ಬಿಎಂಟಿಸಿಯಲ್ಲಿ ಹೊಸ ಮಾದರಿ ಲಂಚಾವತಾರ


Team Udayavani, Dec 14, 2022, 3:42 PM IST

TDY-16

ಬೆಂಗಳೂರು: ಬಿಎಂಟಿಸಿ ಡಿಪೋ ಹಂತಗಳಲ್ಲಿ ನಡೆಯುತ್ತಿರುವ ಲಂಚಾವತಾರಕ್ಕೆ ಕಡಿವಾಣ ಹಾಕಲು ಮೇಲಧಿಕಾರಿಗಳು ಚಾಪೆ ಕೆಳಗೆ ನುಗ್ಗಿದರೆ, ಕೆಳಹಂತದ ಅಧಿಕಾರಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ.

ರಜೆ ಮಂಜೂರು, ಮಾರ್ಗಗಳ ನಿಯೋಜನೆ ಮತ್ತಿತರ ಕಾರಣಗಳಿಗೆ ಈ ಮೊದಲು ಸಾರಿಗೆ ನೌಕರರಿಂದ ನೇರವಾಗಿ ಘಟಕಗಳಲ್ಲಿನ ಸಹಾಯಕರು ಸೇರಿದಂತೆ ಅಧಿಕಾರಿಗಳಿಗೆ ಗೂಗಲ್‌ ಪೇ, ಫೋನ್‌ ಪೇ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿತ್ತು. ಆದರೆ, ಇದರಲ್ಲಿ ಸಿಕ್ಕಿಬೀಳುವ ಸಾಧ್ಯತೆಗಳು ಕಂಡುಬರುತ್ತಿರುವುದರಿಂದ ಈ “ಕಮಿಷನ್‌ ಜಾಲ’ವು ಸುತ್ತಲಿನ ಟೀ-ಕಾಫಿ ಶಾಪ್‌ ಮತ್ತು ಪಾನ್‌ಶಾಪ್‌ಗ ಗೆ ವಿಸ್ತರಣೆಯಾಗಿದೆ! ರಜೆ, ತುರ್ತುರಜೆ ಮತ್ತಿತರ ಸೌಲಭ್ಯಗಳಿಗೆ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಸೇರಿ ಸಂಬಂಧಪಟ್ಟ ಅಧಿಕಾರಿಗಳು ಈಗ ಡಿಪೋಗಳಿಗೆ ಹತ್ತಿರದಲ್ಲಿರುವ ಅಂಗಡಿ ಮಾಲೀಕರ ನಂಬರ್‌ ನೀಡುತ್ತಾರೆ. ಆ ಸಂಖ್ಯೆಗೆ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಫೋನ್‌ ಪೇ, ಗೂಗಲ್‌ ಪೇ ಮೂಲಕ ಲಂಚ ನೀಡುವ “ಟ್ರೆಂಡ್‌’ ಶುರುವಾಗಿದೆ. ಇದನ್ನು ಪತ್ತೆಹಚ್ಚುವುದು ಮೇಲಧಿಕಾರಿಗಳಿಗೆ ಮತ್ತೂಂದು ರೀತಿಯ ತಲೆನೋವಾಗಿ ಪರಿಣಮಿಸಿದೆ.

ಗೂಗಲ್‌ ಪೇ, ಫೋನ್‌ ಪೇನಲ್ಲಿ ಕೆಳಹಂತದ ನೌಕರರಿಂದ ವಿನಾಕಾರಣ ಅಧಿಕಾರಿಗಳ ಮೊಬೈಲ್‌ಗಳಿಗೆ ಹಣ ವರ್ಗಾವಣೆ ಆಗುತ್ತಿರುವುದು ದಾಖಲೆಗಳಿಂದ ಸುಲಭವಾಗಿ ಪತ್ತೆಯಾಗು ತ್ತಿದೆ. ಅದನ್ನು ಆಧರಿಸಿ ಅಧಿಕಾರಿಗಳ ವಿರುದ್ಧ ವರ್ಗಾವಣೆ, ಅಮಾನತಿನಂತಹ ಶಿಸ್ತುಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಈಚೆಗೆ ಒಂದೇ ಘಟಕ (ಡಿಪೋ- 8)ದ ಆರು ಜನರನ್ನು ಅಮಾನತುಗೊಳಿಸಲಾಗಿದೆ. ಅಷ್ಟೇ ಅಲ್ಲ, ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ “ಡಿಜಿಟಲ್‌ ಲಂಚ’ ತೆಗೆದುಕೊಳ್ಳುವವರ ವಿರುದ್ಧ ಕಾರ್ಯಾಚರಣೆ ಸದ್ದಿಲ್ಲದೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅನ್ಯಮಾರ್ಗಗಳ ಮೂಲಕ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹೀಗೆ ಶಾಪ್‌ಗಳ ಮಾಲೀಕರಿಗೆ ಹಾಕಿಸಿಕೊಳ್ಳಲಾಗುತ್ತದೆ. ಅಲ್ಲಿಂದ ನಂತರದಲ್ಲಿ ನಗದು ಅಥವಾ ಡಿಜಿಟಲ್‌ ರೂಪದಲ್ಲಿ ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಕೆಲವೆಡೆ ಆಯಾ ಅಂಗಡಿ ಮಾಲಿಕರಿಗೆ ಕಮಿಷನ್‌ ಕೂಡ ಇದೆ. ಈ ಜಾಲ ಪತ್ತೆಗೂ ಕಾರ್ಯಪ್ರವೃತ್ತರಾಗಿದ್ದೇವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಟೀ ಶಾಪ್‌ಗಳ ಮೇಲೆ ನಿಗಾ’: “ಚಾಲನಾ ಸಿಬ್ಬಂದಿ ಸೇರಿದಂತೆ ಡಿಪೋಗಳಲ್ಲಿ ಕಾರ್ಯನಿರ್ವ ಹಿಸುವ ಕೆಳಹಂತದ ಸಿಬ್ಬಂದಿಯಿಂದ ರಜೆ ಮಂಜೂರು ಮಾಡಲು, ಅನುಕೂಲಕರವಾದ ಮಾರ್ಗ ಅಥವಾ ಪಾಳಿ ಹಾಕಿಸಿಕೊಳ್ಳಲು ಲಂಚ ಪಡೆಯುತ್ತಿದ್ದು, ಇದಕ್ಕಾಗಿ ಹತ್ತಿರದ ಟೀ-ಕಾμ ಶಾಪ್‌ಗ್ಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅಂತಹ ಡಿಪೋಗಳ ಸುತ್ತ ನಿಗಾ ಇಡಲಾಗಿದೆ. ಅವುಗಳಿಗೂ ಶೀಘ್ರ ಕಡಿವಾಣ ಹಾಕಲಾಗುವುದು’ ಎಂದು ಬಿಎಂಟಿಸಿ ನಿರ್ದೇಶಕಿ (ಭದ್ರತಾ ಮತ್ತು ಜಾಗೃತ) ರಾಧಿಕಾ “ಉದಯವಾಣಿ’ಗೆ ತಿಳಿಸಿದರು.

“ಕಳೆದ ವಾರವಷ್ಟೇ ಗೂಗಲ್‌ ಪೇ, ಫೋನ್‌ ಪೇ ಮೂಲಕ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಆರು ಜನ ನೌಕರರನ್ನು ಅಮಾನತುಗೊಳಿಸಲಾಗಿದೆ. ಇನ್ನೂ ಕೆಲವರ ವಿರುದ್ಧ ತನಿಖೆ ಮುಂದುವರಿದಿದೆ. ದೃಢಪಟ್ಟ ತಕ್ಷಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಮುಂಬರುವ ದಿನಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಇದಕ್ಕೆ ಕಡಿವಾಣ ಹಾಕಲಿಕ್ಕೂ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.