ಮಾದಕ ಜಾಲದಲ್ಲಿ ಬಿಜೆಪಿ: ಕೈ ಟ್ವೀಟ್‌ ವಾರ್‌


Team Udayavani, Feb 21, 2021, 11:31 AM IST

ಮಾದಕ ಜಾಲದಲ್ಲಿ ಬಿಜೆಪಿ: ಕೈ ಟ್ವೀಟ್‌ ವಾರ್‌

ಬೆಂಗಳೂರು: ಮಾದಕ ವಸ್ತು ಸಾಗಣೆ ಜಾಲದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿಯ ನಾಯಕರ ಬಗ್ಗೆ ಸರಣಿ ಟ್ವೀಟ್‌ ಮೂಲಕ ಕರ್ನಾಟಕ ಕಾಂಗ್ರೆಸ್‌ ಲೇವಡಿ ಮಾಡಿ ಬಿಜೆಪಿ ಪಕ್ಷವನ್ನು ಪ್ರಶ್ನಿಸಿದೆ.

ಟ್ವಿಟ್ಟರ್‌ನಲ್ಲಿ “ಅಮಲಿನ ಕಮಲ’ (ಬಿಜೆಪಿ ಡ್ರಗ್‌ ಪೆಡ್ಲರ್) ಹೆಸರಿನ ಪೋಸ್ಟ್‌ಗಳ ಪ್ರತಿ ಪ್ರಕರಣದ ಮಾಹಿತಿ ನೀಡಲಾಗಿದೆ. ಜತೆಗೆ ಆರೋಪಿಗಳು ಬಿಜೆಪಿ ನಾಯಕರ ಜತೆ ಇರುವ ಫೋಟೋ ಹಾಕಲಾಗಿದೆ.

ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ಗಳು: “ದೇಶದ ಉದ್ದಗಲದಲ್ಲಿ ಡಗ್ಸ್‌ ಜಾಲದಲ್ಲಿರುವುದೇ ಬಿಜೆಪಿ. ಕರ್ನಾಟಕದ ಸ್ಟಾರ್‌ ಪ್ರಚಾರಕಿಗೆ ಡ್ರಗ್ಸ್‌ ನಂಟು, ಬಂಗಾಳದ ನಾಯಕಿಗೆ ಕೊಕೇನ್‌ ಗಂಟು. ದೇಶದಲ್ಲೆಡೆ ಮಾದಕ ದ್ರವ್ಯಗಳ ಜಾಲವನ್ನು ನಡೆಸುತ್ತಾ ಯುವ ಜನರ ಬದುಕು ಮುಗಿಸುತ್ತಿದೆ ಅಮಲಿನ ಕಮಲ.’

“ಬಿಜೆಪಿಯ ಅನಧಿಕೃತ ವಕ್ತಾರೆ ಕಂಗನಾ ರಾಣಾವತ್‌ ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾಗಿರುವ ವಿಚಾರದಲ್ಲಿ ಪ್ರಕರಣ ದಾಖಲಾಗಿದೆ. ಸ್ವತಃ ಈಕೆಯೇ ಡ್ರಗ್ಸ್‌ ಸೇವನೆಯನ್ನು ಒಪ್ಪಿದ್ದು ಸುದ್ದಿಯಾಗಿತ್ತು. ಆಕೆಯ ಪರ ಇಡೀ ಬಿಜೆಪಿ ಬೆಂಬಲಕ್ಕೆ ನಿಂತಿರುವುದು ಲೋಕಸತ್ಯ. ಅಮಲಿನ ಕಮಲ ಲೀಲೆಗಳು ಒಂದೆರೆಡಲ್ಲ’. “ಮಣಿಪುರದ ಬಿಜೆಪಿ ಮುಖಂಡನ ಭಾರೀ ಪ್ರಮಾಣದ ಡ್ರಗ್ಸ್‌ ದಂಧೆ. ಪೊಲೀಸರು 27 ಕೋಟಿ ರೂ. ಮೊತ್ತದ ಡ್ರಗ್ಸ್‌ನೊಂದಿಗೆ ಆತನನ್ನು ಬಂಧಿಸುತ್ತಾರೆ.

ಮಣಿಪುರದ ಮುಖ್ಯಮಂತ್ರಿ ಪೊಲೀಸರಿಗೆ ಧಮ್ಕಿ ಒತ್ತಡ ಹಾಕುತ್ತಾರೆಂದರೆ ಡ್ರಗ್ಸ್‌ ಜಾಲಕ್ಕೆ ಅಮಲಿನ ಕಮಲ ಕುಮ್ಮಕ್ಕು ಎಷ್ಟಿದೆ ಯೋಚಿಸಿ.’ “ನಟಿ ಹಾಗೂ ಬಿಜೆಪಿಯ ಸ್ಟಾರ್‌ ಪ್ರಚಾರಕಿ ಡ್ರಗ್ಸ್‌ ದಂಧೆಯ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದರು. ಈಕೆಯನ್ನು ರಕ್ಷಿಸಲು ಹಲವು ಬಿಜೆಪಿ ನಾಯಕರು ಮಂತ್ರಿಗಳು ಲಾಬಿ ನಡೆಸಿದ್ದರು. ಅಮಲಿನ ಕಮಲ ಪಕ್ಷದಲ್ಲಿ ಡ್ರಗ್ಸ್‌ ದಂಧೆ ಮೋರ್ಚಾ ಇದೆಯಾ ಎನ್ನುವ ಅನುಮಾನ ಮೂಡುತ್ತಿದೆ.’

“ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಗುಜರಾತಿ ನಿಂದ ಮಣಿಪುರದವರೆಗೆ ದೇಶಾದ್ಯಂತ ಡ್ರಗ್ಸ್‌ ಜಾಲ ಹಡುವುದರಲ್ಲಿ ಅಮಲಿನ ಕಮಲ ಪಾತ್ರ ದೊಡ್ಡದು. ಹಾಸ್ಯನಟಿ ಭಾರತಿ ಸಿಂಗ್‌ ಡ್ರಗ್ಸ್‌ ಸೇವನೆ ಸಾಗಣೆ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದರು. ಈಕೆಗೂ ಬಿಜೆಪಿಗೂ ನಿಕಟ ಸಂಪರ್ಕ ಮತ್ತು ಸ್ಟಾರ್‌ ಪ್ರಚಾರಕಿಯಾಗಿದ್ದರು.’

“ತಮಿಳುನಾಡಿನ ಬಿಜೆಪಿ ಮುಖಂಡ ಅದೈಕ್ಕಲರಾಜ್‌ 1,800 ಕೆ.ಜಿ. ಅಫೀಮು ಸಾಗಣೆಯಲ್ಲಿ ಬಂಧಿಸಲ್ಪಟ್ಟಿದ್ದರು. ತಮ್ಮ ಬಂಡವಾಳ ಬಯಲಾಗುತ್ತಿದ್ದಂತೆ ಬಿಜೆಪಿ ಆತನ ಉಚ್ಛಾಟನೆ ನಾಟಕವಾಡಿತ್ತು. ದೇಶದ ಯುವ ಜನರನ್ನು ದಾರಿ ತಪ್ಪಿಸುವುದೇ ಬಿಜೆಪಿ ಕಾಯಕ.’ “ಕಲಬುರಗಿಯಲ್ಲಿ ಭಾರಿ ಪ್ರಮಾಣದ ಗಾಂಜಾ ದಂಧೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತನ ಬಂಧನವಾಗಿತ್ತು. ಬಿಜೆಪಿ ನಾಯಕರು ಆತನ ರಕ್ಷಣೆಗಾಗಿ ಪ್ರಯತ್ನ ನಡೆಸಿದ್ದರು. ಇದು “ಅಮಲಿನ ಕಮಲ’ದ ಮಾದಕ ಜಾಲ ದೇಶಾದ್ಯಂತ, ಹಬ್ಬಿರುವುದಕ್ಕೆ ಸಾಕ್ಷಿ.’

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.