ಸರ್ಪಗಾವಲಿನಲ್ಲಿ ಬಿನ್ನಿಪೇಟೆ ಚುನಾವಣೆ


Team Udayavani, Jun 19, 2018, 11:58 AM IST

sarpagavalu.jpg

ಬೆಂಗಳೂರು: ಕೆಲ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತವಾಗಿ ನಡೆದ ಬಿನ್ನಿಪೇಟೆ ವಾರ್ಡ್‌ ಉಪಚುನಾವಣೆಯಲ್ಲಿ ಶೇ.43.54ರಷ್ಟು ಮತದಾನವಾಗಿದ್ದು, ಪೋಲಿಸರ ಸರ್ಪಗಾವಲಿನ ನಡುವೆ ಜನರು ತಮ್ಮ ಹಕ್ಕು ಚಲಾಯಿಸಿದರು.

ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದ ಬಿನ್ನಿಪೇಟೆ ವಾರ್ಡ್‌ ಉಪಚುನಾವಣೆ ಮತದಾನದ ವೇಳೆ ಮೂರು ಪಕ್ಷಗಳ ಕಾರ್ಯಕರ್ತರ ನಡುವೆ ಕಿತ್ತಾಟ, ಆರೋಪ-ಪ್ರತ್ಯಾರೋಪ, ಪ್ರತಿಭಟನೆಗಳು ನಡೆದಿದ್ದು, ಅಂತಿಮವಾಗಿ ಜೆಡಿಎಸ್‌ ಅಭ್ಯರ್ಥಿ ಐಶ್ವರ್ಯ ತಂದೆ ಬಿಟಿಎಸ್‌ ನಾಗರಾಜ್‌ ವಿರುದ್ಧ ದೂರು ದಾಖಲಾಗಿದೆ.

ಚುನಾವಣೆಯ ಮುನ್ನಾ  ದಿನದವರೆಗೆ ಯಾವುದೇ ಗದ್ದಲವಿಲ್ಲದೆ ನಡೆದಿದ್ದ ಚುನಾವಣಾ ಪ್ರಕ್ರಿಯೆ, ಭಾನುವಾರ ರಾತ್ರಿ ಹಾಗೂ ಮತದಾನದ ದಿನ ಮೂರು ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟದಿಂದ ವಾರ್ಡ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪರಿಣಾಮ ನೂರಾರು ಪೊಲೀಸರ ಕಣ್ಗಾವಲಿನ ನಡುವೆಯೂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಭಾನುವಾರ ರಾತ್ರಿ ಕೆ.ಪಿ.ಅಗ್ರಹಾರದಲ್ಲಿ ಮತದಾರರಿಗೆ ಹಣ ಹಂಚಿಕೆ ಆರೋಪ ವಿಚಾರದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಸುರೇಶ್‌ಕುಮಾರ್‌ಗೆ ಗಾಯವಾಗಿದೆ.

ಮತದಾರರನ್ನು ಸೆಳೆಯಲು ಸುರೇಶ್‌ ಹಣ ಹಂಚುತ್ತಿದ್ದ ಎಂದು ಆರೋಪಿಸಿ ಜೆಡಿಎಸ್‌ ಅಭ್ಯರ್ಥಿ ತಂದೆ ಬಿಟಿಎಸ್‌ ನಾಗರಾಜ್‌ ಬೆಂಬಲಿಗರು ಆತನ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಆತನ ಹಣೆಗೆ ಗಾಯವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ನಂತರದಲ್ಲಿ ಬಿಟಿಎಸ್‌ ನಾಗರಾಜ್‌ ವಿರುದ್ಧ ಕೆ.ಪಿ.ಅಗ್ರಹಾರದಲ್ಲಿ ಸುರೇಶ್‌ ದೂರು ದಾಖಲಿಸಿದ್ದಾರೆ.

ಮತದಾನದ ವೇಳೆಯೂ ಗಲಾಟೆ: ಕಾರ್ಯಕರ್ತರ ನಡುವಿನ ಮಾರಾಮಾರಿಯಿಂದ ವಾರ್ಡ್‌ನಾದ್ಯಂತ 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನೇಮಿಸಲಾಗಿತ್ತು. ಅದರ ನಡುವೆಯೂ ಹಣ ಹಂಚುತ್ತಿದ್ದ ಎಂದು ಆರೋಪಿಸಿ ಬೈಕ್‌ನಲ್ಲಿ ಹೋಗುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತ ಸುಧಾಕರ್‌ ಎಂಬಾತನ ಮೇಲೆ ಬಿಟಿಎಸ್‌ ನಾಗರಾಜ್‌ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರೊಂದಿಗೂ ಜೆಡಿಎಸ್‌ ಕಾರ್ಯಕರ್ತರು ವಾಗ್ವಾದ ನಡೆಸಿ ತಳ್ಳಾಡಿದ ಘಟನೆ ನಡೆದಿದೆ. 

ಕಾಂಗ್ರೆಸ್‌ನಿಂದ ಪ್ರತಿಭಟನೆ: ನಾಗರಾಜ್‌ ವಿರುದ್ಧ ದೂರು ದಾಖಲಾದ ನಂತರವೂ ಬಂಧಿಸಿಲ್ಲವೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕೆ.ಪಿ.ಅಗ್ರಹಾರದಲ್ಲಿ ಪ್ರತಿಭಟನೆ ನಡೆಸಿದರು. ಮತದಾನದ ವೇಳೆಯೂ ಹಲ್ಲೆ ನಡೆಸಿದ್ದು, ಯಾಕೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪ್ರತಿಭಟನೆ ನಡೆಸುವಂತಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್‌ ಪಡೆದಿದ್ದಾರೆ. 

ದಿನೇಶ್‌ ಗುಂಡೂರಾವ್‌ ಭೇಟಿ: ಗಲಾಟೆಯಿಂದ ಹಲ್ಲೆಗೊಳಗಾದ ಕಾಂಗ್ರೆಸ್‌ ಕಾರ್ಯಕರ್ತ ಸುರೇಶ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೋಮವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಬಿಟಿಎಸ್‌ ನಾಗರಾಜ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ ಮುಖಂಡರಾಗಿದ್ದ ನಾಗರಾಜ್‌ ವಿಧಾನಸಭಾ ಚುನಾವಣೆಗೆ ವಾರವಿದ್ದಾಗ ನಮಗೆ ಮೋಸ ಮಾಡಿ ಜೆಡಿಎಸ್‌ ಸೇರಿದ್ದಾರೆ. ಅಂತಹವರಿಗೆ ಹೇಗೆ ಟಿಕೆಟ್‌ ನೀಡಲು ಸಾಧ್ಯ. ಇದೀಗ ಗೂಂಡಾವರ್ತನೆ ಮೂಲಕ ತಮ್ಮ ಮಗಳನ್ನು ಗೆಲ್ಲಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ದೂರಿದರು. 

ಭಯದ ವಾತಾವರಣ, ತಗ್ಗಿದ ಮತ ಪ್ರಮಾಣ: ಭಾನುವಾರ ರಾತ್ರಿ ಹಾಗೂ ಮತದಾನ ದಿನ ಕಾಂಗ್ರೆಸ್‌ ಕಾರ್ಯಕರ್ತರ ಮೇಲಿನ ಹಲ್ಲೆಯಿಂದಾಗಿ ವಾರ್ಡ್‌ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಪರಿಣಾಮ ವಾರ್ಡ್‌ನಲ್ಲಿ ಒಟ್ಟು 34,582 ಮತದಾರರಿದ್ದರೂ, ಬೆಳಗ್ಗೆ 9ರ ವೇಳೆ ಶೇ.2ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆವರೆಗೆ ಶೇ. 26 ಮತದಾನವಾಗಿದ್ದರೆ, ಅಂತಿಮವಾಗಿ ಸಂಜೆ 5 ಗಂಟೆಗೆ ಶೇ. 43.54ರಷ್ಟು ಮತದಾನವಾಗಿದೆ. ಬುಧವಾರ (ಜೂ.20) ಬೆಳಗ್ಗೆ 8 ರಿಂದ ಗೃಹ ವಿಜ್ಞಾನ ಕಾಲೇಜಿನಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.