ಬಿಜೆಪಿ, ಜೆಡಿಎಸ್‌ ಅಭ್ಯರ್ಥಿ ಬದಲಾವಣೆ


Team Udayavani, May 22, 2018, 6:40 AM IST

bjpjds.jpg

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಕೊನೇ ಕ್ಷಣದಲ್ಲಿ ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳು ಬದಲಾಗಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಹಾಲನೂರು ಎಸ್‌.ಲೇಪಾಕ್ಷಿ ಬದಲು ವೈ.ಎ.ನಾರಾಯಣಸ್ವಾಮಿ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದಿಂದ ಜೆಡಿಎಸ್‌ನ ಶಿವರಾಮೇಗೌಡ ಬದಲು ಅಚ್ಚೇಗೌಡ ಶಿವಣ್ಣ ಕಣಕ್ಕಿಳಿದಿದ್ದಾರೆ. ಈ ಇಬ್ಬರೂ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಬಿಜೆಪಿಯ ಹಾಲನೂರು ಎಸ್‌.ಲೇಪಾಕ್ಷಿ ಅವರಿಗೆ ಟಿಕೆಟ್‌ ಘೋಷಿಸಲಾಗಿತ್ತು. ಅದರಂತೆ ಅವರು ತಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಪ್ರಚಾರವನ್ನೂ ಕೈಗೊಂಡಿದ್ದರು. ಆದರೆ, ಸೋಮವಾರ ಬೆಳಗ್ಗೆ ಅವರ ಬದಲು ವೈ.ಎ.ನಾರಾಯಣಸ್ವಾಮಿ ಅವರನ್ನು ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ ಬಿಜೆಪಿ ಬಿ ಫಾರಂ ನೀಡಿದೆ.

ನಾರಾಯಣಸ್ವಾಮಿ ಅವರು ಈ ಹಿಂದೆ ಎರಡು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಗೆದ್ದು ಬಂದಿದ್ದರು. ನಂತರದಲ್ಲಿ ಹೆಬ್ಟಾಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ಅವರು ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್‌ನ ರಮೇಶ್‌ ಬಾಬು ಗೆದ್ದಿದ್ದರು. ಇದೀಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಟಾಳ ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದ ನಾರಾಯಣಸ್ವಾಮಿ ಸೋತಿದ್ದರು. 

ಆದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಈಗಲೂ ಹಿಡಿತ ಹೊಂದಿರುವುದರಿಂದ ಮತ್ತು ಗೆಲ್ಲುವ ಅಭ್ಯರ್ಥಿ ಎಂಬ ಕಾರಣಕ್ಕೆ ಹಾಲನೂರು ಲೇಪಾಕ್ಷಿ ಬದಲು ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.

ಇನ್ನೊಂದೆಡೆ ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿಯನ್ನು ಜೆಡಿಎಸ್‌ ಬದಲಾವಣೆ ಮಾಡಿದೆ. ಈ ಕ್ಷೇತ್ರಕ್ಕೆ ಶಿವರಾಮೇಗೌಡ ಮತ್ತು ಅಚ್ಚೇಗೌಡ ಶಿವಣ್ಣ ಅವರು ಆಕಾಂಕ್ಷಿಗಳಾಗಿದ್ದರೂ ಅಂತಿಮವಾಗಿ ಜೆಡಿಎಸ್‌ ಶಿವರಾಮೇಗೌಡರ ಹೆಸರನ್ನು ಹಿಂದೆ ಅಂತಿಮಗೊಳಿಸಿತ್ತು. ಅದರಂತೆ ಅವರು ಸ್ಪರ್ಧೆಗೆ ಸಿದ್ಧವಾಗಿದ್ದರು. ಆದರೆ, ಸೋಮವಾರ ಬೆಳಗ್ಗೆ ಶಿವರಾಮೇಗೌಡ ಬದಲು ಅಚ್ಚೇಗೌಡ ಶಿವಣ್ಣ ಅವರಿಗೆ ಜೆಡಿಎಸ್‌ ಬಿ ಫಾರಂ ನೀಡಿದೆ.

ಅಂತಿಮ ಕ್ಷಣದಲ್ಲಿ ಅಭ್ಯರ್ಥಿ ಬದಲಿಸಲು ಕಾರಣ ತಿಳಿದುಬಂದಿಲ್ಲ. ಆದರೆ, ದೇವೇಗೌಡರ ಸಮ್ಮುಖದಲ್ಲಿ ಶಿವರಾಮೇಗೌಡರ ಜತೆಗೆ ಚರ್ಚಿಸಿಯೇ ನನ್ನನ್ನು ಅಯ್ಕೆ ಮಾಡಲಾಯಿತು ಎಂದು ಅಚ್ಚೇಗೌಡ ಶಿವಣ್ಣ ಹೇಳಿದ್ದಾರೆ. ಅಲ್ಲದೆ, ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ ಅವರು ಸೋಮವಾರ ಮತ್ತೂಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.