ಅಧಿಕಾರಿಗಳಿಗೆ ಛೀಮಾರಿ ಹಾಕಿ: ಈಶ್ವರಪ್ಪ
Team Udayavani, Jun 15, 2017, 11:25 AM IST
ವಿಧಾನ ಪರಿಷತ್ತು: ರೈತರಿಗೆ ಬೆಳೆ ಪರಿಹಾರ ವಿತರಣೆಯಲ್ಲಿ ಒಂದು ಪೈಸೆಯೂ ವ್ಯತ್ಯಾಸವಾಗಿಲ್ಲ. ಬಾಕಿಯಿರುವ 155 ಕೋಟಿ ರೂ.ಅನುದಾನವನ್ನು ಜಿಲ್ಲಾಧಿಕಾರಿಗೆ ರವಾನಿಸಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಸದನದಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಾತನಾಡಿ, “ಕೇಂದ್ರ ಸರ್ಕಾರ 1685 ಕೋಟಿ ರೂ.ಪರಿಹಾರ ಮೊತ್ತವನ್ನು ಡಿಸೆಂಬರ್ನಲ್ಲೇ ಬಿಡುಗಡೆ ಮಾಡಿದ್ದು, ಆರು ತಿಂಗಳಾದರೂ ಪರಿಹಾರ ವಿತರಿಸದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತದೆ. ಬ್ಯಾಂಕ್ ಖಾತೆ ಖಾತರಿಪಡಿಸಿಕೊಳ್ಳಲು, ಆಧಾರ್ ಕಾರ್ಡ್ ಲಿಂಕ್ ಮಾಡಲು ಆರು ತಿಂಗಳು ಬೇಕೆ. ನೀವು ಅಧಿಕಾರಿಗಳಿಗೆ ಛೀಮಾರಿ ಹಾಕಿ ನಿಮ್ಮ ಭಾಷೆಯಲ್ಲಿ ಎಚ್ಚರಿಕೆ ನೀಡಿ. ಕಾಲಮಿತಿಯೊಳಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಟಿ.ಎ.ಶರವಣ, ಬಾಕಿ ಉಳಿದ ರೈತರಿಗೆ ಬರ ಪರಿಹಾರ ವಿತರಿಸಲು ಕಾಲಮಿತಿ ನಿಗದಿಪಡಿಸಲಾಗಿದೆಯೇ ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, ” ಕೂಡಲೇ ರೈತರ ಅಕೌಂಟ್ ವಿವರ, ಆಧಾರ್ ಲಿಂಕ್ ಇತರೆ ಪರಿಶೀಲನೆ ನಡೆಸಿ ಪರಿಹಾರ ವಿತರಿಸಲು ಸೂಚಿಸಲಾಗಿದೆ. ಒಂದೊಮ್ಮೆ ಅಕೌಂಟ್ ವಿವರ ಸರಿಯಾಗಿ ಸಿಗದಿದ್ದರೆ ರೈತರಿಗೆ ಖುದ್ದಾಗಿ ಪರಿಹಾರ ಚೆಕ್ ವಿತರಿಸಲು ಸೂಚನೆ ನೀಡಲಾಗಿದೆ. ತಿಂಗಳಲ್ಲಿ ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ