ಮಹಾನಗರ ಸಾರಿಗೆ ಬಸ್‌ನಲ್ಲೂ ಬುಕಿಂಗ್‌ ಸೌಲಭ್ಯ

ಅವತಾರ್‌, ಮೊಬೈಲ್‌ ಆ್ಯಪ್‌ನಲ್ಲೇ ಬುಕಿಂಗ್‌ ವ್ಯವಸ್ಥೆ | ಬಹಳ ದಿನಗಳಕನಸು ನನಸು

Team Udayavani, Dec 6, 2020, 11:52 AM IST

ಮಹಾನಗರ ಸಾರಿಗೆ ಬಸ್‌ನಲ್ಲೂ ಬುಕಿಂಗ್‌ ಸೌಲಭ್ಯ

ಬೆಂಗಳೂರು: ಓಲಾ, ಉಬರ್‌ನಂತೆ ಬಿಎಂಟಿಸಿ ಬಸ್‌ ಗಳಲ್ಲಿ ಕೂಡ ನೀವು ಇನ್ಮುಂದೆ ಮೊದಲೇ ಸೀಟು ಬುಕಿಂಗ್‌ ಮಾಡಿ ಪ್ರಯಾಣಿಸಬಹುದು. ದೇಶದ ನಗರ ಸಮೂಹ ಸಾರಿಗೆಯಲ್ಲಿ ಇದೇ ಮೊದಲ ಬಾರಿಗೆ ಇಂತಹದ್ದೊಂದು ವ್ಯವಸ್ಥೆ ಪರಿಚಯಿಸುತ್ತಿದ್ದು, ಐಟಿ ರಾಜಧಾನಿ ಈ ವಿನೂತನ ವ್ಯವಸ್ಥೆಗೆ ಈಗ ಸಾಕ್ಷಿಯಾಗುತ್ತಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ “ವಾಯುವಜ್ರ’ ಹವಾನಿಯಂತ್ರಿತ ವೋಲ್ವೊಬಸ್‌ ಸೇವೆಗಳಲ್ಲಿ ಈ ಸೌಲಭ್ಯವನ್ನು ಕಲ್ಪಿಸಿದ್ದು, ನಗರದ ವಿವಿಧೆಡೆ ನಿಲ್ದಾಣಕ್ಕೆ ತೆರಳುವ ವೋಲ್ವೊ ಬಸ್‌ ಗಳಲ್ಲಿ ಪ್ರಯಾಣಿಕರು ಕೇವಲ ಅರ್ಧಗಂಟೆ ಮುಂಚಿತವಾಗಿ (ಗರಿಷ್ಠ 30 ದಿನ ಮುಂಚಿತವೂ ಆಗಬಹುದು)ಬುಕಿಂಗ್‌ಮಾಡಿ,ಪ್ರಯಾಣಿಸಬಹುದು.

ಶನಿವಾರದಿಂದಲೇ ಈ ಯೋಜನೆ ಜಾರಿಗೊಳಿಸಿದ್ದು, ಭಾನುವಾರದಿಂದ ಈ ಸೇವೆ ಲಭ್ಯವಾಗಲಿದೆ. ಹೀಗೆ ಮೊದಲೇ ಬುಕಿಂಗ್‌ ಮಾಡಿ ಪ್ರಯಾಣಿಸುವ ವ್ಯವಸ್ಥೆ ಕಲ್ಪಿಸಬೇಕು ಎನ್ನುವುದು ಬಿಎಂಟಿಸಿಯ ಹಲವು ವರ್ಷಗಳ ಕನಸು. ದಶಕದ ಹಿಂದೆ ಕೂಡ ಈ ಚರ್ಚೆ ನಡೆದಿತ್ತು. ಈಗ ನನಸಾಗಿದೆ.

ಇದನ್ನೂ ಓದಿ : ಆರ್ ಎಸ್ಎಸ್ ನ ಮುಖವಾಣಿಯಾಗಿ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ: ನಾರಾಯಣ ಸ್ವಾಮಿ

ನಗರದ ಎಚ್‌ಎಎಲ್‌, ವೈಟ್‌ಫೀಲ್ಡ್‌, ಬನಶಂಕರಿ, ಕಾಡುಗೋಡಿ, ಎಲೆಕ್ಟ್ರಾನಿಕ್‌ ಸಿಟಿ, ಚಂದಾಪುರ, ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ಸ್ಯಾಟಲೈಟ್‌ ಬಸ್‌ ನಿಲ್ದಾಣ, ಡಿಎಲ್‌ಎಫ್ ಅಪಾರ್ಟ್‌ ಮೆಂಟ್‌ ಸೇರಿದಂತೆ ವಿವಿಧೆಡೆಯಿಂದ ಕೆಎಸ್‌ಆರ್‌ ಟಿಸಿಯ ಅವತಾರ್‌ ತಂತ್ರಾಂಶದ ಮೂಲಕ ಅಥವಾ ಕೆಎಸ್‌ಆರ್‌ಟಿಸಿ ಮೊಬೈಲ್‌ ಆ್ಯಪ್‌ ಅಥವಾ ನಗರದಾದ್ಯಂತ ನೂರಕ್ಕೂ ಹೆಚ್ಚು ಇರುವ ಕೆಎಸ್‌ಆರ್‌ಟಿಸಿಯ ಅಧಿಕೃತ ಫ್ರ್ಯಾಂಚೈಸಿಗಳಲ್ಲಿ ಟಿಕೆಟ್‌ ಕಾಯ್ದಿರಿಸಬಹುದು. ಟಿಕೆಟ್‌ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಪ್ರಯಾಣ ದರ 200 ರೂ.ಗಿಂತ ಅಧಿಕವಾಗಿದ್ದರೆ10 ರೂ. ಹಾಗೂ 200 ರೂ. ಕಡಿಮೆ ಇದ್ದರೆ 5 ರೂ. ಬುಕಿಂಗ್‌ ಶುಲ್ಕ ವಿಧಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.

ಒಂದೇ ಗುಂಪಿನ ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಬುಕಿಂಗ್‌ ಮಾಡಿದರೆ, ಪ್ರಯಾಣ ದರದಲ್ಲಿ ಶೇ. 5ರಷ್ಟು ರಿಯಾಯ್ತಿ ಹಾಗೂ ಹೋಗಿ-ಬರುವ ಪ್ರಯಾಣಕ್ಕೆ ಒಮ್ಮೆಲೆ ಆಸನ ಕಾಯ್ದಿರಿಸಿದರೆ, ಶೇ. 10 ರಿಯಾಯ್ತಿ ದೊರೆಯಲಿದೆ. ಹೀಗೆ ಬುಕಿಂಗ್‌ ಮಾಡಿದ ಪ್ರಯಾಣಿಕರ ಮೊಬೈಲ್‌ಗೆ ಸೀಟು ಖಾತ್ರಿ ಬಗ್ಗೆ ಎಸ್‌ಎಂಎಸ್‌ ಬರುತ್ತದೆ. ಇ-ಟಿಕೆಟ್‌ ನೊಂದಿಗೆ ಭಾವಚಿತ್ರವಿರುವ ಗುರುತಿನ ಚೀಟಿ,ಆಧಾರ್‌ ಸೇರಿದಂತೆ ಐಡಿ ಹೊಂದಿರಬೇಕು.

ನಗರದಿಂದ ವಿಮಾನ ನಿಲ್ದಾಣಕ್ಕೆ ಸುಮಾರು 335 ವೋಲ್ವೊ ಟ್ರಿಪ್‌ಗ್ಳನ್ನು ಬಿಎಂಟಿಸಿ ಹೊಂದಿದೆ. ಸದ್ಯ ಕಿ.ಮೀ.ಗೆ 80 ರೂ. ಖರ್ಚಾಗುತ್ತಿದ್ದು, ಆದಾಯ ಪ್ರತಿಕೀ.ಮೀ.ಗೆ 60 ರೂ. ಇದೆ.ಈವ್ಯವಸ್ಥೆಯಿಂದ ಕೊರತೆಯಾಗುವ 20 ರೂ.ಯನ್ನು ಸರಿದೂಗಿಸುವ ಲೆಕ್ಕಾಚಾರ ಬಿಎಂಟಿಸಿ ಹೊಂದಿದೆ.

 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.