ವಿದೇಶಿಗರ ಹೊತ್ತುತರುವವರಿಗಿಲ್ಲ ರಕ್ಷಣೆ?


Team Udayavani, Feb 15, 2020, 10:33 AM IST

BNG-TDY-1

ಸಾಂಧರ್ಬಿಕ ಚಿತ್ರ

ಬೆಂಗಳೂರು: ಒಂದೆಡೆ ಮಾರಕ ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿದೆ. ಮತ್ತೂಂದೆಡೆ ಅದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಕೂಡ ಅಷ್ಟೇ ವೇಗವಾಗಿ ನಡೆಯುತ್ತಿದೆ. ಆದರೆ, ನಿತ್ಯ ವಿದೇಶದಿಂದ ಬಂದಿಳಿಯುವ ಸಾವಿರಾರು ಪ್ರಯಾಣಿಕರನ್ನು ನಗರಕ್ಕೆ ಹೊತ್ತುತರುವ ಬಿಎಂಟಿಸಿ ಬಸ್‌ಗಳಲ್ಲಿ ಮಾತ್ರ ಈ ಕುರಿತು ಚಕಾರ ಇಲ್ಲ!

ನೂರಾರು ಚಾಲಕರು ಹಾಗೂ ನಿರ್ವಾಹಕರು ಪ್ರತಿ ದಿನ ಹತ್ತಾರು ಬಾರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿಬರುತ್ತಾರೆ. ವಿದೇಶದಿಂದ ವಿಮಾನಗಳಲ್ಲಿ ಬಂದಿಳಿಯುವ ಜನರ ಪೈಕಿ ಸಾವಿರಾರು ಪ್ರಯಾಣಿಕರು ನೇರವಾಗಿ ಬಿಎಂಟಿಸಿ ವೋಲ್ವೊ ಬಸ್‌ ಗಳನ್ನು ಏರುತ್ತಾರೆ. ಹಾಗಾಗಿ, ಮಾರಕ ಕೊರೊನಾ ವೈರಸ್‌ ಬಗ್ಗೆ ಅರಿವು ಮೂಡಿಸುವುದು ಅಥವಾ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು ಉಳಿದೆಲ್ಲ ಕಡೆಗಿಂತ ಇಲ್ಲಿ ಹೆಚ್ಚಿದೆ. ಆದರೆ, ಅಂತಹ ಯಾವುದೇ ವ್ಯವಸ್ಥೆ ಕೈಗೊಂಡಿಲ್ಲ. ಪರಿಣಾಮ ಈ ಮಾರ್ಗದ ಚಾಲನಾ ಸಿಬ್ಬಂದಿ ಅಳುಕಿನಲ್ಲಿ ಕಾರ್ಯನಿರ್ವಹಿಸುವಂತಾಗಿದೆ.

ಏನು ಮಾಡಬಹುದು?: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಆರೋಗ್ಯ ಇಲಾಖೆ ಸೂಚನೆಗಾಗಿ ಕಾಯದೆ ಸ್ವಯಂಪ್ರೇರಿತವಾಗಿ ಚಾಲಕರು ಮತ್ತು ನಿರ್ವಾಹಕರಿಗೆ ಮುಖಗವಸು (ಮಾಸ್ಕ್) ನೀಡಬಹುದು. ಇದರಿಂದ ಕಾಯಿಲೆ ಬಗ್ಗೆ ಗಂಭೀರತೆ ಗೊತ್ತಾಗುತ್ತದೆ. ಸಿಬ್ಬಂದಿ ಹಿತದೃಷ್ಟಿಯಿಂದ ಇದು ಸಂಸ್ಥೆಯ ಕರ್ತವ್ಯ ಕೂಡ ಆಗಿದೆ. ಅಷ್ಟೇ ಅಲ್ಲ, ಪ್ರಯಾಣಿಕರಿಗೆ ಕರಪತ್ರಗಳ ವಿತರಣೆ, ಸ್ಕ್ರೀನಿಂಗ್‌, ಫ‌ಲಕಗಳ ಅಳವಡಿಕೆ ಮೂಲಕ ಹಲವು ವಿಧದಲ್ಲಿ ಅರಿವು ಮೂಡಿಸುವ ಕ್ರಮಗಳನ್ನು ಕೈಗೆತ್ತಿಕೊಳ್ಳ ಬಹುದಿತ್ತು ಎಂದು ಸ್ವತಃ ಬಿಎಂಟಿಸಿ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸ್ಕ್ರೀನಿಂಗ್‌ ವ್ಯವಸ್ಥೆ ಇದೆ. ಕಾಯಿಲೆ ಲಕ್ಷಣಗಳು ಕಂಡುಬಂದರೆ, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಾಗುವಂತೆ ಫ‌ಲಕಗಳನ್ನು ಅಳವಡಿಸಲಾಗಿದೆ. ಈ ಸಂಬಂಧ ಪ್ರತ್ಯೇಕ ಘಟಕವನ್ನೂ ತೆರೆಯಲಾಗಿದೆ. ಆದರೆ, ಚಾಲನಾ ಸಿಬ್ಬಂದಿಗೆ ಈ ವ್ಯವಸ್ಥೆ ಇಲ್ಲ. ಅಷ್ಟಕ್ಕೂ ಜ.21ರಿಂದ ಈವರೆಗೆ ಸುಮಾರು 15ರಿಂದ 18 ಸಾವಿರ ಪ್ರಯಾಣಿಕರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ.  ಅದರಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಕಂಡುಬಂದಿಲ್ಲ. ಬದಲಿಗೆ ಮನೆಗೆ ತೆರಳಿದ ನಂತರ ಸ್ವತಃ ಆ ಪ್ರಯಾಣಿಕರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಗಾಗಿದ್ದಾರೆ.

ಮೆಟ್ರೋದಲ್ಲಿ ಜಾಗೃತಿ: ನಿತ್ಯ ಸುಮಾರು ನಾಲ್ಕು ಲಕ್ಷ ಜನ ಸಂಚರಿಸುವ “ನಮ್ಮ ಮೆಟ್ರೋ’ದಲ್ಲಿ ಕೊರೊನಾ ವೈರಸ್‌ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. “ಕಾಯಿಲೆ ಬಗ್ಗೆ ಆತಂಕ ಬೇಡ; ಎಚ್ಚರಿಕೆ ಬೇಕು, ಜ್ವರ ಮತ್ತಿತರ ಲಕ್ಷಣಗಳು ಕಂಡುಬಂದ ತಕ್ಷಣ ಹತ್ತಿರದ ಆಸ್ಪತ್ರೆಗೆ ತಕ್ಷಣ ಭೇಟಿ ನೀಡಿ’ ಎಂಬ ಜಾಗೃತಿ ಮೂಡಿಸುವ ಹಲವು ಸಾಲುಗಳು ಪ್ಲಾಟ್‌ಫಾರ್ಮ್ ನಲ್ಲಿನ ಡಿಜಿಟಲ್‌ ಫ‌ಲಕಗಳಲ್ಲಿ ಹಾದುಹೋಗುತ್ತವೆ. ಆದರೆ, 40 ಲಕ್ಷ ಜನ ಸಂಚರಿಸುವ ಬಸ್‌ಗಳಲ್ಲಿ ಇದರ ಉಲ್ಲೇಖ ಇಲ್ಲ. ಕೊನೇಪಕ್ಷ ವಿಮಾನ ನಿಲ್ದಾಣ ಸೇರಿದಂತೆ ಕೆಲ ನಿರ್ದಿಷ್ಟ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಾದರೂ ಈ ರೀತಿ ಅರಿವು ಮೂಡಿಸುವ ಅಗತ್ಯ ಇದೆ ಎಂದು ಘಟಕದ ವ್ಯವಸ್ಥಾಪಕರೊಬ್ಬರು ತಿಳಿಸುತ್ತಾರೆ.

500 ಸಿಬ್ಬಂದಿ; 15 ಸಾವಿರ ಪ್ರಯಾಣಿಕರು : ನಗರದಾದ್ಯಂತ ಒಟ್ಟು 763 ವೋಲ್ವೊ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಈ ಪೈಕಿ ವಿಮಾನ ನಿಲ್ದಾಣ ಮಾರ್ಗದಲ್ಲೇ 120ಕ್ಕೂ ಅಧಿಕ ಬಸ್‌ಗಳು ನಿತ್ಯ ಸುಮಾರು 820ಕ್ಕೂ ಹೆಚ್ಚು ಟ್ರಿಪ್‌ಗ್ಳಲ್ಲಿ ಸಂಚರಿಸುತ್ತವೆ. ಚಾಲಕರು ಮತ್ತು ನಿರ್ವಾಹಕರು ಸೇರಿ 500 ಸಿಬ್ಬಂದಿ ವಿವಿಧ ಪಾಳಿಗಳಲ್ಲಿ ವಿಮಾನ ನಿಲ್ದಾಣಕ್ಕೆ ಹೋಗಿಬರುತ್ತಾರೆ. ಸುಮಾರು 15 ಸಾವಿರ ಪ್ರಯಾಣಿಕರು ಇದರಲ್ಲಿ ಸಂಚರಿಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮೆಜೆಸ್ಟಿಕ್‌, ಎಚ್‌ ಎಸ್‌ಆರ್‌ ಲೇಔಟ್‌, ಬಿಟಿಎಂ ಲೇಔಟ್‌, ಎಲೆಕ್ಟ್ರಾನಿಕ್‌ ಸಿಟಿ, ಕೋರಮಂಗಲ, ಮಾರತ್‌ಹಳ್ಳಿ, ಕನಕಪುರ ರಸ್ತೆ ಸೇರಿ ವಿವಿಧೆಡೆಯಿಂದ ವಿಮಾನ ನಿಲ್ದಾಣಕ್ಕೆ ವಾಯುವಜ್ರ ವೋಲ್ವೊ ಬಸ್‌ಗಳು ಸಂಚರಿಸುತ್ತವೆ.

 

ವಿಜಯಕುಮಾರ್ಚಂದರಗಿ

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.