BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ


Team Udayavani, May 5, 2024, 12:09 PM IST

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

ಬೆಂಗಳೂರು: ಯಾವೊಬ್ಬ ಪ್ರಯಾಣಿಕ ಟಿಕೆಟ್‌ರಹಿತ ಪ್ರಯಾಣ ಮಾಡಿದರೆ, ಆತನ ಜತೆ ಆ ಬಸ್‌ ನಿರ್ವಾಹಕನ ಮೇಲೂ “ದಂಡ ಪ್ರಯೋಗ’ ಮಾಡಲಾಗುತ್ತದೆ. ಕೆಲವು ಸಲ ಅಂತಹ ನಿರ್ವಾಹಕರ ಇನ್‌ಕ್ರಿಮೆಂಟ್‌ಗೆ ಕತ್ತರಿಯನ್ನೂ ಹಾಕಲಾಗುತ್ತದೆ. ಅಷ್ಟರ ಮಟ್ಟಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಿಎಂಟಿಸಿಗೆ ಸಾವಿರಾರು ಕೋಟಿ ಬೆಲೆ ಬಾಳುವ ತನ್ನ ಆಸ್ತಿ ಬಗ್ಗೆ ಮಾತ್ರ “ಡೋಂಟ್‌ ಕೇರ್‌’!

ಕೆಂಗೇರಿ, ಹೊಸಕೋಟೆ, ಯಲಹಂಕ, ಮಾಗಡಿ ರಸ್ತೆ, ಆನೇಕಲ್‌ ಸೇರಿದಂತೆ ನಗರದ ಹೊರವಲಯ ಹಾಗೂ ನಗರದ ಒಳಗೆ ಹತ್ತಾರು ಕಡೆಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗೆ ಸೇರಿದ 950 ಎಕರೆಗೂ ಹೆಚ್ಚು ಜಮೀನು ಇದೆ. ಇದು ಪ್ರಸ್ತುತ ಮಾರುಕಟ್ಟೆ ದರದಂತೆ ಅಂದಾಜು 10 ರಿಂದ 15 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಆದರೆ, ಈ ಆಸ್ತಿಯನ್ನು ಸಂಸ್ಥೆಯಲ್ಲಿ ಕೇಳ್ಳೋರು ಗತಿ ಇಲ್ಲ.

ತನಗೆ ಸೇರಿದ 950 ಎಕರೆ ಭೂಮಿಯಲ್ಲಿ ಶೇ. 25ರಷ್ಟು ಮಾತ್ರ ಅಂದರೆ 230 ಎಕರೆ ಜಾಗದ ಸರಹದ್ದು ಗುರುತಿಸಿ, ಬೇಲಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಉಳಿದ ಅಂದಾಜು 700 ಎಕರೆಗೂ ಅಧಿಕ ಭೂಮಿಯು ಒಂದಿಲ್ಲೊಂದು ರೀತಿಯಲ್ಲಿ ಹಲವಾರು ವರ್ಷಗಳಿಂದ ಒತ್ತುವರಿ ಆಗಿದೆ ಹಾಗೂ ಆಗುತ್ತಲೇ ಇದೆ. ಕೆಲವೆಡೆ ಒತ್ತುವರಿ ತೆರವಿಗೆ ಕಾನೂನು ಹೋರಾಟ ನಡೆಯುತ್ತಿದ್ದರೂ, ಅದು ಪರಿಣಾಕಾರಿಯಾಗಿ ಆಗುತ್ತಿಲ್ಲ. ಮತ್ತೆ ಹಲವೆಡೆ ತೆರವಿಗೆ ಕನಿಷ್ಠ ಪ್ರಯತ್ನಗಳೂ ನಡೆಯುತ್ತಿಲ್ಲ. ಬಿಎಂಟಿಸಿ ಎಸ್ಟೇಟ್‌ ವಿಭಾಗ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಆಸ್ತಿಯತ್ತ ತಿರುಗಿಯೂ ನೋಡುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ, ಅದು ಕಂಡವರ ಪಾಲಾಗುವುದು ಖಚಿತ ಎಂಬ ಮಾತುಗಳು ಸಂಸ್ಥೆಯ ವಲಯದಲ್ಲೇ ಕೇಳಿಬರುತ್ತಿದೆ.

ವಿವಿಧೆಡೆ ನಿರುಪಯುಕ್ತವಾಗಿ ಬಿದ್ದಿರುವ ಈ ಆಸ್ತಿ ಪೈಕಿ ಆಯ್ದ ಭಾಗಗಳಲ್ಲಿ ವಾಣಿಜ್ಯ ಸಂಕೀರ್ಣ, ಅಗತ್ಯ ಇರುವ ಕಡೆ ಡಿಪೋ, ನಿಲ್ದಾಣ, ವರ್ಕ್‌ಶಾಪ್‌, ಪಾರ್ಕಿಂಗ್‌, ಫ್ಯಾಕ್ಟರಿ ಮತ್ತಿತರ ರೂಪದಲ್ಲಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶಗಳಿವೆ. ಬರೀ 5 ರೂ.ಗೆ ಚದರಅಡಿಯಂತೆ ಬಾಡಿಗೆ ನೀಡಿದರೂ, ಎಕರೆಗೆ 2 ಲಕ್ಷ ರೂ. ಅನಾಯಾಸವಾಗಿ ಬರುತ್ತದೆ. ಇದು ಸಂಸ್ಥೆಗೆ ಮತ್ತೂಂದು ಆದಾಯ ಮೂಲ ಆಗುವುದರ ಜತೆಗೆ ಸುತ್ತಲಿನ ಭೂಮಿಯ ಬೆಲೆ ಕೂಡ ಹೆಚ್ಚಾಗಲಿದೆ. ವರ್ಷದಿಂದ ವರ್ಷಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿರುವ ಬಿಎಂಟಿಸಿಗೆ ಇದು ತಕ್ಕಮಟ್ಟಿಗೆ ನೆರವಾಗುತ್ತದೆ. ಆದರೆ, ಈ ನಿಟ್ಟಿನಲ್ಲಿ ಬಿಎಂಟಿಸಿ ಮನಸ್ಸು ಮಾಡಬೇಕಿದೆ.

ಬೆಂಗಳೂರು-ಮೈಸೂರು ರಸ್ತೆಯಂತಹ ಪ್ರಮುಖ ಹೆದ್ದಾರಿಗಳಲ್ಲೆಲ್ಲಾ ಬಿಎಂಟಿಸಿ ಜಾಗ ಇದೆ. ಹಾಗಾಗಿ, ಮುಂಬರುವ ದಿನಗಳಲ್ಲಿ ಈ ಭೂಮಿಗೆ ಸಾಕಷ್ಟು ಬೇಡಿಕೆ ಬರಲಿದೆ. ಒಂದು ವೇಳೆ ಸಂಸ್ಥೆ ಉದಾಸೀನ ತೋರಿದರೆ, ಆಗ ಆ ಭೂಮಿಯೇ ಕೈತಪ್ಪಿ ಹೋಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತನ್ನ ಸುಪರ್ದಿಯಲ್ಲಿ ಇಟ್ಟುಕೊಳ್ಳುವ ಪ್ರಯತ್ನಗಳು ಪರಿಣಾಮಕಾರಿಯಾಗಿ ಆಗಬೇಕಿದೆ ಎಂಬ ಅಭಿಪ್ರಾಯ ಸ್ವತಃ ಬಿಎಂಟಿಸಿ ನೌಕರರಿಂದ ವ್ಯಕ್ತವಾಗುತ್ತಿದೆ.

ಈ ಹಿಂದೆ ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಎ.ಟಿ. ರಾಮಸ್ವಾಮಿ ಆಯೋಗ ರಚನೆಯಾಗಿತ್ತು. ಆಗ, ಕಂದಾಯ ನಿರೀಕ್ಷಕರು ಮತ್ತು ಆಯಾ ತಹಶೀಲ್ದಾರರುಗಳಿಂದ ದಾಖಲೆಗಳ ಅನ್ವಯ ಸಾವಿರಾರು ಎಕರೆ ಭೂಮಿ ಒತ್ತುವರಿ ತೆರವಿಗೆ ಶಿಫಾರಸು ಮಾಡಲಾಯಿತು. ಅದರಂತೆ ಸರ್ಕಾರ ಕೆಲವು ಭೂಮಿಯನ್ನು ವಶಕ್ಕೆ ಪಡೆಯಿತು. ಈ ಸಂದರ್ಭದಲ್ಲಿ ಬಿಎಂಟಿಸಿಯು ಅಂದು ವ್ಯವಸ್ಥಾಪಕ ನಿರ್ದೇಶಕರಾಗಿ ಉಪೇಂದ್ರ ತ್ರಿಪಾಠಿ ಅವರ ದೂರದೃಷ್ಟಿಯಿಂದ ಅಂದಾಜು 1,200 ಎಕರೆ ಭೂಮಿಯನ್ನು ಅಂದಿನ ಮಾರ್ಗಸೂಚಿ ದರದ ಅರ್ಧ ಬೆಲೆಗೆ ಖರೀದಿಸಿತು. ಈಗ ಅದರ ಬೆಲೆ ಮೂರುಪಟ್ಟು ಹೆಚ್ಚಳವಾಗಿದೆ.

ಆಗಬೇಕಾದ್ದೇನು?:

  • ಒತ್ತುವರಿ ತೆರವು ಕಾರ್ಯ ಆದ್ಯತೆ ಮೇಲೆ ಆಗಬೇಕು
  • ತೆರವಾದ ಜಾಗದಲ್ಲಿ ಬಿಎಂಟಿಸಿ
  • ವರ್ಕ್‌ಶಾಪ್‌, ಬಸ್‌ ನಿಲ್ದಾಣ, ಡಿಪೋ ಮಾಡಬಹುದು
  • ತೆರೆದ ಜಾಗವನ್ನು ಹಾಗೇ ಬಿಟ್ಟು ಪಾರ್ಕಿಂಗ್‌ಗೆ ಅನುವು ಮಾಡಿಕೊಡಬಹುದು
  • ಕಾರ್ಖಾನೆ ಸ್ಥಾಪನೆಗೂ ಅವಕಾಶ ಕಲ್ಪಿಸಬಹುದು

ಸಂಸ್ಥೆಯ ಸಾವಿರಾರು ಎಕರೆ ಭೂಮಿ ಇದೆ. ಅದರಲ್ಲಿ ಕೆಲವೆಡೆ ಒತ್ತು ವರಿ ಆಗಿರುವುದು ನಿಜ. ಈ ಹಿಂದೆ ಒಬ್ಬ ಅಧಿಕಾರಿಯು ಒತ್ತುವರಿ ಆಗಿದ್ದನ್ನು, “ಒತ್ತುವರಿ ಆಗಿಲ್ಲ’ ಅಂತ ವರದಿ ನೀಡಿದ್ದರು. ಅವರನ್ನು ಅಮಾನತು ಕೂಡ ಮಾಡಲಾಯಿತು. ಚುನಾವಣೆ ಮುಗಿಯುತ್ತಿದ್ದಂತೆ ತೆರವು ಕಾರ್ಯಕ್ಕೆ ಕೈಹಾಕಲಾಗುವುದು. ಅದಕ್ಕೂ ಮುನ್ನ ಈ ಸಂಬಂಧ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮಾಡುತ್ತೇನೆ. ರಾಮಲಿಂಗಾರೆಡ್ಡಿ, ಸಾರಿಗೆ ಸಚಿವರು

ಬಿಎಂಟಿಸಿಗೆ ಸೇರಿದ ಭೂಮಿ ಉಳಿಸಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಈ ಉದ್ದೇಶಕ್ಕಾಗಿಯೇ ಪ್ರತ್ಯೇಕ ವಿಭಾಗ ಕೂಡ ಇದೆ. ಅದಕ್ಕೆ ಲಕ್ಷಾಂತರ ರೂ.ಸುರಿಯಲಾಗುತ್ತಿದೆ. ಅದು ಸರಿಯಾಗಿ ತನ್ನ ಕರ್ತವ್ಯ ನಿರ್ವಹಿಸಬೇಕಲ್ಲವೇ? ಒತ್ತುವರಿ ಬಗ್ಗೆ ಒಕ್ಕೂಟದ ಗಮನಕ್ಕೂ ಬಂದಿದೆ.  ಸಾರಿಗೆ ಸಚಿವರನ್ನು ಭೇಟಿಯಾಗಿ  ಕ್ರಮಕ್ಕೆ ಮನವಿ ಸಲ್ಲಿಸಲಾಗುವುದು.ಎಚ್‌.ವಿ.ಅನಂತ ಸುಬ್ಬರಾವ್‌, ಅಧ್ಯಕ್ಷರು, ಕೆಎಸ್‌ಆರ್‌ಟಿಸಿ ಸ್ಟಾಫ್, ವರ್ಕರ್ ಫೆಡರೇಷನ್‌.

ವಿಜಯಕುಮಾರ ಚಂದರಗಿ

Ad

ಟಾಪ್ ನ್ಯೂಸ್

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Mumbai; ಹಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

Mumbai; ಹ*ಲ್ಲೆಕೋರ ಮಹಾರಾಷ್ಟ್ರ “ಶಿಂಧೆ’ ಶಾಸಕನ ವಿರುದ್ಧ 2 ದಿನ ಬಳಿಕ ಎಫ್ಐಆರ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಇರಾನ್‌ನಿಂದ ಮತ್ತೊಮ್ಮೆ ಅಣು ಯೋಜನೆ ಆರಂಭ ಸಾಧ್ಯತೆ: ಇಸ್ರೇಲ್‌

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

ಪುತ್ರಿ ಹಣದಲ್ಲೇ ಜೀವನ ಎಂಬ ಕುಹಕ ಮಾತಿಗೆ ಕೊ*ಲೆ: ಆರೋಪಿ ತಂದೆ ಒಪ್ಪಿಗೆ

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Kolukkumala; ಹೂ ಬದಲು ಹುಲಿಯ ದರ್ಶನ: ಸ್ವಲ್ಪದರಲ್ಲೇ ಕೇರಳ ಚಾರಣಿಗ ಪಾರು

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Mumbai: ಹಣವಿದ್ದ ಬ್ಯಾಗ್‌ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ

Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ವಂದೇ ಭಾರತ್‌ ರೈಲಿನಲ್ಲಿ ಕಳ್ಳತನ: ಆರೋಪಿ ಸೆರೆ, 49 ಮೊಬೈಲ್‌ ಜಪ್ತಿ

9-police

Bengaluru: ಪೊಲೀಸರ ಎಡವಟ್ಟು: ಗ್ಯಾಂಗ್‌ ಸ್ಟರ್‌ ಬಿಷ್ಣೋಯ್‌ ಸಹಚರರು ಪರಾರಿ!

8-fruad

Bengaluru: 2 ಫ್ಲ್ಯಾಟ್‌ ಸೇಲ್‌ ನೆಪದಲ್ಲಿ ಸಿಸ್ಟರ್‌ ಗೆ ಭಾರೀ ವಂಚನೆ!

7-bng

Bengaluru: ಪ್ರಸಿದ್ದ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಸರ್ಕಾರದ ವಶಕ್ಕೆ

4-bng

Bengaluru: ಮಹಿಳೆಯರ ಫೋಟೋ, ವಿಡಿಯೋ ಜಾಲತಾಣದಲ್ಲಿ ಹಾಕುತ್ತಿದ್ದವನ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

police

ಬಾಕಿ ಬಿಲ್‌ ಕೇಳಿದ ಮಾಲಕ: ಅಂಗಡಿ ಬ್ಯಾನರ್‌ಗೆ ಬೆಂಕಿ ಹಚ್ಚಿದ ಗ್ರಾಹಕ

arrest-lady

ವಿಚಾರಣಾಧೀನ ಕೈದಿಗೆ ನೀಡಲು ತಂದಿದ್ದ ಅನುಮಾನಾಸ್ಪದ ಪುಡಿ; ಮಹಿಳೆ ವಶಕ್ಕೆ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

Malpe ಸೈಂಟ್‌ ಮೇರಿಸ್‌ ಬಳಿ ನಾಡದೋಣಿ ದುರ್ಘ‌ಟನೆ: ದೋಣಿ ಮಗುಚಿ ಓರ್ವ ಸಾವು, ಇಬ್ಬರಿಗೆ ಗಾಯ

bosaraju

ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ನೆಚ್ಚರ ವಹಿಸಲು ಸಚಿವರ ಸೂಚನೆ

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

ವಿಮಾನ ದುರಂತದ ವರದಿ ಶೀಘ್ರವೇ ಬಹಿರಂಗ: ಸಚಿವ ಕೆ.ರಾಮಮೋಹನ್‌ ನಾಯ್ಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.