ಕಡೇ ಮೈಲಿವರೆಗೂ ಬಿಎಂಟಿಸಿ ಕನೆಕ್ಟಿವಿಟಿ


Team Udayavani, Mar 15, 2018, 12:14 PM IST

BMTC-bus.jpg

ಬೆಂಗಳೂರು: ಇದುವರೆಗೂ ಬಿಎಂಟಿಸಿ ಬಸ್‌ ಸಂಪರ್ಕ ಸಿಗದ ಸ್ಥಳಗಳಿಗೂ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಿಎಂಟಿಸಿ ಸಂಸ್ಥೆಯು “ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ’ (ಕೊನೆಯ ಹಂತದವರೆಗೆ ಸಾರಿಗೆ) ಕಲ್ಪಿಸಲು “ಸಿದ್ಧ ಸೇವೆ’ ಯೋಜನೆಯನ್ನು ಪ್ರಾಯೋಗಿಕವಾಗಿ ಎರಡು ಹಂತದಲ್ಲಿ ಜಾರಿಗೊಳಿಸಲು ಮುಂದಾಗಿದೆ.

ಮೊದಲ ಹಂತದಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಸೇವೆ ಒದಗಿಸಲು ಮೆಟ್ರೋ ಬೈಕ್ಸ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಶಾಂತಿನಗರ ಟಿಟಿಎಂಸಿ ಬಸ್‌ನಿಲ್ದಾಣದ ಬೈಕ್‌ ಸೇವೆಗೆ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಬುಧವಾರ ಚಾಲನೆ ನೀಡಿದ್ದಾರೆ. ನಗರದಲ್ಲಿ 36 ಮೆಟ್ರೋ ರೈಲು ನಿಲ್ದಾಣಗಳಲ್ಲಿ ಸೇವೆ ಕಲ್ಪಿಸಿದ ಬಳಿಕ ಮೆಟ್ರೋ ಬೈಕ್ಸ್‌ ಸಂಸ್ಥೆಯು ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲೂ ಸೇವೆ ಆರಂಭಿಸಿದೆ. “ಮೆಟ್ರೋ ಬೈಕ್ಸ್‌’ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬೈಕ್‌ ಸೇವೆ ಬಳಸಿಕೊಳ್ಳಬಹುದು.

ಟಿಕೆಟ್‌ ಒಂದು ಸೇವೆ ಮೂರು!: ಎರಡನೇ ಹಂತದಲ್ಲಿ ವಿಮಾನಯಾನ ಪ್ರಯಾಣಿಕರನ್ನು ಸೆಳೆಯಲು ಬಿಎಂಟಿಸಿ ಸಂಸ್ಥೆ ಸಿದ್ಧತೆ ನಡೆಸಿದೆ. ವಿಮಾನಯಾನ ಪ್ರಯಾಣಿಕರು ಮನೆಯಿಂದ ಬಸ್‌ನಿಲ್ದಾಣ ತಲುಪಲು ಇಲ್ಲವೇ ಬಸ್‌ ನಿಲ್ದಾಣದಿಂದ ಮನೆಗೆ ಹೋಗಲು ಅನುಕೂಲವಾಗುವಂತೆ ಖಾಸಗಿ ಕ್ಯಾಬ್‌, ಆಟೋಗಳ ಜತೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್‌ ತಿಳಿಸಿದರು.

ಒಂದು ಟಿಕೆಟ್‌ನಲ್ಲೇ ಮೂರು ಸೇವೆ ನೀಡಲು ಸಂಸ್ಥೆ ಚಿಂತಿಸಿದೆ. ಉದಾಹರಣೆಗೆ ಮನೆಯಿಂದ ಬಸ್‌ನಿಲ್ದಾಣ ತಲುಪಲು ಟ್ಯಾಕ್ಸಿ ಸೇವೆ, ಬಸ್‌ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ವಾಯು ವಜ್ರದಲ್ಲಿ ಪ್ರಯಾಣ ಶುಲ್ಕ ಹಾಗೂ ವಿಮಾನ ನಿಲ್ದಾಣದಲ್ಲಿ ಲಗೇಜ್‌ ತಲುಪಿಸುವ ಸೇವೆಯೂ ಒಂದೇ ಟಿಕೆಟ್‌ನಲ್ಲಿ ಸಿಗಲಿದೆ. ಬಿಎಂಟಿಸಿಯೇ ಟ್ಯಾಕ್ಸಿ ಸೇವೆಯನ್ನು ಪ್ರಯಾಣಿಕರಿಗೆ ಒದಗಿಸಲಿದೆ. ಮೊಬೈಲ್‌ ಆ್ಯಪ್‌ ಇಲ್ಲವೇ ವೆಬ್‌ಸೈಟ್‌ನಲ್ಲಿ ಟಿಕೆಟ್‌ ಕಾಯ್ದಿರಿಸುವ ತಂತ್ರಾಂಶ ಅಭಿವೃದ್ಧಿಪಡಿಸುವ ಚಿಂತನೆ ಇದೆ ಎಂದು ಹೇಳಿದರು.

ಬಿಎಂಟಿಸಿ ನಿವೃತ್ತ ನೌಕರರಿಗೆ ಶೀಘ್ರ ಗ್ರಾಚ್ಯುಟಿ
ಬಿಎಂಟಿಸಿಯ ನಿವೃತ್ತ ನೌಕರರಿಗೆ ಶೀಘ್ರವೇ ಗ್ರಾಚ್ಯುಟಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದರು. ರಾಜ್ಯ ಸರ್ಕಾರದಿಂದ 90 ಕೋಟಿ ರೂ.  ಬಿಎಂಟಿಸಿಗೆ ಮಂಜೂರು ಮಾಡಿಸಿಕೊಳ್ಳಲಾಗಿದೆ. 2016ರ ಆಗಸ್ಟ್‌ನಿಂದ ಸುಮಾರು 72.21 ಕೋಟಿ ರೂ. ಗ್ರಾಚ್ಯುಟಿಯನ್ನು ಸಂಸ್ಥೆ ಬಾಕಿ ಉಳಿಸಿಕೊಂಡಿದೆ. ಜತೆಗೆ ಸುಮಾರು 39 ಕೋಟಿ ರೂ.ವರೆಗೆ ರಜೆ ನಗದೀಕರಣ ಬಾಕಿ, 40 ಕೋಟಿ ರೂ. ಬೋನಸ್‌ ಹಾಗೂ ಸಹಕಾರ ಸಂಘಕ್ಕೆ ನೌಕರರ ವೇತನದಿಂದಲೇ 20 ಕೋಟಿ ರೂ.ವರೆಗೆ ಕಡಿತಗೊಳಿಸಿರುವ ಹಣ ಬಾಕಿ ಉಳಿದಿದೆ.

ಸಿದ್ಧ ಮಹಾಪ್ರಾಣ
ನೂತನ ಯೋಜನೆಗೆ ಸಿದ್ಧ ಸೇವೆ ಎಂದು ಹೆಸರಿಟ್ಟಿರುವುದಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಚ್‌. ಎಂ.ರೇವಣ್ಣ, “ಪ್ರಾಣ ಒಂದೇ ಇರೋದು. ಕನ್ನಡ ವ್ಯಾಕರಣ ನಿಮಗಿಂತ ಚೆನ್ನಾಗಿ ಬಲ್ಲೆ. ಸಿದ್ಧ ಎಂದರೆ ರೆಡಿ ಎಂದರ್ಥ! ಹಾಗಾಗಿ ಸಿದ್ಧ ಎಂದು ಹೆಸರಿಡಲಾಗಿದೆ. ನಮಗೇನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಮಾಡಿ ಎಂದು ಸೂಚಿಸಿಲ್ಲ. ಜನರ ಅನುಕೂಲಕ್ಕಾಗಿ ಈ ಸೇವೆ ಆರಂಭಿಸಲಾಗಿದೆ’ ಎಂದು ಸಚಿವ ರೇವಣ್ಣ ಹೇಳಿದರು.

ವಾರದೊಳಗೆ ಇಂದಿರಾ ಸಾರಿಗೆ ಯೊಜನೆಯನ್ನು ಘೋಷಿಸಲಾಗುವುದು. ಗಾರ್ಮೆಂಟ್ಸ್‌ ಮಾಲೀಕರು
ನೀಡುವ ಪಾಲಿನ ಕುರಿತು ಶೀಘ್ರವೇ ನಿರ್ಧರಿಸಲಾಗುವುದು.
 ಎಚ್‌.ಎಂ.ರೇವಣ್ಣ,  ಸಾರಿಗೆ ಸಚಿವ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.