ಬಿಎಂಟಿಸಿಗೆ ಅಗ್ರಿಗೇಟರ್‌ ಅವಕಾಶ ಉಂಟು


Team Udayavani, Oct 15, 2022, 1:00 PM IST

ಬಿಎಂಟಿಸಿಗೆ ಅಗ್ರಿಗೇಟರ್‌ ಅವಕಾಶ ಉಂಟು

ಬೆಂಗಳೂರು: ಓಲಾ, ಉಬರ್‌ ಬದಲಿಗೆ ಸ್ವತಃ ಆ್ಯಪ್‌ ಆಧಾರಿತ ಸೇವೆಗಳನ್ನು ಸ್ವತಃ ಪರಿಚಯಿಸಿ, ಆ ಮೂಲಕ ಬಿಎಂಟಿಸಿ ಲಾಭದಾಯಕ ನಿಗಮವನ್ನಾಗಿಸಿಕೊಳ್ಳುವ ಎಲ್ಲ ಅವಕಾಶಗಳು ಇದೆ.

ಪ್ರಸ್ತುತ ಖಾಸಗಿ ಕಂಪನಿಗಳು ಪ್ರಯಾಣಿಕರಿಂದ ಬೇಕಾಬಿಟ್ಟಿ ವಸೂಲು ಮಾಡುತ್ತಿವೆ. ಈ ಮಧ್ಯೆ ಸರ್ಕಾರದಿಂದಲೇ ಅಗ್ರಿಗೇಟರ್‌ ಆ್ಯಪ್‌ ಪರಿಚಯಿಸುವ ಮಾತುಗಳು ಕೇಳಿ ಬರುತ್ತಿವೆ. ಇದು ಬಿಎಂ ಟಿಸಿಗೆ ಅವಕಾಶದ ಬಾಗಿಲು ತೆರೆಯುವಂತೆ ಮಾಡಿದೆ.

ಅಗ್ರಿಗೇಟರ್‌ ಕಂಪನಿ ಗಳಿಗಾಗಿ “ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ನಿಯಮ- 2016’ರ ಸಿದ್ಧತೆಗೆ ಸಂಬಂಧಿತ ಸಾರಿಗೆ ಇಲಾಖೆ ಅಧಿಕಾರಿಗಳ ಹಲವು ಸಭೆಗಳಲ್ಲಿ ಈ ವಿಷಯ ಪ್ರಸ್ತಾಪ ಆಗಿತ್ತು. ಹೇಗಿದ್ದರೂ ಬಿಎಂಟಿಸಿಯು ನಗರ ಸಾರಿಗೆಯಲ್ಲಿ ಏಕಸ್ವಾಮ್ಯ ಹೊಂದಿದೆ. ಅದೇ ಸಂಸ್ಥೆಯಿಂದ ಆ್ಯಪ್‌ ಪರಿಚ ಯಿಸಿ, ಅಗ್ರಿಗೇಟರ್‌ ರೂಪದಲ್ಲಿ ಸೇವೆಗಳನ್ನು ಒದಗಿಸಬಹುದು. ಇದರಿಂದ ಏಕಸ್ವಾಮ್ಯತೆ ಮುಂದುವರಿಯುವುದರ ಜತೆಗೆ ಸಂಸ್ಥೆಗೆ ಆದಾ ಯವೂ ಬರುತ್ತದೆ ಎಂಬ ಆಯ್ಕೆಯನ್ನು ಮುಂದಿ ಡಲಾಗಿತ್ತು. ಈ ಆಯ್ಕೆಯನ್ನು ಸದುಪಯೋಗಪಡಿಸಿಕೊಂಡರೆ ನಿಗಮಕ್ಕೆ ಸಾಕಷ್ಟು ಆದಾಯ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಎಂಟಿಸಿ ಈಗಾಗಲೇ ಬಸ್‌ಗಳ ಕಾರ್ಯಾ ಚರಣೆ ಮಾಡಿದ ಅನುಭವ ಇದೆ. ಆ ಸಂಸ್ಥೆಯಿಂದಲೇ ಇಂತಹದ್ದೊಂದು ಪ್ರಯತ್ನಕ್ಕೆ ಕೈಹಾಕಬಹುದು. ನೇರವಾಗಿ ಬಿಎಂಟಿಸಿ ನಿರ್ವಹಣೆ ಮಾಡದಿದ್ದರೂ, ಟೆಂಡರ್‌ ಆಹ್ವಾನಿಸಿ, ಆ ಮೂಲಕ ನಿರ್ವ ಹಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌, “ಉತ್ತಮ ಚಿಂತನೆ ಇದಾಗಿದೆ. ಈ ಕುರಿತ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಬಹುದು. ಆದರೆ, ಸದ್ಯಕ್ಕೆ ನ್ಯಾಯಾಲಯದ ತೀರ್ಪು ಏನು ಬರುತ್ತದೆ ಎಂಬುದನ್ನು ನೋಡಿಕೊಂಡು ಮುಂದುವರಿಯ ಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

“ಈ ನಿಟ್ಟಿನಲ್ಲಿ ಖಂಡಿತ ಚರ್ಚಿಸಬಹುದಾಗಿದೆ. ಆದರೆ, ಸರ್ಕಾರದ ತೀರ್ಮಾನ ಅಂತಿಮವಾಗಿದೆ. ಈ ಸೇವೆಗಿಂತ ಹೆಚ್ಚಾಗಿ ಈಗಿರುವ ಪ್ರಮುಖ ಮಾರ್ಗಗಳಲ್ಲಿ ಉತ್ತಮ ಬಸ್‌ ಸೇವೆಗಳನ್ನು ಕಲ್ಪಿಸುವುದು, ಬಸ್‌ಗಳ ಸಂಖ್ಯೆ ಹೆಚ್ಚಿಸುವುದು, ಆ ಮೂಲಕ ಪ್ರಯಾಣಿಕರನ್ನು ಹೆಚ್ಚಿಸುವುದು ನಮ್ಮ ಮುಂದಿರುವ ಆದ್ಯತೆ’ ಎಂದು ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಎ.ವಿ. ಸೂರ್ಯಸೇನ್‌ ತಿಳಿಸುತ್ತಾರೆ.

ವಿದ್ಯುತ್‌ಚಾಲಿತ ಬಸ್‌ಗಳನ್ನು ಮತ್ತು ಅದರ ಚಾಲಕರನ್ನು ಖಾಸಗಿ ಸಂಸ್ಥೆಗಳಿಂದ ಇಂದು ಗುತ್ತಿಗೆ ಪಡೆದು ಬಿಎಂಟಿಸಿಯು ಸೇವೆ ಒದಗಿಸುತ್ತಿದೆ. ಇದಕ್ಕೆ ಹೋಲಿಸಿದರೆ, ಆ್ಯಪ್‌ ಆಧಾರಿತ ಸೇವೆಗಳನ್ನು ಒದಗಿಸುವುದು ಸಾರಿಗೆ ಸಂಸ್ಥೆಗೆ ಸುಲಭದ ಕೆಲಸ. ಐಟಿ ಸಿಟಿಯಲ್ಲಿ ತಂತ್ರಜ್ಞಾನಕ್ಕೆ ಕೊರತೆ ಇಲ್ಲ. ಸಂಸ್ಥೆಯಲ್ಲಿ ಪ್ರತ್ಯೇಕ ಐಟಿ ವಿಭಾಗವೂ ಇದೆ. ಅದನ್ನು ಸಮರ್ಪಕವಾಗಿ ಬಳಿಸಿಕೊಂಡು ಆ್ಯಪ್‌ ಪರಿಚಯಿಸಬಹುದಿತ್ತು. ಅದಕ್ಕೆ ಖಾಸಗಿ ಚಾಲಕರು ಲಿಂಕ್‌ ಮಾಡಿಕೊಂಡು ಸೇವೆ ಒದಗಿಸುತ್ತಿದ್ದರು. ಇದಕ್ಕಾಗಿ ಹೆಚ್ಚು ಖರ್ಚು ಕೂಡ ಆಗುವುದಿಲ್ಲ.

ಒಂದು ವೇಳೆ ಬಿಎಂಟಿಸಿಯು ಈ ನಿಟ್ಟಿನಲ್ಲಿ ಮುಂದಾಗಿದ್ದರೆ, ಪ್ರಯಾಣಿಕರಿಗೆ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಜತೆಗೆ ಉತ್ತಮ ಸೇವೆ ದೊರೆಯುತ್ತಿತ್ತು. ಸರ್ಕಾರದ ಅಂಗಸಂಸ್ಥೆ ಆಗಿದ್ದರಿಂದ ಹೊಣೆಗಾರಿಕೆ ಇರುತ್ತಿತ್ತು. ಹಾಗಾಗಿ, ಜನರಿಗೆ ಹೊರೆಯೂ ಆಗುತ್ತಿರಲಿಲ್ಲ. ಸಂಸ್ಥೆಗೆ ಆದಾಯವೂ ಬರುತ್ತಿತ್ತು. ಆದರೆ, ಕೈಚೆಲ್ಲಿದ್ದರಿಂದ ಖಾಸಗಿ ಅಗ್ರಿಗೇಟರ್‌ ಕಂಪನಿಗಳಿಗೆ ಇಂಬು ಮಾಡಿಕೊಟ್ಟಂತಾಯಿತು. ಪರಿಣಾಮ ಬಸ್‌ಗಳ ಪ್ರಯಾಣಿಕರ ಸಂಖ್ಯೆ ಇಳಿಮುಖ ಆಗಿರುವುದರಲ್ಲಿ “ನಮ್ಮ ಮೆಟ್ರೋ’ ಜತೆಗೆ ಈ ಕಂಪನಿಗಳ ಪಾಲೂ ಇದೆ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.

“ಬರೀ ಬಿಎಂಟಿಸಿಯಿಂದ ಸಾಧ್ಯವಿಲ್ಲ’: “ಬರೀ ಬಿಎಂಟಿಸಿಯಿಂದ ಆಗುವ ಕೆಲಸ ಇದಲ್ಲ. ಅದರೊಂದಿಗೆ ಸಾರಿಗೆ ಇಲಾಖೆ, ಪೊಲೀಸ್‌ ಮತ್ತಿತರ ಇಲಾಖೆಗಳನ್ನು ಸೇರಿ ಒಂದು ಪ್ರತ್ಯೇಕ ವಿಭಾಗ ಮಾಡಬೇಕು. ಅದರ ಮೂಲಕ ಸರ್ಕಾರದಿಂದ ಆ್ಯಪ್‌ ಸೇವೆಗಳನ್ನು ಒದಗಿಸಬೇಕಾಗುತ್ತದೆ. ಆಗ ಅದರಡಿ ಸಂಚರಿಸುವ ವಾಹನಗಳ ಮೇಲೂ ಹಿಡಿತ ಇರುತ್ತದೆ’ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸುತ್ತಾರೆ. ಕೊನೆಪಕ್ಷ ಅಗ್ರಿಗೇಟರ್‌ ಆ್ಯಪ್‌ಗೆ ಮುಂದಾಗದಿ ದ್ದರೂ, ಬೇರೆಯವರು ಬರದಂತೆ ತಡೆಯುವ ಕೆಲಸವಾದರೂ ಮಾಡಬಹುದಿತ್ತು. ಉದಾಹರಣೆಗೆ ಕೆಎಸ್‌ಆರ್‌ಟಿಸಿಯು ಹೆದ್ದಾರಿಗಳಲ್ಲಿ ಏಕಸ್ವಾಮ್ಯ ಹೊಂದಿದೆ. ಅಲ್ಲಿ ಖಾಸಗಿಯವರು ಹಸ್ತಕ್ಷೇಪ ಮಾಡಲು ಬಿಡುವುದೇ ಇಲ್ಲ. ಅದೇ ರೀತಿ, ನಗರದಲ್ಲಿ ಬಿಎಂಟಿಸಿ ಏಕಸ್ವಾಮ್ಯ ಹೊಂದಿದೆ. ಇಲ್ಲಿ ಆ್ಯಪ್‌ ಆಧಾರಿತ ಸೇವೆಗಳಿಗೆ ಆಕ್ಷೇಪ ಸಲ್ಲಿಸಬಹುದಿತ್ತು. ಇದಾವುದೂ ಆಗಲಿಲ್ಲ. ಪರಿಣಾಮ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಯಿತು. ಬೆನ್ನಲ್ಲೇ ಆದಾಯವೂ ಖೋತಾ ಆಯಿತು.

ಹಿಂದೆ ಪ್ರಯೋಗ ನಡೆದಿತ್ತು: ಈ ಹಿಂದೆ ಬಿಎಂಟಿಸಿಯಿಂದ ಆ್ಯಪ್‌ ಆಧಾರಿತ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಸೇವೆಯ ಪ್ರಯೋಗ ನಡೆದಿತ್ತು. 2017-18ರಲ್ಲಿ ಬಿಎಂಟಿಸಿಯು ಕಂಪನಿಯೊಂದರಿಂದ ಆ್ಯಪ್‌ ಅಭಿವೃದ್ಧಿಪಡಿಸಿತ್ತು. ಅದರ ಮೂಲಕ ಆಟೋ ಮತ್ತು ಕ್ಯಾಬ್‌ಗಳನ್ನು ಲಿಂಕ್‌ ಮಾಡಿ, ಬಸ್‌ ಪ್ರಯಾಣಿಕರಿಗೆ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಸೇವೆ ಒದಗಿಸುವ ಪ್ರಯತ್ನ ನಡೆದಿತ್ತು. ಆದರೆ, ಬಸ್‌ ಮತ್ತು ಆಟೋಗಳು ನಿಗದಿತ ಅವಧಿಗೆ ತಲುಪುವುದು, ನಿರ್ಗಮಿಸುವುದು ಸೇರಿದಂತೆ ಸಮನ್ವಯದ ಹಲವು ಸವಾಲುಗಳು ಅಲ್ಲಿದ್ದವು. ಈ ಹಿನ್ನೆಲೆಯಲ್ಲಿ ಪರೀಕ್ಷೆ ಹಂತದಲ್ಲೇ ಸ್ಥಗಿತಗೊಂಡಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.