾಗಿತ್ತು.
ಒಂದು ವರ್ಷದ ಬಳಿಕ ಪತ್ತೆ: ತನಿಖೆ ಆರಂಭಿಸಿದ ವಿಶೇಷ ತಂಡ ಆರೋಪಿಯ ಮೊಬೈಲ್ ಸಂಖ್ಯೆ ಆಧಾರದ ಮೇಲೆ 1 ವರ್ಷದ ಬಳಿಕ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಆರೋಪಿಯ ಬಂಧಿನದಿಂದ ಮತ್ತೆರಡು ಬೈಕ್ ಅಪಹರಣ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.