ಬಿಎಂಟಿಸಿ ನಿದ್ದೆಗೆಡಿಸಿದ ಡೀಸೆಲ್‌ ಕಳ್ಳರು


Team Udayavani, May 7, 2019, 3:08 AM IST

bmtc

ಬೆಂಗಳೂರು: ಡಿಪೋಗಳಿಗೆ ಸೀಮಿತವಾಗಿದ್ದ ಡೀಸೆಲ್‌ ಕಳವು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ನಗರದ ವಿವಿಧಡೆ ರಾತ್ರಿ ನಿಲುಗಡೆಯಾಗುವ ಬಸ್‌ಗಳಲ್ಲೂ ಕಂಡುಬರುತ್ತಿರುವುದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ದೊಡ್ಡ ತಲೆನೋವಾಗಿದೆ.

ರಾತ್ರಿ ಪಾಳಿ ಬಸ್‌ಗಳು ನಗರದ ಹೊರವಲಯದಲ್ಲಿ ನಿಲುಗಡೆ ಆಗಿರುತ್ತವೆ. ಆ ಬಸ್‌ಗಳ ಟ್ಯಾಂಕರ್‌ನಿಂದ ಕಿಡಿಗೇಡಿಗಳು ನೂರಾರು ಲೀ. ಡೀಸೆಲ್‌ ಕಳವು ಮಾಡುತ್ತಿದ್ದಾರೆ. ಇದರಲ್ಲಿ ಕೆಲವೇ ಕೆಲವು ವರದಿ ಆಗುತ್ತವೆ. ಇನ್ನು ಹಲವು ಬೆಳಕಿಗೆ ಬರುವುದೇ ಇಲ್ಲ. ಈ “ರಾತ್ರಿ ಕಾರ್ಯಾಚರಣೆ’ ಸಂಸ್ಥೆ ಅಧಿಕಾರಿಗಳ ನಿದ್ದೆಗೆಡಿಸಿದೆ.

ಎರಡು ದಿನಗಳ ಹಿಂದೆ ಸೋಲದೇವನಹಳ್ಳಿ ಬಳಿ ಸುಮಾರು 100 ಲೀ.ಗೂ ಅಧಿಕ ಡೀಸೆಲ್‌ ಕಳವು ಆಗಿದೆ ಎಂದು ಸ್ವತಃ ಬಸ್‌ ಚಾಲಕ ಹತ್ತಿರದ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ಇದೇ ರೀತಿ, ಕೆಲವು ತಿಂಗಳುಗಳ ಹಿಂದೆ ಹೊಸಕೋಟೆ, ದೇವನಂದಿಯಲ್ಲೂ ನಿಲುಗಡೆಯಾದ ಬಸ್‌ಗಳಲ್ಲಿನ ಡೀಸೆಲ್‌ ಕಳವು ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಳವು ಪುನರಾವರ್ತನೆ ಆಗುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಳ್ಳತನ ನಡೆದಿರುವುದು ಬೆಳಕಿಗೆಬಂದರೆ, ಆಯಾ ಘಟಕಗಳ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಬುಕ್‌ ಅಡ್ಜಸ್ಟ್‌ಮೆಂಟ್‌ (?) ಮಾಡಲಾಗುತ್ತದೆ. ರಿಪೇರಿ ನೆಪದಲ್ಲಿ ಬರುವ ವಾಹನಗಳಲ್ಲಿನ ಡೀಸೆಲ್‌ ಕೂಡ ಕೆಲವೊಮ್ಮೆ ಮಾಯವಾಗುತ್ತದೆ ಎನ್ನಲಾಗಿದೆ.

ನಿರ್ಲಕ್ಷ್ಯದಿಂದ ಕಳ್ಳತನ: ರಾತ್ರಿ ಪಾಳಿಯಲ್ಲಿ ಸಾವಿರಕ್ಕೂ ಅಧಿಕ ಬಸ್‌ಗಳು ಕಾರ್ಯಾಚರಣೆ ಮಾಡುತ್ತವೆ. ಅವುಗಳಲ್ಲಿ ಬಹುತೇಕ ದೇವನಹಳ್ಳಿ, ಹೊಸಕೋಟೆ, ಹೆಸರಘಟ್ಟ, ನೆಲಮಂಗಲ, ಬಗಲುಗುಂಟೆ ಸೇರಿದಂತೆ ನಗರದ ಹೊರವಲಯದಲ್ಲಿ ನಿಲುಗಡೆ ಆಗುತ್ತವೆ. ಹೀಗೆ ನಿಲುಗಡೆ ಆಗುವ ಬಸ್‌ಗಳಲ್ಲಿ ಸ್ವತಃ ಚಾಲಕ ಮತ್ತು ನಿರ್ವಾಹಕ ಬಸ್‌ಗಳಲ್ಲೇ ಇರಬೇಕು ಎಂಬುದು ನಿಯಮ.

ಊಟಕ್ಕೆ ಹೊರಟರೂ ಒಬ್ಬರ ನಂತರ ಮತ್ತೂಬ್ಬರು ತೆರಳಬೇಕು ಎಂದೂ ಹೇಳಲಾಗಿದೆ. ಆದರೆ, ಈ ನಿಯಮ ಪಾಲನೆ ಪರಿಣಾಮಕಾರಿಯಾಗಿ ಆಗುತ್ತಿಲ್ಲ. ಅಲ್ಲದೆ, ಬಸ್‌ನ ಡೀಸೆಲ್‌ ಟ್ಯಾಂಕರ್‌ಗಳಿಗೆ ಕೀಲಿ ಕೂಡ ಹಾಕಿರುವುದಿಲ್ಲ. ಇದರಿಂದ ಕಳ್ಳತನಕ್ಕೆ ಸುಲಭವಾಗಿ ದಾರಿ ಮಾಡಿಕೊಟ್ಟಂತಾಗಿದೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇಡೀ ಬಿಎಂಟಿಸಿ ವ್ಯಾಪ್ತಿಯಲ್ಲಿ ನಿಲುಗಡೆಯಾಗುವ ಸಾವಿರಾರು ಬಸ್‌ಗಳು ಮತ್ತು ಎಲ್ಲ 45 ಡಿಪೋಗಳ ಮೇಲೆ ಕಣ್ಗಾವಲಿಗೆ ಇರುವ “ಸಾರಥಿ’ಗಳು ಎರಡೇ ಎರಡು! ರಾತ್ರಿ ಗಸ್ತು ತಿರುಗುವ ಈ ವಾಹನಗಳಲ್ಲಿ ತಲಾ ಇಬ್ಬರು ಸಿಬ್ಬಂದಿ ಇರುತ್ತಾರೆ. ರಾತ್ರಿ 10ರಿಂದ ಬೆಳಗಿನಜಾವ 5ರವರೆಗೆ ಸಾರಥಿಗಳು 20ರಿಂದ 25 ಡಿಪೋಗಳು, ನಿಲ್ದಾಣಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸುತ್ತವೆ.

ಹೊರವಲಯದಲ್ಲಿ ಬಸ್‌ಗಳು ನಿಲುಗಡೆ ಆಗಿದ್ದರೆ, ಅದರಲ್ಲಿ ಸಿಬ್ಬಂದಿ ಇದ್ದಾರೆಯೇ ಹಾಗೂ ಅವರು ಎಚ್ಚರವಾಗಿದ್ದಾರೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುತ್ತದೆ ಎಂದು ಭದ್ರತಾ ಮತ್ತು ಜಾಗೃತ ದಳದ ಸಿಬ್ಬಂದಿ ಸ್ಪಷ್ಟಪಡಿಸುತ್ತಾರೆ. ಆದರೆ, ವಾಸ್ತವವಾಗಿ ಕೇವಲ ಎರಡು ವಾಹನಗಳಲ್ಲಿ ಇದೆಲ್ಲವೂ ಸಾಧ್ಯವೇ? ಇದ್ದರೂ ಆ ಕಾರ್ಯವು ಸಮರ್ಪಕವಾಗಿ ನಡೆಯುವುದು ವಾಸ್ತವವಾಗಿ ಅಸಾಧ್ಯ ಎಂದೂ ಅಧಿಕಾರಿಗಳು ಹೇಳುತ್ತಾರೆ.

ವರ್ಷಕ್ಕೆ ಒಂದೆರಡು ಕೇಸು ಅಷ್ಟೇ: ಪದೇ ಪದೆ ಈ ರೀತಿ ಪ್ರಕರಣಗಳು ನಡೆಯುವುದಿಲ್ಲ. ವರ್ಷದಲ್ಲಿ ಒಂದೆರಡು ಘಟನೆಗಳು ವರದಿ ಆಗಿರುತ್ತವೆ ಅಷ್ಟೇ. ಅದೇನೇ ಇರಲಿ, ಈ ಮಧ್ಯೆ ಕಳ್ಳತನ ಪ್ರಕರಣಗಳು ಪುನರಾವರ್ತನೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ತಿರುಗುವ ಸಾರಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆದಿದೆ. ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ಪೊಲೀಸರ ನೆರವು, ಮೆಷ್‌ ಹಾಕುವುದು, ಲಾಕ್‌ ಮಾಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಸಾಕಷ್ಟು ಬಂದೋಬಸ್ತ್ ಇರುತ್ತದೆ. ಸಂಸ್ಥೆಯ ಸಿಬ್ಬಂದಿಯೇ ಬಸ್‌ಗಳಲ್ಲಿ ಠಿಕಾಣಿ ಹೂಡಿರುತ್ತಾರೆ. ಆದರೂ, ಕಿಡಿಗೇಡಿಗಳು ಇಂತಹ ಕೃತ್ಯ ಎಸಗಿರುವುದು ಬೆಳಕಿಗೆ ಬರುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬಹುದು ಎನ್ನುವುದರ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
ಅನುಪಮ್‌ ಅಗರವಾಲ್‌, ನಿರ್ದೇಶಕರು (ಭದ್ರತಾ ಮತ್ತು ಜಾಗೃತಿ), ಬಿಎಂಟಿಸಿ

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.