![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಐಫೋನ್ ಎಕ್ಸ್ಗಾಗಿ ಪ್ರಿಯಸಿಗೆ ಬ್ಲಾಕ್ಮೇಲ್
Team Udayavani, Apr 21, 2018, 11:56 AM IST
![iphone-ex.jpg](https://www.udayavani.com/wp-content/uploads/2018/04/21/iphone-ex.jpg)
ಬೆಂಗಳೂರು: “ಐಫೋನ್ ಮೊಬೈಲ್ ಕೊಡಿಸದಿದ್ದಲ್ಲಿ ನಿನ್ನೊಂದಿಗೆ ಕಳೆದ ಖಾಸಗಿ ಸಮಯದ ದೃಶ್ಯಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಾಕುತ್ತೇವೆ’ ಎಂದು ಬ್ಲಾಕ್ಮೇಲ್ ಮಾಡುತ್ತಿದ್ದ ಖಾಸಗಿ ಬ್ಯಾಂಕ್ನ ಇಬ್ಬರು ಡೆಪ್ಯೂಟಿ ಮ್ಯಾನೆಜರ್ಗಳು ಸೈಬರ್ ಕ್ರೈಂ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಕೋಟಕ್ ಮಹೀಂದ್ರ ಬ್ಯಾಂಕ್ ಗಿರಿನಗರ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಆಗಿರುವ ಬಿಹಾರ ಮೂಲದ ಅಭಿಷೇಕ್ ಕುಮಾರ್ ಝಾ ಹಾಗೂ ಬೊಮ್ಮನಹಳ್ಳಿ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಆಗಿರುವ ಉತ್ತರ ಪ್ರದೇಶದ ಗೌರವ್ ಚೌಧರಿ ಎಂಬುವರು ಬಂಧಿಸಿದ್ದರು. ಆರೋಪಿಗಳಿಂದ ವಿಡಿಯೋ ಚಿತ್ರೀಕರಣಕ್ಕೆ ಬಳಸಿಕೊಂಡಿದ್ದ ವಾಚ್, ಲ್ಯಾಪ್ಟಾಪ್, ಐಪ್ಯಾಡ್, ಐದು ಮೊಬೈಲ್ಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೊಟಕ್ ಮಹೀಂದ್ರ ಬ್ಯಾಂಕ್ನ ಡೆಪ್ಯೂಟಿ ಮ್ಯಾನೆಜರ್ ಆಗಿರುವ ಅಭಿಷೇಕ್ ಕುಮಾರ್ ತನಗೆ ಪರಿಚಯವಿರುವ ಯುವತಿಯೊಬ್ಬರ ಜತೆ ಖಾಸಗಿಯಾಗಿ ಕಳೆದಿದ್ದು, ಈ ದೃಶ್ಯವನ್ನು ಸಂತ್ರಸ್ತೆಗೆ ತಿಳಿಯದಂತೆ ಚಿತ್ರೀಕರಿಸಿಕೊಂಡಿದ್ದ. ಬಳಿಕ ಈ ವಿಡಿಯೋವನ್ನು ತನ್ನ ಸ್ನೇಹಿತ ಗೌರವ್ ಚೌಧರಿಗೆ ಕೊಟ್ಟಿದ್ದ ಆತ, ಯುವತಿಯಿಂದ ಐಫೋನ್ ಎಕ್ಸ್ ಮೊಬೈಲ್ಗೆ ಬೇಡಿಕೆ ಇಡಲು ಸಂಚು ರೂಪಿಸಿದ್ದ.
ಅದರಂತೆ ಗೌರವ್ ಚೌಧರಿ, ಅಭಿಷೇಕ್ ಕುಮಾರ್ನಿಂದ ಪಡೆದ ಖಾಸಗಿ ದೃಶ್ಯಗಳ ವಿಡಿಯೋ ತುಣುಕನ್ನು ಗೂಗಲ್ ಡ್ರೈವ್ ಮೂಲಕ ತನ್ನ ಈ-ಮೇಲ್ಗೆ ಕಳುಹಿಸಿಕೊಂಡಿದ್ದ. ಬಳಿಕ “ಬೇಬಿ ಯುವರ್ ಗಾನ್’ ಎಂಬ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆದು, ವೀಡಿಯೋದ ಸ್ಕ್ರೀನ್ ಶಾಟ್ಗಳನ್ನು ಸಂತ್ರಸ್ತೆಯ ಇನ್ಸ್ಟಾಗ್ರಾಂ ಖಾತೆಗೆ ಕಳಿಹಿಸಿ, ಒಂದು ಐಫೋನ್ ಎಕ್ಸ್ ಮೊಬೈಲ್ ನೀಡಬೇಕು.
ಇಲ್ಲವಾದರೆ ಈ ವಿಡಿಯೋವನ್ನು ನಿನ್ನ ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಇಬ್ಬರೂ ಸೇರಿ ಆಕೆಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ, ಸಂತ್ರಸ್ತೆಯ ಜತೆಗೆ ನೆಲೆಸಿದ್ದ ಗೌರವ್ ಚೌಧರಿಯ ಸ್ನೇಹಿತೆ ಕೂಡ ಪ್ರಿಯಕರನ ಸೂಚನೆಯಂತೆ ಸಂತ್ರಸ್ತೆ ಜತೆ ನಿತ್ಯ ಮುಜುಗರ ತರುವ ಮಾತುಗಳನ್ನು ಆಡುತ್ತಾ ತನ್ನ ಇತರೆ ಸ್ನೇಹಿತರಿಗೆ ವೀಡಿಯೋ ಬಗ್ಗೆ ಹೇಳಿ ಅಪಹಾಸ್ಯ ಮಾಡುತ್ತಿದ್ದಳು ಎಂದು ಸಂತ್ರಸ್ತೆ ಪೊಲೀಸರಿಗೆ ದೂರಿನಲ್ಲಿ ಆರೋಪಿಸಿದ್ದಳು. ಅದರಂತೆ ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ಗೌರವ್ ಚೌಧರಿ ಮತ್ತು ಅಭಿಷೇಕ್ ಕುಮಾರ್ ಝಾ ಎಂಬುವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.