ಹಕ್ಕಿ ಜ್ವರ: ರಾಜ್ಯಕ್ಕೆ ಇಂದು ಕೇಂದ್ರ ತಂಡ
Team Udayavani, Jan 4, 2018, 7:45 AM IST
ಬೆಂಗಳೂರು: ಹಕ್ಕಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರದ ತಂಡ ಗುರುವಾರ ನಗರಕ್ಕೆ ಆಗಮಿಸುತ್ತಿದೆ ಎಂದು ಪಶು ಸಂಗೋಪನೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ಕುಮಾರ್ ಕತ್ರಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಈ ಸಂಬಂಧ ಮೇಯರ್ ಸಂಪತ್ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೇಂದ್ರದ ತಂಡ ಆಗಮಿಸಿ ಪರಿಶೀಲನೆ ನಂತರ ಅವರು ನೀಡುವ ಸಲಹೆ ಅನುಷ್ಟಾನಕ್ಕೆ ತರುತ್ತೇವೆ ಎಂದು ಹೇಳಿದರು.
ಹಕ್ಕಿ ಜ್ವರ ಕೋಳಿ ಫಾರಂನಿಂದ ಹರಡಿರುವ ಸಾಧ್ಯತೆ ಕಡಿಮೆ. ಮಾರಾಟ ಮಾಡುವವರ ಅಂಗಡಿಗಳಿಂದ ಹಬ್ಬಿರಬಹುದು. ಇಂತಹ ಶಂಕಿತ ಅಂಗಡಿಗಳನ್ನು ಮುಚ್ಚಿಸಿದ್ದೇವೆ ಎಂದು ತಿಳಿಸಿದರು.
ಹಕ್ಕಿಜ್ವರದ ಮೂಲ ಪತ್ತೆಯಾಗಬೇಕಿದೆ. ಈಗಾಗಲೇ ಹಕ್ಕಿ ಜ್ವರ ಕಾಣಿಸಿಕೊಂಡ 1 ಕಿ.ಮೀ. ವ್ಯಾಪ್ತಿಯ 71 ಕೋಳಿಗಳನ್ನು ಕೊಲ್ಲಲಾಗಿದೆ ಎಂದರು.
ನಗರದಲ್ಲಿ ಹಕ್ಕಿ ಜ್ವರ ಹರಡದಂತೆ ಕ್ರಮ ಕೈಗೊಳ್ಳಲಾಗಿದ್ದು ಬಿಬಿಎಂಪಿ, ಪಸು ಸಂಗೋಪನೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಹೇಳಿದರು. ಡಿ.15 ರ ನಂತರ ಇದೇ ರೀತಿ ಕೋಳಿಗಳು ಮೃತಪಟ್ಟಿರುವ ಮಾಹಿತಿ ಇದ್ದರೆ ಇಲಾಖೆಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಹಕ್ಕಿ ಜ್ವರ ವಿಚಾರದಲ್ಲಿ ಜನರು ಆತಂಕಪಡಬಾರದು. ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರಿಗೆ ಸೂಚನೆ ನೀಡಲಾಗಿದೆ. ಪ್ರತಿ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ನೂರು ಜನ ಆರೋಗ್ಯ ಕಾರ್ಯಕರ್ತರನ್ನು ಸರ್ವೆಕ್ಷಣೆಗಾಗಿ ನಿಯೋಜಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಂದಲೂ ಮಾಹಿತಿ ಪಡೆಲಾಗುತ್ತಿದೆ ಎಂದು ಹೇಳಿದರು.
ಸಹಾಯವಾಣಿ
ಪಸು ಸಂಗೋಪನೆ ಇಲಾಖೆಯಿಂದ ಹಕ್ಕಿ ಜ್ವರ ನಿಯಂತ್ರಣ ಸಂಬಂಧ ಎಲ್ಲ ಗ್ರಾಮ ಪಂಚಾಯಿಗಳಿಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸಹಾಯವಾಣಿ ಕೇಂದ್ರ 18004250012/080 23417100 ಸ್ಥಾಪಿಸಲಾಗಿದೆ.
ಅರೆಬೆಂದ ಕೋಳಿ ಮಾಂಸ, ಮೊಟ್ಟೆ ಸೇವನೆ ಬೇಡ
ಕೋಳಿ ಮಾಂಸ ತಿನ್ನುವ ಮೊದಲು ಜಾಗೃತರಾಗಿರಬೇಕು. ಅರೆಬೆಂದ, ಸರಿಯಾಗಿ ಬೇಯದ ಕೋಳಿ ಮಾಂಸ ಅಥವಾ ಮೊಟ್ಟೆ ತಿನ್ನಬಾರದು. ಕನಿಷ್ಠ 70 ಡಿಗ್ರಿ ಸೆಂಟಿಗ್ರೇಡ್ನಲ್ಲಿ ಬೇಯ್ದ ಕೋಳಿ ಮಾಂಸ ಮತ್ತು ಮೊಟ್ಟೆ ಸುರಕ್ಷಿತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಸೇs… ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ