ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Team Udayavani, May 3, 2018, 7:30 AM IST
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೋಮು ಪ್ರಚೋದನೆ ಇರುವ ಅಂಶಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸುತ್ತದೆ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ಪೂರಕವಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನೇತೃತ್ವದ ನಿಯೋಗ ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ಮುಸ್ಲಿಮರ ಮತಗಳನ್ನು ಸೆಳೆಯುವುದಕ್ಕಾಗಿ “ಕೋಮು ಪ್ರಚೋದನೆಯ ದಾಳ’ ಉರುಳಿಸುತ್ತಿದೆ. ಈ ಬಗ್ಗೆ ಕರ್ನಾಟಕ ಮುಖ್ಯ ಚುನಾ ವಣಾಧಿಕಾರಿಗೆ ದೂರು ನೀಡಲಾಗಿ ದ್ದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಮುಸ್ಲಿಮರು ಹೆಚ್ಚಿರುವ ಸ್ಥಳಗಳಲ್ಲಿ ಕಾಂಗ್ರೆಸ್ ಮುಸ್ಲಿಮರ ಸೇವೆಗೆ ಸಿದ್ಧವಿದ್ದು, ಇಸ್ಲಾಂ ಆಧಾರದ ಮೇಲೆ ಮತ ಹಾಕುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರಜಾ ಪ್ರಾತಿನಿಧಿಕ ಕಾಯ್ದೆಯನ್ವಯ ಸರಿಯಲ್ಲ ಎಂದು ಬಿಜೆಪಿ ನಿಯೋಗ ಪ್ರತಿಪಾದಿಸಿದೆ.