ಬಿಎಂಟಿಸಿಗೂ ತಟ್ಟಿದ ಬಂದ್‌ ಬಿಸಿ


Team Udayavani, Jan 9, 2019, 9:02 AM IST

bmtc.jpg

ಬೆಂಗಳೂರು: ಭಾರತ್‌ ಬಂದ್‌ ಬಿಸಿ ತುಸು ಜೋರಾಗಿ ತಟ್ಟಿದ್ದು ಬಿಎಂಟಿಸಿಗೆ. ಮಂಗಳವಾರ ಎಂದಿನಂತೆ ಬೆಳಗ್ಗೆ ರಸ್ತೆಗಿಳಿದ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ನಂತರ ಬಸ್‌ ಸಂಚಾರಕ್ಕೆ ಬಹುತೇಕ ಬ್ರೇಕ್‌ ಬಿತ್ತು.

ನಗರದ ಐದು ಕಡೆ ಬೆಳಗಿನಜಾವ 5ರಿಂದ 8ಗಂಟೆ ನಡುವೆ ಕಾರ್ಯಾಚರಣೆ ನಡೆಸುತ್ತಿದ್ದ ಬಸ್‌ಗಳ ಕಿಟಕಿ, ಮುಂಭಾಗದ ಗಾಜುಗಳ ಮೇಲೆ ಕಲ್ಲು ತೂರಿದ ಘಟನೆ ನಡೆದಿದ್ದು, ಇದರ ಪರಿಣಾಮ ನಂತರದಲ್ಲಿ ಕಾರ್ಯಾಚರಣೆ ಮಾಡಲಿದ್ದ ಬಸ್‌ಗಳ ಸಂಚಾರದ ಮೇಲಾಯಿತು. ಸಾವಿರಾರು ಬಸ್‌ಗಳ ಪೈಕಿ ಕೆಲವೇ ಕೆಲವು ರಸ್ತೆಗಿಳಿದವು.

ಬೆಳಗಿನಜಾವ 4.45ರ ಸುಮಾರಿಗೆ ಮಲ್ಲೇಶ್ವರ ವೃತ್ತದಲ್ಲಿ, 5ಕ್ಕೆ ಅಲ್ಲಿಂದ ಹತ್ತಿರದಲ್ಲೇ ಇರುವ ಸರ್ಕಲ್‌ ಮಾರಮ್ಮ ದೇವಸ್ಥಾನದ ಬಳಿ ಎರಡು ಬಸ್‌ಗಳ ಮೇಲೆ ಕಲ್ಲು ಎಸೆಯಲಾಗಿದೆ. ಇದರಿಂದ ಮುಂಭಾಗದ ಗಾಜುಗಳು ಪುಡಿಪುಡಿಯಾದವು.

ಅದೇ ರೀತಿ, 5.10ರ ಸುಮಾರಿಗೆ ಮೆಜೆಸ್ಟಿಕ್‌ ಹತ್ತಿರದ ಕೃಷ್ಣ ಫ್ಲೋರ್‌ಮಿಲ್‌, 6 ಗಂಟೆಗೆ ಯಶವಂತಪುರ ಮುಖ್ಯ ರಸ್ತೆ ಬಳಿ ಹಾಗೂ ಚಿನ್ನಸಂದ್ರ ಗೇಟ್‌ ಬಳಿ 8.15ಕ್ಕೆ ಬಸ್‌ ಕಿಟಕಿಗಳನ್ನು ಜಖಂಗೊಳಿಸಲಾಗಿದೆ. ಇದರಿಂದ ಸುಮಾರು 25 ಸಾವಿರ ರೂ.ಗಳಷ್ಟು ಹಾನಿಯಾಗಿದೆ ಎಂದು ಬಿಎಂಟಿಸಿ ಅಂದಾಜಿಸಿದೆ.

ಈ ಮಧ್ಯೆಯೂ ಬಿಎಂಟಿಸಿ ಬಸ್‌ಗಳು “ಪೀಕ್‌ ಅವರ್‌’ನಲ್ಲಿ ಅಂದರೆ ಬೆಳಗ್ಗೆ 10ರವರೆಗೆ ಅಲ್ಲಲ್ಲಿ ಕಾರ್ಯಾಚರಣೆ ನಡೆಸಿದವು. ಸಂಜೆ 4ರ ಸುಮಾರಿಗೆ ಮತ್ತೆ ರಸ್ತೆಗಿಳಿದವು. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಇನ್ನು ಆಟೋ ಚಾಲಕರು ಮತ್ತು ಮಾಲಿಕರ ಸಂಘಟನೆಗಳು ಮುಷ್ಕರಕ್ಕೆ ಕೈಜೋಡಿಸಿದ್ದರೂ ಭಾಗಶಃ ಕಾರ್ಯಾಚರಣೆ ನಡೆಸಿದವು.

ನೈತಿಕ ಬೆಂಬಲ ಸೂಚಿಸಿದ್ದ ಆ್ಯಪ್‌ ಆಧಾರಿತ ಟ್ಯಾಕ್ಸಿಗಳು, ಪ್ರವಾಸಿ ವಾಹನಗಳು, ಮ್ಯಾಕ್ಸಿಕ್ಯಾಬ್‌ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿಲ್ಲ. ಕೆಲವೆಡೆ ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳು ಬಂದ್‌ ಆಗಿರುವುದು ಕಂಡುಬಂತು. 

ಮೆಟ್ರೋ ಸೇವೆ ಮಾಮೂಲು: “ನಮ್ಮ ಮೆಟ್ರೋ’ ಸೇವೆಗೆ ಮುಷ್ಕರದ ಬಿಸಿ ತಟ್ಟಲಿಲ್ಲ. ಎಂದಿನಂತೆ “ಪೀಕ್‌ ಅವರ್‌’ನಲ್ಲಿ ಪ್ರತಿ ನಾಲ್ಕೂವರೆ ನಿಮಿಷಕ್ಕೊಂದು ರೈಲು ಕಾರ್ಯಾಚರಣೆ ಮಾಡಿದರೆ, ಉಳಿದ ಸಮಯದಲ್ಲಿ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ರೈಲುಗಳು ಸಂಚರಿಸಿದವು.

ಮೆಟ್ರೋ ಸೇವೆ ಹಾಗೂ ಪ್ರಯಾಣಿಕರ ಸಂಖ್ಯೆಯಲ್ಲಿ ಇಡೀ ದಿನ ಯಾವುದೇ ವ್ಯತ್ಯಯ ಆಗಲಿಲ್ಲ. ಬುಧವಾರ ಕೂಡ ಯಥಾಪ್ರಕಾರ ಸೇವೆ ಇರಲಿದೆ. ಮುಷ್ಕರದಿಂದ ಯಾವುದೇ ಸಮಸ್ಯೆ ಆಗಿಲ್ಲ ಎಂದು ಬಿಎಂಆರ್‌ಸಿಎಲ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್‌ ಚವಾಣ್‌ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.