ಶೆಟಲ್‌ ಸೇವೆ ಮೇಲೆ ಬಿಎಂಟಿಸಿ ಕಣ್ಣು

ಜ.4ರಿಂದ ಸಿಟಿ-ಏರ್‌ಪೋರ್ಟ್‌ ರೈಲು ಆರಂಭ | ನಿತ್ಯ ಆರು ರೈಲು ಸೇವೆಗಳು

Team Udayavani, Jan 2, 2021, 12:12 PM IST

ಶೆಟಲ್‌ ಸೇವೆ ಮೇಲೆ ಬಿಎಂಟಿಸಿ ಕಣ್ಣು

ಬೆಂಗಳೂರು: ಇತ್ತ ಬಹುನಿರೀಕ್ಷಿತ ನಗರದ ಹೃದಯಭಾಗದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸೇವೆಗೆ ಮೂಹೂರ್ತ ನಿಗದಿಯಾಗಿದ್ದು, ಜ. 4ರಿಂದ ಸೇವೆ ಆರಂಭಗೊಳ್ಳಲಿದೆ. ಈ ಬೆನ್ನಲ್ಲೇ ಅತ್ತ ಹಾಲ್ಟ್ ಸ್ಟೇಷನ್‌ನಿಂದ ಏರ್‌ಪೋರ್ಟ್‌ ನಡುವೆ ಶೆಟಲ್‌ ಬಸ್‌ ಸೇವೆಗೆ ಬಿಎಂಟಿಸಿ ಮುಂದಾಗಿದೆ. ಈ ಸಂಬಂಧ ಬಿಐಎಎಲ್‌ ನೊಂದಿಗೆ ಮಾತುಕತೆ ನಡೆದಿದೆ.

ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಜೋಡಿ (4) ಹಾಗೂ ಯಶವಂತಪುರದಿಂದ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದು ಜೋಡಿ (2) ಉಪನಗರ ರೈಲು ಸೇವೆ ಪರಿಚಯಿಸಲು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗ ನಿರ್ಧರಿಸಿದೆ. ಇದಕ್ಕೆ ಪೂರಕವಾಗಿ ಹೊಸ ಹಾಲ್ಟ್ ಸ್ಟೇಷನ್‌ನಿಂದ ವಿಮಾನ ನಿಲ್ದಾಣ ಟರ್ಮಿನಲ್‌ ನಡುವೆ ಶೆಟಲ್‌ ಸೇವೆಗಳ ಆರಂಭಕ್ಕೆ ಸಿದ್ಧತೆ ನಡೆದಿದೆ. ಹಾಲ್ಟ್ ಸ್ಟೇಷನ್‌ನಿಂದ ಟರ್ಮಿ  ನಲ್‌ಗೆ ಸುಮಾರು 5 ಕಿ.ಮೀ. ದೂರ ಆಗುತ್ತದೆ. ರೈಲಿನಲ್ಲಿ ಬಂದಿಳಿಯುವ ಪ್ರಯಾಣಿಕರಿಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಯಮಿತ (ಬಿಐಎಎಲ್‌) ಶೆಟಲ್‌ ಸೇವೆ ಆರಂಭಿ  ಸಬೇಕಿದೆ. ಈ ಉದ್ದೇಶಕ್ಕೆ ಬಿಎಂಟಿಸಿ ವೋಲ್ವೊ ಬಸ್‌ ಪರಿಚಯಿಸಲು ಚಿಂತನೆ ನಡೆದಿದೆ. ಆದರೆ, ಇನ್ನೂ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ.

ಇದನ್ನೂ ಓದಿ : ಪ್ರತಿಯೊಬ್ಬ ಹಿಂದೂ ದೇಶಭಕ್ತನೇ, ಅದು ಹಿಂದೂಗಳ ಮೂಲಗುಣ: ಮೋಹನ್ ಭಾಗವತ್

ಪ್ರಾಯೋಗಿಕವಾಗಿ 6 ರೈಲುಗಳನ್ನು ಪರಿಚಯಿಸಲಾ ಗುತ್ತಿದೆ. ಪ್ರಯಾಣಿಕರ ಸ್ಪಂದನೆ ನೋಡಿಕೊಂಡು ರೈಲು ಸೇವೆ ಹೆಚ್ಚಿಸುವ ಬಗ್ಗೆ ನಿರ್ಧಾರ ಆಗಲಿದೆ. ಅದಕ್ಕೆ ಅನುಗುಣವಾಗಿ ಶೆಟಲ್‌ ಸೇವೆ ಬೇಕಾಗುತ್ತದೆ. ಆರಂಭದಲ್ಲಿ ಕನಿಷ್ಠ 5-6 ಬಸ್‌ ಅವಶ್ಯಕತೆ ಇದೆ. ಖಾಸಗಿ ಮೊರೆ ಹೋಗುವ ಬದಲಿಗೆ, ತಮ್ಮ ವೋಲ್ವೋಬಸ್‌ ಬಳಸಿಕೊಳ್ಳಲು ಬಿಎಂ ಟಿಸಿ, ಬಿಐ ಎಎಲ್‌ ಮುಂದೆ ಪ್ರಸ್ತಾವನೆ ಇಟ್ಟಿದೆ. ಆದರೆ, ಗುತ್ತಿಗೆ ದರದಲ್ಲಿ ಎರಡೂ ಸಂಸ್ಥೆಗಳ ನಡುವೆ ಚೌಕಾಸಿ ನಡೆ ದಿದೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಆದಾಯಕ್ಕಿಂತ ಸೇವೆ ಮುಖ್ಯ; ಬಿಎಂಟಿಸಿ :

“ವೋಲ್ವೊ ಬಸ್‌ವೊಂದರ ದಿನದ ಬಾಡಿಗೆ 15ರಿಂದ 20 ಸಾವಿರ ರೂ. ಆಗುತ್ತದೆ. ಕನಿಷ್ಠ 5 ಬಸ್‌ ಗುತ್ತಿಗೆ ಪಡೆದರೂ, 1 ಲಕ್ಷ ರೂ.ಆಗುತ್ತದೆ. ಪೂರ್ಣಪ್ರಮಾಣದಲ್ಲಿ ಸೇವೆ ಒದಗಿಸಿದರೆ, ಈ ಆದಾಯ ದುಪ್ಪಟ್ಟು ಆಗಲಿದೆ. ಬಿಎಂಟಿಸಿಗೆ ಇಲ್ಲಿ ಆದಾಯಕ್ಕಿಂತ ಹೆಚ್ಚಾಗಿ ಸೇವೆ ಮುಖ್ಯವಾಗಿದ್ದು, ತಮ್ಮ ಬಸ್‌ಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದೇವೆ. ಆದರೆ, ನಿರೀಕ್ಷಿತ ಸ್ಪಂದನೆ ದೊರೆಯುತ್ತಿಲ್ಲ’ ಎಂದು ಬಿಎಂಟಿಸಿ ಹಿರಿಯಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು. “ಖಾಸಗಿಯವರಿಗೆಹೋಲಿಸಿದರೆ, ಬಿಎಂಟಿಸಿ ವೋಲ್ವೊ ಬಸ್‌ಗಳ ಬಾಡಿಗೆ ತುಸು ದುಬಾರಿಅನಿಸಬಹುದು. ಆದರೆ, ಸೇವೆಗಳು ಉತ್ತಮ. ಜತೆಗೆ ಸರ್ಕಾರಿ ಸಂಸ್ಥೆಆಗಿರುವುದರಿಂದ ಜವಾಬ್ದಾರಿ ಹೆಚ್ಚಿರುತ್ತದೆ. ಒಂದು ವೇಳೆ ಬಿಐಎಎಲ್‌ ಒತ್ತಾಯಕ್ಕೆ ನಾವು ಬಾಡಿಗೆ ಕಡಿಮೆ ಮಾಡಲು ಆಗುವುದಿಲ್ಲ. ಹಾಗೊಂದು ವೇಳೆ ಕಡಿಮೆ ಮಾಡಿದರೆ, ಉಳಿದ ಕಡೆಗೆ ನೂರಾರು ಬಸ್‌ಗಳನ್ನು ಬಾಡಿಗೆಗೆ ನೀಡುತ್ತಿದ್ದೇವೆ. ಅವರಿಂದಲೂ ಒತ್ತಾಯ ಕೇಳಿ ಬರುತ್ತದೆ. ಆಗ, ನಿರ್ವಹಿಸುವುದು ಕಷ್ಟ ಆಗಲಿದೆ’ ಎಂದೂ ಅಧಿಕಾರಿಗಳು ತಿಳಿಸುತ್ತಾರೆ.

ಎಲೆಕ್ಟ್ರಿಕ್‌ ವೋಲ್ವೋ ಬಸ್‌ ಪೂರಕ :

ಬಿಐಎಎಲ್‌ ಮೊದಲಿನಿಂದಲೂ ಮಳೆನೀರು ಕೊಯ್ಲು, ಸೋಲಾರ್‌, ನೀರಿನ ಮರುಬಳಕೆ ಸೇರಿದಂತೆ “ಪರಿಸರ ಸ್ನೇಹಿ’ ಚಟುವಟಿಕೆಗಳಿಗೆ ಒತ್ತು ನೀಡುತ್ತಿದೆ. ಒಂದೆರಡು ತಿಂಗಳಲ್ಲಿಬಿಎಂಟಿಸಿ ಕೂಡ ಎಲೆಕ್ಟ್ರಿಕ್‌ ವೋಲ್ವೊ ಬಸ್‌ಗಳನ್ನು ರಸ್ತೆಗಿಳಿಸಲಿದೆ. ಆಗ, ಶೆಟಲ್‌ ಸೇವೆಗಳ ರೂಪದಲ್ಲಿ ಈ ವಿದ್ಯುತ್‌ಚಾಲಿತ ಬಸ್‌ಗಳನ್ನು ಕಲ್ಪಿಸಬಹುದು. ಇದು ಬಿಐಎಎಲ್‌ ಚಟುವಟಿಕೆಗೆ ಪೂರಕವಾಗಲಿದೆ ಎಂದೂ ವಿಶ್ಲೇಷಿಸಲಾಗುತ್ತಿದೆ.

ಅಂತಿಮವಾಗಿಲ್ಲ: ಬಿಐಎಎಲ್‌ :  ಬಿಐಎಎಲ್‌ ವಕ್ತಾರರು ಹೇಳುವ ಪ್ರಕಾರ “ರೈಲು ಸೇವೆಗಳು ಆರಂಭಗೊಂಡ ನಂತರ ಶೆಟಲ್‌ ಸೇವೆಗಳ ಪ್ರಶ್ನೆ ಬರುತ್ತದೆ. ಸದ್ಯಕ್ಕೆ ಶೆಟಲ್‌ ಸೇವೆಗಳಿಗೆ ಸಿದ್ಧತೆಯಂತೂ ನಡೆದಿದೆ. ಆದರೆ, ಅವುಗಳು ಬಿಎಂಟಿಸಿಯ ಬಸ್‌ ಅಥವಾಖಾಸಗಿ ಬಸ್‌ಗಳನ್ನು ಪರಿಚಯಿಸಬೇಕೋ ಎಂಬುದು ಇನ್ನೂ ಅಂತಿಮವಾಗಿಲ್ಲ’ ಎಂದಷ್ಟೇ ಮಾಹಿತಿ ನೀಡಿದರು.

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.