ಬಿಜೆಪಿಗೆ ನಾಚಿಕೆಯಾಗಬೇಕು: ಈಶ್ವರ್ ಖಂಡ್ರೆ
Team Udayavani, Mar 2, 2019, 6:09 AM IST
ಬೆಂಗಳೂರು: ದೇಶದ ಸೈನಿಕರ ಸಾಧನೆಯನ್ನು ಕಾಂಗ್ರೆಸ್ ಅಭಿನಂದಿಸುತ್ತದೆ. ನಾವು ದೇಶದ ಸೈನಿಕರ ಬಗ್ಗೆ ಚಿಂತಾಕ್ರಾಂತರಾಗಿದ್ದರೆ, ಬಿಜೆಪಿಯವರು ಸೈನಿಕರ ದಾಳಿಯಿಂದಲೇ ದೇಶದಲ್ಲಿ ಬಿಜೆಪಿ ಅಲೆಯಿದೆ, ಇದರಿಂದ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ದೊರೆಯುತ್ತವೆ ಎಂದು ಹೇಳುತ್ತಾರೆ. ಇವರಿಗೆ ನಾಚಿಕೆಯಾಗಬೇಕಲ್ಲವೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ.
ನಗರದಲ್ಲಿ ನಡೆದ ಕೆಪಿಸಿಸಿ ಕಾರ್ಮಿಕ ಘಟಕದ ಸಮಾವೇಶದಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಬಿಜೆಪಿಯವರು ಯಾವ ಮಟ್ಟಕ್ಕೆ ಇಳಿಯುತ್ತಾರೆ ಎನ್ನುವುದನ್ನು ಸಾಮಾನ್ಯ ಜನರಿಗೆ ತಿಳಿಸುವ ಕೆಲಸ ಮಾಡಬೇಕೆಂದರು. ಕಾಂಗ್ರೆಸ್ ಅವಧಿಯಲ್ಲಿ ತಯಾರಿಸಿದ ಮಿರಾಜ್ ಯುದ್ಧ ವಿಮಾನದಿಂದಲೇ ಪಾಕಿಸ್ತಾನದ ಮೇಲೆ ದಾಳಿ ಮಾಡಲಾಗಿದೆ ಎನ್ನುವುದನ್ನು ಬಿಜೆಪಿಯವರು ಮರೆಯಬಾರದು.
ಪಾಕಿಸ್ತಾನವನ್ನು ಹೆಡೆಮುರಿ ಕಟ್ಟಿ ಬಾಂಗ್ಲಾ ದೇಶ ಸ್ಥಾಪನೆಗೆ ಕಾರಣವಾಗಿದ್ದು ಇಂದಿರಾ ಗಾಂಧಿ ಸಾಧನೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್, ಮೊಬೈಲ್ ಸೇವೆಗಳನ್ನು ಪ್ರತಿ ಗ್ರಾಮಕ್ಕೂ ಮುಟ್ಟಿಸುವ ಸಾಧನೆ ಮಾಡಿರುವುದು ಕಾಂಗ್ರೆಸ್ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ