ಚೆಲುವರಾಯಸ್ವಾಮಿ ಸೇರಿ ಹಲವರಿಗೆ ಬಿಜೆಪಿ ಗಾಳ?
Team Udayavani, Oct 11, 2018, 6:45 AM IST
ಬೆಂಗಳೂರು: ರಾಮನಗರದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ಮೂಲಕ ಚಂದ್ರಶೇಖರ್ಗೆ ಗಾಳ ಹಾಕಿದ ಬಿಜೆಪಿ ಮಂಡ್ಯದಲ್ಲೂ ಚೆಲುವರಾಯಸ್ವಾಮಿಗೆ ಗಾಳ ಹಾಕಿದೆ.
ಬಿಜೆಪಿಗೆ ಬಂದು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಒಂದೊಮ್ಮೆ ಸೋತರೆ ವಿಧಾನಪರಿಷತ್ಗೆ ನೇಮಕ ಮಾಡುವ ಭರವಸೆ ನೀಡಿದೆ. ಚೆಲುವರಾಯಸ್ವಾಮಿ ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ.
ಚೆಲುವರಾಯಸ್ವಾಮಿ ಜತೆಗೆ ವಿಧಾನಪರಿಷತ್ನ ಮಾಜಿ ಸದಸ್ಯ ರಾಮಕೃಷ್ಣ ಅವರನ್ನು ಸೆಳೆಯಲು ಮುಂದಾಗಿದೆ ಎಂದು ಹೇಳಲಾಗಿದೆ.
ಮತ್ತೂಂದು ಮೂಲಗಳ ಪ್ರಕಾರ ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ನಾರಾಯಣ ಅಥವಾ ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣಗೌಡ ಅವರನ್ನು ಮಂಡ್ಯದಿಂದ ಕಣಕ್ಕಿಳಿಸುವ ಸಾಧ್ಯತೆಯೂ ಇದೆ ಎಂದು ತಿಳಿದು ಬಂದಿದೆ. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಮಂಡ್ಯ ಕ್ಷೇತ್ರದ ಉಪ ಚುನಾವಣೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ನಾಯಕರ ಜತೆ ಸಮಾಲೋಚನೆ ನಡೆಸಿದರು.
ಶಿವಣ್ಣ, ನಂಜುಂಡೇಗೌಡ ಸೇರಿ 12 ಅರ್ಜಿಗಳು ಟಿಕೆಟ್ ಕೋರಿ ಬಂದಿದ್ದು, ವಿಧಾನಪರಿಷತ್ನ ಮಾಜಿ ಸದಸ್ಯ ಅಶ್ವಥ್ನಾರಾಯಣ್ ಅವರ ಬಗ್ಗೆಯೂ ಪ್ರಸ್ತಾಪಗೊಂಡು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಆಕಾಂಕ್ಷಿಗಳು ಹೇಳಿದರು.
ಹೀಗಾಗಿ, ಮತ್ತೂಮ್ಮೆ ಸಭೆ ಸೇರಿ ರಾಮನಗರ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲು ತೀರ್ಮಾನಿಸಲಾಯಿತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ