ಪ್ರ.ಕಾರ್ಯದರ್ಶಿ ಹುದ್ದೆಗೆ ಹರಿಪ್ರಸಾದ್‌ ರಾಜೀನಾಮೆ


Team Udayavani, Mar 14, 2017, 10:39 AM IST

Hariprasad-B-K-1-600.jpg

ಬೆಂಗಳೂರು: ಒರಿಸ್ಸಾ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹರಿಪ್ರಸಾದ್‌ ರಾಜೀನಾಮೆ ನೀಡಿದ್ದಾರೆ. ಹರಿಪ್ರಸಾದ್‌ ರಾಜೀನಾಮೆ ಹಲವು ಊಹಾಪೋಹಗಳಿಗೆ  ಎಡೆಮಾಡಿಕೊಟ್ಟಿದ್ದು, ಪಂಚ ರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಎಐಸಿಸಿಯಲ್ಲಿ ಬದಲಾವಣೆ ಮಾಡುವ ಆಲೋಚನೆ ನಡೆಸಿದ್ದು, ಕೆಲವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡುತ್ತಾರೆ ಎಂಬ ಕಾರಣಕ್ಕೆ ಹರಿಪ್ರಸಾದ್‌ ತಾವೇ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದರೆ, ಮತ್ತೂಂದು ಮೂಲದ ಪ್ರಕಾರ ಹರಿಪ್ರಸಾದ್‌ ರಾಜ್ಯ ರಾಜಕಾರಣಕ್ಕೆ ಬರುವ ಆಲೋಚನೆಯಲ್ಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್‌ ಮುಂದೆ ಈಗಾಗಲೇ ಮನವಿ ಮಾಡಿಕೊಂಡಿದ್ದು, ತಾವು ಅಧ್ಯಕ್ಷರಾಗುವುದಕ್ಕೆ ಅಡ್ಡಿಪಡಿಸದಂತೆ ತಮ್ಮ ಬೆಂಬಲಿಗರ ಮೂಲಕ ಮುಖ್ಯಮಂತ್ರಿಗಳಿಗೂ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹರಿಪ್ರಸಾದ್‌ ಅಧ್ಯಕ್ಷರಾಗಿ ಬರುವುದಕ್ಕೆ ವಿರೋಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಉಸ್ತುವಾರಿ ವಹಿಸಿದ್ದೆ. ಅಲ್ಲಿ ಪಕ್ಷಕ್ಕೆ ಸೋಲು ಉಂಟಾಗಿರುವುದರಿಂದ ನೈತಿಕ ಹೊಣೆ ಹೊತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು. ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಜನರು ಬಿಜೆಪಿಗೆ ಪ್ರಯೋಗ ಮಾಡಲು ಅಧಿಕಾರ ನೀಡಿದ್ದಾರೆ. ಹಿಂದೆ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳಿಗೂ ಅಧಿಕಾರ ಕೊಟ್ಟು ಪ್ರಯೋಗ ಮಾಡಿದ್ದಾರೆ. ಅದೇ ರೀತಿ ಈಗ ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ ಎಂದು ಹೇಳಿದರು.

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದೆ. ಗೋವಾ, ಮಣಿಪುರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಅಲ್ಲಿಯ ರಾಜ್ಯಪಾಲರು ಬಿಜೆಪಿಗೆ ಅಧಿಕಾರ ರಚಿಸಲು ಅವಕಾಶ ಕಲ್ಪಿಸಿರುವುದು ಸಂವಿಧಾನ ವಿರೋಧಿ ನೀತಿ ಎಂದು ಹೇಳಿದರು. ಮನೋಹರ್‌ ಪಾರೀಕರ್‌ ರಕ್ಷಣಾ ಸಚಿವರಾಗಿ ವಿಫ‌ಲರಾಗಿರುವುದರಿಂದ ಕೇಂದ್ರ ಸರಕಾರ ಅವರನ್ನು ವಾಪಸ್‌ ಗೋವಾ ರಾಜ್ಯಕ್ಕೆ ಕಳುಹಿಸುತ್ತಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿದಿರುವುದಕ್ಕೂ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಬಿಬಿಎಂಪಿಯಲ್ಲಿ ನಮಗೇ ಬಹುಮತ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.