ಸಮುದಾಯವನ್ನು ವಿಭಜಿಸುವುದು ಸರ್ಕಾರದ ಹುನ್ನಾರ : ಬಿಜೆಪಿ ಆರೋಪ 


Team Udayavani, Mar 20, 2018, 6:20 AM IST

BJP_symbol.jpg

ಬೆಂಗಳೂರು: ವೀರಶೈವ- ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್‌ ಸರ್ಕಾರ ವಿಭಜಿಸಿದ್ದು, ಚುನಾವಣಾ ಲಾಭಕ್ಕಾಗಿ ಕೈಗೊಂಡ ರಾಜಕೀಯ ಉದ್ದೇಶಿತ ನಿರ್ಧಾರವಾಗಿದೆ. ಆ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಸಿವು ಷಡ್ಯಂತ್ರ ನಡೆಸಿದೆ ಎಂದು ರಾಜ್ಯ ಬಿಜೆಪಿ ದೂರಿದೆ.

ಈ ಸಂಬಂಧ ರಾಜ್ಯ ಬಿಜೆಪಿ ಸಹ ವಕ್ತಾರರಾದ ಮೋಹನ್‌ ಲಿಂಬಿಕಾಯಿ ಹಾಗೂ ಶಶಿಲ್‌ ನಮೋಶಿ ಅವರು ಸೋಮವಾರ ಜಂಟಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವೀರಶೈವ- ಲಿಂಗಾಯತ ಸಮುದಾಯ ಸದಾ ಒಗ್ಗಟ್ಟಿನಿಂದಿದ್ದು, ಈ ಸಮುದಾಯಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂಬುದು ಬಿಜೆಪಿಯ ನಿಲುವು. ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರು ಎರಡೂ ಒಂದೇ ಸಮುದಾಯ ಎಂದು ಹೇಳಿದ್ದು, ಅವರು ಕೈಗೊಳ್ಳುವ ತೀರ್ಮಾನಕ್ಕೆ ರಾಜ್ಯ ಬಿಜೆಪಿಯೂ ಬದ್ಧವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವೀರಶೈವ- ಲಿಂಗಾಯತರು ಮೊದಲಿನಿಂದಲೂ ಒಂದೇ ಸಮುದಾಯದವರಾಗಿದ್ದು, ಎಂದಿಗೂ ಪ್ರತ್ಯೇಕವಾಗಿರಲಿಲ್ಲ. ಆದರೆ ಸರ್ಕಾರ ವಿಭಜಿಸಲು ಮುಂದಾಗಿದೆ. ತಜ್ಞರ ಸಮಿತಿಯು ವೀರಶೈವ- ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ಕುರಿತು ನಿರ್ಧರಿಸಲು ಆರು ತಿಂಗಳ ಕಾಲಾವಕಾಶ ಕೋರಿತ್ತು. ಆದರೆ ಸರ್ಕಾರ ಒತ್ತಡ ಹೇರಿ ಎರಡು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಮಾಡುವ ಮೂಲಕ ರಾಜಕೀಯ ಲಾಭಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯ ಅಂತ್ಯದಲ್ಲಿ ಒಡೆದು ಆಳುವ ರಾಜಕೀಯ ಮಾಡುತ್ತಿದ್ದಾರೆ. ಪಕ್ಷಪಾತದ ವರದಿ ಆಧರಿಸಿ ಯಾವುದೇ ಸಮುದಾಯ ಪ್ರತ್ಯೇಕ ಧರ್ಮ ಆಗಬೇಕೆ, ಬೇಡವೇ ಎಂಬುದನ್ನು ತೀರ್ಮಾನಿಸುವುದು ರಾಜ್ಯ ಸರ್ಕಾರದ ಕೆಲಸವಲ್ಲ. ಹಾಗಿದ್ದರೂ ಕಾಂಗ್ರೆಸ್‌ ಸರ್ಕಾರ ವೀರಶೈವ- ಲಿಂಗಾಯತ- ಬಸವ ತತ್ವ ಅನುಯಾಯಿಗಳಿಗೆ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿದೆ ಎಂದು ದೂರಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಅಲ್ಪಸಂಖ್ಯಾತ ಆಯೋಗವು ಈಗಾಗಲೇ ಅಸ್ತಿತ್ವದಲ್ಲಿರುವ ಜಾತಿಗಳಿಗೆ ಸ್ಥಾನಮಾನ ನೀಡುವ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಬಹುದಾಗಿದ್ದರೂ ಈ ಪ್ರಕರಣ ವಿಭಿನ್ನವಾಗಿದೆ. ಬಸವ ತತ್ವ ಅನುಯಾಯಿಗಳು ಎಂಬ ಪರಿಭಾಷೆಯೇ ಗೊಂದಲಕಾರಿಯಾಗಿದೆ. ಬಸವ ತತ್ವ ಅನುಯಾಯಿಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಹಲವು ಸಾಮಾಜಿಕ ಸಮುದಾಯಗಳಿವೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿರುವ ಈ ಸಮುದಾಯದವರನ್ನು ಲಿಂಗಾಯತರೆಂದರೂ ನಗರ ಪ್ರದೇಶದಲ್ಲಿರುವವರನ್ನು ವೀರಶೈವರೆಂದು ಕರೆಯುವುದು ರೂಢಿಯಲ್ಲಿದೆ. ಸದ್ಯ ಲಿಂಗಾಯತರು ಪ್ರವರ್ಗ 3ಬಿ ಅಡಿ ಮೀಸಲಾತಿಗೆ ಅರ್ಹರೆಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ಈ ಸಮುದಾಯ ಈಗಾಗಲೇ ಸೌಲಭ್ಯ ಪಡೆಯುತ್ತಿದೆ. ಮುಸ್ಲಿಮರು ಹಾಗೂ ಇತರೆ ಧರ್ಮೀಯರಿಗೆ ಅಲ್ಪಸಂಖ್ಯಾತರ ಪಾಲಿನ ಮೀಸಲಾತಿಯಲ್ಲಿ ಯಾವುದೇ ಬದಲಾವಣೆಯಾಗಂತೆ ಖಾತರಿಪಡಿಸುವುದು ಇದರ ಉದ್ದೇಶ ಎಂದು ಉಲ್ಲೇಖೀಸಿದ್ದಾರೆ.

ಧರ್ಮ ಸ್ಥಾನಮಾನ ನೀಡುವ ವಿಷಯ ರಾಜ್ಯ ಸರ್ಕಾರದ ವ್ಯಾಪ್ತಿ ಮೀರಿದ್ದಾಗಿದೆ. ಧರ್ಮ ಮತ್ತು ಧಾರ್ಮಿಕ ವಿಷಯಗಳನ್ನು ಆಯಾ ಸಮುದಾಯದ ನಾಯಕರೇ ನಿರ್ಧರಿಸಬೇಕು. ಧಾರ್ಮಿಕ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂಬುದು ಬಿಜೆಪಿಯ ನಿಲುವಾಗಿದೆ. ರಾಜ್ಯ ಸರ್ಕಾರ ಸಮುದಾಯವನ್ನು ವಿಭಜಿಸಿ ಧರ್ಮದ ಆಧಾರದ ಮೇಲೆ ವಿಂಗಡಿಸುವ ಮೂಲಕ ಸಂಕಷ್ಟಕ್ಕೆ ದೂಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಸವ ತತ್ವ ಅನುಸರಿಸುವವರು ಒಂದು ಧರ್ಮ, ಜಾತಿಗೆ ಸೀಮಿತವಾಗಿಲ್ಲ. ಬಸವ ತತ್ವವು ಜಾಗತಿಕ ತತ್ವವಾಗಿದ್ದು, ಎಲ್ಲ ಸ್ತರದ ಜನರಿಗೂ ಅನ್ವಯವಾಗಲಿದೆ. ಕಾಂಗ್ರೆಸ್‌ ಸರ್ಕಾರವು ಈ ಸಮುದಾಯಕ್ಕೆ ಧಾರ್ಮಿಕ ಬಣ್ಣ ಹಚ್ಚಿ ಬಸವ ತತ್ವದ ಮೂಲ ಸಿದ್ಧಾಂತವನ್ನು ಹಾಳುಗೆಡವಿದೆ. ಧರ್ಮ, ಧಾರ್ಮಿಕ ವಿಷಯಗಳು ಸೂಕ್ಷ್ಮ ಹಾಗೂ ವ್ಯಕ್ತಿಗತ ಆಚರಣೆಯ ಸಂಗತಿಗಳು. ಆದರೆ ರಾಜ್ಯ ಸರ್ಕಾರ ಈ ವಿಷಯದಲ್ಲಿ ರಾಜಕೀಯ ಬೆರೆಸಿದೆ. ಈ ವಿಷಯದಲ್ಲಿ ವೀರಶೈವ ಮಹಾಸಭಾ ಹಾಗೂ ಮಠಾಧಿಪತಿಗಳು ನಿರ್ಧಾರ ಕೈಗೊಳ್ಳಬೇಕು ಎಂಬ ನಿಲುವಿಗೆ ಬಿಜೆಪಿ ಮೊದಲಿನಿಂದಲೂ ಬದ್ಧವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.