ನೀರಿಗಾಗಿ ಬಿಜೆಪಿ ಸದಸ್ಯರ ಸಭಾತ್ಯಾಗ


Team Udayavani, Mar 31, 2019, 12:23 PM IST

neerigagi

ಬೆಂಗಳೂರು: ನಗರದ ಜನರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಲ್ಲಿ ಜಲಮಂಡಳಿಹಾಗೂ ಮಂಡಳಿಗೆ ಸೂಚನೆ ನೀಡುವಲ್ಲಿ ಬಿಬಿಎಂಪಿ ವಿಫ‌ಲವಾಗಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಪಾಲಿಕೆಯ ಕೆಂಪೇಗೌಡ ಪೌರಸಭಾಂಗಣದಲ್ಲಿ ಶನಿವಾರ ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚರ್ಚಿಸಲು ಮೇಯರ್‌ ಕರೆದಿದ್ದ ವಿಶೇಷ ಸಭೆ ಆರಂಭದಲ್ಲಿಯೇ ಬಿಜೆಪಿ ಸದಸ್ಯರು, ಪಾಲಿಕೆಯ 198 ವಾರ್ಡ್‌ಗಳ ಪೈಕಿ ಶೇ.75 ಕಡೆ ಕೊಳವೆಬಾವಿಗಳಲ್ಲಿ ನೀರಿಲ್ಲ. ಜನರಿಗೆ ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿಯಾಗಿದೆ ಎಂದು ದೂರಿದರು.

ನೀರಿನ ಸಮಸ್ಯೆಯ ಪರಿಹಾರ ಒದಗಿಸಲು ಪಾಲಿಕೆ ಅಧಿಕಾರಿಗಳಿಗೆ ಕರೆ ಮಾಡಿದರೆ ಚುನಾವಣೆ ಕೆಲಸದಲ್ಲಿರುವಾಗಿ ಹೇಳುತ್ತಾರೆ. ಇನ್ನು ಜಲಮಂಡಳಿಯಿಂದ ಸಮರ್ಪಕವಾಗಿ ನೀರು ಪೂರೈಕೆ ಮಾಡುವುದಿಲ್ಲ. ಹಣ ನೀಡುತ್ತೇವೆ ಟ್ಯಾಂಕರ್‌ ಕಳುಹಿಸಿ ಎಂದರೂ ಜಲಮಂಡಳಿ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಾರೆ ಎಂದು ಆರೋಪಿಸಿದರು.

ವಿಪಕ್ಷ ನಾಯಕ ಪದ್ಮಾಭರೆಡ್ಡಿ ಮಾತನಾಡಿ, ಜಲಮಂಡಳಿಯವರು ಬೇಸಿಗೆ ಅವಧಿಗೆ ಪೂರೈಕೆ ಮಾಡಲು ಅಗತ್ಯ ನೀರಿದೆ ಎಂದು ಹೇಳುತ್ತಿದ್ದಾರೆ. ಆದರೆ, ನೀರು ಪಂಪ್‌ ಮಾಡುವ ಸ್ಥಳಗಳಲ್ಲಿ ವಿದ್ಯುತ್‌ ಕೈಕೊಡುತ್ತಿರುವುದರಿಂದ ಸಮರ್ಪಕವಾಗಿ ನಗರಕ್ಕೆ ನೀರು ಪೂರೈಕೆಯಾಗುತ್ತಿಲ್ಲ. ಇನ್ನು ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಹೊಸದಾಗಿ ಕೊಳವೆ ಬಾವಿ ಕೊರೆಯದಂತಾಗಿದೆ ಎಂದು ಆರೋಪಿಸಿದರು.

ಅದಕ್ಕೆ ಉತ್ತರ ನೀಡಿದ ವಿಶೇಷ ಆಯುಕ್ತ ರಂದೀಪ್‌, ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕುಡಿಯುವ ನೀರು, ಆರೋಗ್ಯ ಸೇವೆ ಹಾಗೂ ತುರ್ತು ಕೆಲಸಗಳನ್ನು ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಅದರಂತೆ ಸಮಸ್ಯೆಯಿರುವ ಕಡೆಗಳಲ್ಲಿ ಪಾಲಿಕೆಯಿಂದ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಜತೆಗೆ ಲೋಕಸಭಾ ಚುನಾವಣೆ ಬಳಿಕ ಕೊಳವೆಬಾವಿಗಳನ್ನು ಕೊರೆಸಲಾಗುವುದು ಎಂದರು.

ಪಾಲಿಕೆ ಜಾಗ ವಶಕ್ಕೆ ಮೀನಮೇಷವೇಕೆ?: ವಿಜಯನಗರ ವಾರ್ಡ್‌ನಲ್ಲಿ ಪಾಲಿಕೆ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಲಾಗಿದೆ. ಆಯುಕ್ತರು ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಆದರೆ, ಅಧಿಕಾರಿಗಳು ಈವರೆಗೆ ತೆರವಿಗೆ ಮುಂದಾಗಿಲ್ಲ.

ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೆ, ಕಟ್ಟಡ ತೆರವಿಗೆ ಬೇಕಾಗಿರುವ 2 ಲಕ್ಷ ರೂ. ಹಣವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಪಾಲಿಕೆ ಸದಸ್ಯೆ ಲತಾ ಆರೋಪಿಸಿದರು. ವಿಶೇಷ ಆಯುಕ್ತ ರಂದೀಪ್‌ ಪ್ರತಿಕ್ರಿಯಿಸಿ, ಬಿಬಿಎಂಪಿಯಲ್ಲಿ ಹಣದ ಕೊರತೆಯಿಲ್ಲ. ಕೂಡಲೇ ಕಟ್ಟತ ತೆರವಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ವಿದ್ಯುತ್‌ ಕಡಿತದಿಂದ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳಿದ್ದು, ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಪಾಲಿಕೆ ಸದಸ್ಯರು ಟ್ಯಾಂಕರ್‌ ಕಳುಹಿಸಿದರೆ ಉಚಿತವಾಗಿ ನೀರು ತುಂಬಿಸಿಕೊಡಲಾಗುವುದು.
-ಸುರೇಶ್‌, ಜಲಮಂಡಳಿ ಸಹಾಯಕ ಎಂಜಿನಿಯರ್‌

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.