ಬಿಜೆಪಿ ಸಭಾತ್ಯಾಗ , ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ
Team Udayavani, Feb 9, 2019, 12:40 AM IST
ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದ ವಿಪಕ್ಷ ಬಿಜೆಪಿ ಬಜೆಟ್ಗೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿತ್ತಾ ದರೂ ಬಜೆಟ್ ಪ್ರತಿ ಮೊದಲೇ ನೀಡದ ಕಾರಣ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ತೋರಿತು.
ಸದಸ್ಯರಿಗೆ ಬಜೆಟ್ ಪ್ರತಿ ನೀಡದೆ ಮುಖ್ಯಮಂತ್ರಿಯವರು ಬಜೆಟ್ ಭಾಷಣ ಮುಂದುವರಿಸಿದ್ದರಿಂದ ‘ಅಯ್ಯಯ್ಯೋ ಆನ್ಯಾಯ’ ಎಂದು ಘೋಷಣೆ ಹಾಕಿ ಸರಕಾರದ ವಿರುದ್ಧ ಬಿಜೆಪಿ ಅತೃಪ್ತಿ ವ್ಯಕ್ತಪಡಿಸಿತು. ಜತೆಗೆ ಕುಮಾರಸ್ವಾಮಿ ಬೆಳಗ್ಗೆ ಆಡಿಯೋ ಬಿಡುಗಡೆ ಮಾಡಿದ್ದನ್ನು ಪ್ರಸ್ತಾವಿಸಿ, ಅದರಲ್ಲಿ ಸ್ಪೀಕರ್ ವಿರುದ್ಧವೇ ಆರೋಪ ಮಾಡಲಾಗಿದೆ. ಸ್ಪೀಕರ್ ಅವರು ಉತ್ತರಿಸಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.
ಇದ್ಯಾವುದನ್ನೂ ಲೆಕ್ಕಿಸದೆ ಕುಮಾರಸ್ವಾಮಿ ಯವರು ಬಜೆಟ್ ಭಾಷಣ ಓದುವುದರಲ್ಲಿ ನಿರತರಾಗಿದ್ದರು. ಅನಂತರ ಯಡಿಯೂರಪ್ಪ ಅವರು, ಬಜೆಟ್ ಪ್ರತಿ ಸಹ ಕೊಡದೆ ಬಜೆಟ್ ಓದುತ್ತಿರುವುದು ಸರಿಯಲ್ಲ. ಇದನ್ನು ಖಂಡಿಸಿ ನಾವು ಸಭಾತ್ಯಾಗ ಮಾಡುತ್ತೇವೆ ಎಂದು ಹೊರಟರು. ಸರಕಾರದ ವಿರುದ್ಧ ಘೋಷಣೆ ಹಾಕುತ್ತಲೇ ಬಿಜೆಪಿ ಸದಸ್ಯರು ನಿರ್ಗಮಿಸಿದರು.
ಈ ಮಧ್ಯೆ ಮುಖ್ಯಮಂತ್ರಿಯವರು ಬಜೆಟ್ ಭಾಷಣ ಓದುವಾಗ ಅಪರಾಹ್ನ 2.30ರ ಸಮಯದಲ್ಲಿ ಬಿಜೆಪಿಯ ಮಾಧುಸ್ವಾಮಿ, ಕುಮಾರ ಬಂಗಾರಪ್ಪ ಅವರು ಸದನಕ್ಕೆ ಆಗಮಿಸಿ, ಬಜೆಟ್ ಪ್ರತಿ ಸೋರಿಕೆಯಾಗಿದೆ. ಆದರೂ ನೀವು ಸದಸ್ಯರಿಗೆ ನೀಡಿಲ್ಲ ಎಂದು ದೂರಿದರು. ಆದರೆ ಸ್ಪೀಕರ್ ಅವರು ಅದಕ್ಕೆ ಪ್ರತಿಕಿಯಿಸದೆ ಕುಳಿತುಕೊಳ್ಳಿ ಇಲ್ಲವೇ ಹೊರಗೆ ಹೋಗಿ ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ