ಬಿಜೆಪಿಗೆ ಹೆಚ್ಚು ಸ್ಥಾನ ಖಚಿತ: ಬಿಎಸ್ವೈ
Team Udayavani, Aug 9, 2018, 7:00 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಈ ಚುನಾವಣೆಯಲ್ಲಿ ಒಟ್ಟಿಗಾದರೂ ಹೋಗಲಿ, ಬೇರೆಯಾಗಿ ಆದರೂ ಹೋಗಲಿ. ನಮಗೆ ಸಂಬಂಧವಿಲ್ಲ. ನಮ್ಮ ಪಕ್ಷ ಹೆಚ್ಚು ಸೀಟು ಗೆಲ್ಲುವತ್ತ ನಮ್ಮ ಗಮನ ಇರುತ್ತದೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷ ಗಂಭೀರವಾಗಿಯೇ ಪರಿಗಣಿಸಿದೆ. ಎಲ್ಲ ನಾಯಕರು ಜತೆಗೂಡಿ ಬಿಜೆಪಿಯ ಶಕ್ತಿ ತೋರಿಸಲಿದ್ದೇವೆ ಎಂದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ರಾಜ್ಯದ ಪ್ರಸಕ್ತ ವಿದ್ಯಮಾನಗಳು ಹಾಗೂ ಮುಂದೆ ಇಡಬೇಕಾದ ಹೆಜ್ಜೆಗಳ ಕುರಿತು ಚರ್ಚೆ ಮಾಡಿದ್ದೇನೆ.ನಮ್ಮ ರಾಜ್ಯಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತನಾಡಿದ್ದೇನೆ ಎಂದು ಹೇಳಿದರು.
ಬೀದರ್ನಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದು ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಅದನ್ನೂ ಅವಲೋಕಿಸುತ್ತೇನೆ. ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಡಿಕೆಶಿಗೆ ಅಭದ್ರತೆ
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆಯಿಲ್ಲ. ಹೀಗಾಗಿ, ನಮ್ಮ ಮೇಲೆ ತಪ್ಪು ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೆಲವು ಶಾಸಕರಿಗೆ ಮಂತ್ರಿ ಮಾಡುವ ಭರವಸೆ ನೀಡಿದ್ದರು. ಆದರೆ, ಸಾಧ್ಯವಾಗಲಿಲ್ಲ. ಇದೀಗ ಶಾಸಕರು ಅವರ ಬೆನ್ನು ಬಿದ್ದಿದ್ದಾರೆ. ಹೀಗಾಗಿ, ಶಿವಕುಮಾರ್ಗೆ ಅಭದ್ರತೆ ಕಾಡುತ್ತಿದೆ. ಕಾಂಗ್ರೆಸ್ ಶಾಸಕರು ನಮ್ಮ ಟಚ್ನಲ್ಲಿ ಇದ್ದಾರೆ ಅಥವಾ ಇಲ್ಲ ಎಂದು ನಾವು ಹೇಳುವುದು ಸರಿಯಲ್ಲ.
– ಶ್ರೀರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ