ಸಿಎಂ ಬಳಸಿದ ಪದ ವಿರುದ್ಧ ರಾಜ್ಯಪಾಲರಿಗೆ ದೂರು 


Team Udayavani, Sep 22, 2018, 6:00 AM IST

180921kpn73.jpg

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ “ದಂಗೆ’ ಹೇಳಿಕೆ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಡೀ ಪ್ರಕರಣವನ್ನು ಜೀವಂತವಾಗಿಡಲು ತೀರ್ಮಾನಿಸಿರುವ ಬಿಜೆಪಿ, ರಾಜಕೀಯ ಅಸ್ತ್ರವಾಗಿಯೂ ಬಳಸಲು ಮುಂದಾಗಿದೆ.

“ಬಿಜೆಪಿ ವಿರುದ್ಧ ದಂಗೆ ಏಳಲು ರಾಜ್ಯದ ಜನತೆಗೆ ಕರೆ ನೀಡಬೇಕಾಗುತ್ತದೆ’ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಯ ವಿರುದ್ಧ ರಾಜ್ಯ ಬಿಜೆಪಿ ಶುಕ್ರವಾರ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದಲ್ಲಿ ರಾಜ್ಯಪಾಲ ವಜೂಭಾಯ್‌ ವಾಲಾ ಅವರನ್ನು ಭೇಟಿಯಾಗಿ, ಮುಖ್ಯಮಂತ್ರಿಯವರ ವಿರುದ್ಧ ಸಂವಿಧಾನ ಬದ್ಧವಾಗಿ ಕ್ರಮ ಕೈಗೊಳ್ಳುವಂತೆ ಕೋರಿದೆ. ಇದಕ್ಕೂ ಮೊದಲು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎಸ್‌.ರಾಜು ಅವರನ್ನು ಭೇಟಿ ಮಾಡಿ, “ರಾಜದ್ರೋಹದ ಪ್ರಕರಣ ದಾಖಲು ಮಾಡಿಕೊಳ್ಳುವಂತೆ’ ದೂರಲಾಗಿದೆ.

ಪ್ರಮಾಣ ವಚನಕ್ಕೆ ವಿರುದ್ಧವಾಗಿ ಸ್ವತಃ ಮುಖ್ಯಮಂತ್ರಿಯವರೇ ದಂಗೆ ಏಳಿ ಎಂದು ಪ್ರಚೋದನೆಗೆ ಕರೆ ನೀಡಿರುವುದು ಗಂಭೀರ ಅಪರಾಧ. ಇದರ ವಿರುದ್ಧ ಐಪಿಸಿ ಸೆಕ್ಷನ್‌ 121, 121ಎ, 122, 123, 124ಎ, ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಅರ್ಹತೆ ಕಳೆದುಕೊಂಡಿದ್ದಾರೆ:
ಈ ಸಂದರ್ಭದಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ ಅವರು, “”ಸಿಎಂ ಕುಮಾರಸ್ವಾಮಿ ಪ್ರಚೋದನೆಯ ಹೇಳಿಕೆ ನೀಡುವ ಮೂಲಕ ಆ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ. ಹಾಗಾಗಿ ರಾಜ್ಯಪಾಲರು ಸಂವಿಧಾನ ಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಆ ಬಗ್ಗೆ ನಮಗೆ ವಿಶ್ವಾಸವಿದೆ” ಎಂದು ಹೇಳಿದರು.

ಸಂಸದೆ ಶೋಭಾ ಕರಂದ್ಲಾಜೆ ನಿಯೋಗದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಹರತಾಳು ಹಾಲಪ್ಪ, ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಇದ್ದರು. ಸದಾನಂದಗೌಡರ ನಿಯೋಗದಲ್ಲಿ ಜಗದೀಶ್‌ ಶೆಟ್ಟರ್‌, ಆರ್‌.ಅಶೋಕ್‌ ಸೇರಿ ಇನ್ನಷ್ಟು ನಾಯಕರಿದ್ದರು.

ದಂಗೆ ಹೇಳಿಕೆ ಜೀವಂತ
ಬಿ.ಎಸ್‌.ಯಡಿಯೂರಪ್ಪ ನಿವಾಸದಲ್ಲಿ ಶುಕ್ರವಾರ ಕಾರ್ಯತಂತ್ರಗಳ ಬಗ್ಗೆ ಬಿರು ಸಿನ ಚರ್ಚೆ ನಡೆಯಿತು. ದಂಗೆ ಹೇಳಿಕೆ ಜೀವಂತ ಇಡುವಂತೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಸಹ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಶೋಭಾ ಕರಂದ್ಲಾಜೆ, ಬಸನಗೌಡ ಪಾಟೀಲ್‌ ಯತ್ನಾಳ್‌, ಸಿ.ಎಂ. ಉದಾಸಿ, ಗೋವಿಂದ ಕಾರಜೋಳ, ರೇಣುಕಾಚಾರ್ಯ, ಹರತಾಳು ಹಾಲಪ್ಪ, ಕುಮಾರ್‌ ಬಂಗಾರಪ್ಪ, ಎಸ್‌.ಆರ್‌. ವಿಶ್ವನಾಥ್‌, ಮಾಡಾಳ್‌ ವಿರೂಪಾಕ್ಷಪ್ಪ ಅವರ ಜತೆ ಸಮಾಲೋಚನೆ ನಡೆಸಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.