ಪಾಲಿಕೆ ಕೊಳವೆಬಾವಿಗಳು ಜಲಮಂಡಳಿಗೆ ವರ್ಗ


Team Udayavani, Sep 18, 2022, 12:23 PM IST

ಪಾಲಿಕೆ ಕೊಳವೆಬಾವಿಗಳು ಜಲಮಂಡಳಿಗೆ ವರ್ಗ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ತನ್ನ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಮುಂದಾಗಿದೆ.

ಬೇಸಿಗೆಯಲ್ಲಿ ಕಾವೇರಿ ನೀರಿನ ಕೊರತೆ ಉಂಟಾಗಿ ನಗರದಲ್ಲಿ ಎದುರಾಗುವ ನೀರಿನ ಸಮಸ್ಯೆ ನೀಗಿಸಲು ಜಲಮಂಡಳಿ ಬೋರ್‌ವೆಲ್‌ಗ‌ಳ ಮೊರೆ ಹೋಗುತ್ತದೆ. ಆದರೆ, ಬಿಬಿಎಂಪಿ ಸುಪರ್ದಿಯಲ್ಲಿರುವ ಕೊಳವೆಬಾವಿಗಳ ನಿರ್ವಹಣೆ ಸರಿಯಾಗಿಲ್ಲದ ಕಾರಣ ಕೆಲವೊಮ್ಮೆ ಅಲ್ಲಿಂದಲೂ ನೀರು ಪೂರೈಕೆ ಸಾಧ್ಯವಾಗುವುದಿಲ್ಲ. ಹೀಗಾಗಿಯೇ ಬಿಬಿಎಂಪಿ ತನ್ನ ಸುಪರ್ದಿಯಲ್ಲಿರುವ ಕೊಳವೆಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ತೀರ್ಮಾನಿಸಿದೆ.

ಜತೆಗೆ ನಿರ್ವಹಣೆಗಾಗಿ ಪಾಲಿಕೆಯಿಂದ 40 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿಗೆ ಪ್ರತಿದಿನ 1,450 ಎಂಎಲ್‌ಡಿ ನೀರಿನ ಅವಶ್ಯಕತೆಯಿದೆ. ಸದ್ಯ ಈ ನೀರನ್ನು ಕಾವೇರಿ 1ರಿಂದ 4ನೇ ಹಂತದ ಯೋಜನೆಯಿಂದ ಪೂರೈಸಲಾಗುತ್ತದೆ. ಬೇಸಿಗೆಯಲ್ಲೂ ಬಹುತೇಕ ಕಾವೇರಿ ನದಿ ನೀರನ್ನೇ ಬೆಂಗಳೂರು ನೆಚ್ಚಿಕೊಂಡಿದೆ. ಆದರೆ, ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಇನ್ನೂ ಸಮರ್ಪಕವಾಗಿ ಕಾವೇರಿ ನೀರು ಸಂಪರ್ಕ ನೀಡದ ಕಾರಣ, ಆ ಭಾಗಕ್ಕೆ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಅದರಲ್ಲಿ ಬಿಬಿಎಂಪಿಯ ಕೊಳವೆಬಾವಿಗಳೂ ಸೇರ್ಪಡೆಯಾ ಗಿದೆ. ಆದರೆ, ಬಿಬಿಎಂಪಿಯ ಕೊಳವೆ ಬಾವಿಗಳನ್ನು ಸಮರ್ಪಕ ನಿರ್ವಹಣೆ ಮಾಡಲಾಗದ ಕಾರಣ, ಅವುಗಳಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಳವೆಬಾವಿಗಳ ನಿರ್ವಹಣೆಯ ಹೊಣೆಯನ್ನು ಜಲಮಂಡಳಿಗೆವಹಿಸಲಾಗುತ್ತಿದೆ.

10 ಸಾವಿರ ಕೊಳವೆಬಾವಿಗಳು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಜಲಮಂಡಳಿಗೆ ಸೇರಿದ 10,316 ಕೊಳವೆಬಾವಿಗಳಿವೆ. ಅದರಲ್ಲಿ ಬಿಬಿಎಂಪಿಗೆ ಸೇರಿದ 8,691 ಹಾಗೂ ಜಲಮಂಡಳಿಯ 1,625 ಬೋರ್‌ವೆಲ್‌ಗ‌ಳಿವೆ. ಬಿಬಿಎಂಪಿಯ ಕೊಳವೆಬಾವಿಗಳಲ್ಲಿ 7,198 ಕಾರ್ಯನಿರ್ವಹಿಸುತ್ತಿದ್ದಂತೆ, 1,493 ಕೊಳವೆಬಾವಿಗಳಿಂದ ನೀರು ಹೊರತೆಗೆಯಲಾಗದ ಪರಿಸ್ಥಿತಿಯಿದೆ. ಅದೇ ರೀತಿ ಜಲಮಂಡಳಿಯ ಕೊಳವೆ ಬಾವಿಗಳ ಪೈಕಿ 1,436 ನೀರು ಪೂರೈಕೆ ಸ್ಥಿತಿಯಲ್ಲಿದ್ದರೆ, 189 ಕಾರ್ಯನಿರ್ವಹಿಸುತ್ತಿಲ್ಲ. ಒಟ್ಟಾರೆ 8,634 ಕೊಳವೆಬಾವಿಗಳು ಕೆಲಸ ಮಾಡುತ್ತಿದ್ದರೆ, 1,682 ಕೊಳವೆಬಾವಿಗಳ ಮೋಟಾರು ಹಾಳಾಗಿರುವುದು, ನೀರು ಬರದಿರುವ ಸ್ಥಿತಿಯಲ್ಲಿವೆ. ಅವುಗಳಲ್ಲಿ ಮೋಟಾರು ಹಾಳಾಗಿರುವ ಕೊಳವೆಬಾವಿಗಳನ್ನು ದುರಸ್ತಿ ಮಾಡುವ ಹೊಣೆ ಜಲಮಂಡಳಿಯದ್ದಾಗಿದೆ.

ಬಿಬಿಎಂಪಿಯಿಂದ 40 ಕೋಟಿ ರೂ.: ನಿರ್ವಹಣೆ ಸಾಧ್ಯವಾಗದೆ ಕೊಳವೆಬಾವಿಗಳನ್ನು ಹಸ್ತಾಂತರಿಸುತ್ತಿ ರುವ ಬಿಬಿಎಂಪಿ ಅದರ ಜತೆಗೆ ಜಲಮಂಡಳಿಗೆ ಹಣವನ್ನೂ ನೀಡುತ್ತಿದೆ. ಬೋರ್‌ವೆಲ್‌ಗ‌ಳನ್ನು ನಿಯಮಿತ ಅವಧಿಯಲ್ಲಿ ಪರಿಶೀಲಿಸುವುದು, ಅವುಗಳ ಮೋಟಾರು ಕೆಲಸ ಮಾಡುತ್ತಿವೆಯೇ ಎಂಬುದನ್ನು ಪರೀಕ್ಷಿಸುವ ಕೆಲಸ ಜಲಮಂಡಳಿ ಮಾಡಲಿದೆ. ಅದಕ್ಕಾಗಿ ಬಿಬಿಎಂಪಿ ಜಲಮಂಡಳಿಗೆ ವಾರ್ಷಿಕ 40 ಕೋಟಿ ರೂ. ಹಣವನ್ನು ನೀಡಲಿದೆ. ಈಗಾಗಲೆ ಬಿಬಿಎಂಪಿ ಜಲಮಂಡಳಿಗೆ ಹಣ ವರ್ಗಾಯಿಸಿದ್ದು, ಕೊಳವೆಬಾವಿಗಳ ಹಸ್ತಾಂತರ ಪ್ರಕ್ರಿಗೆ ಚಾಲನೆಯನ್ನೂ ನೀಡಿದೆ. ಕೊಳವೆ ಬಾವಿ ಪಡೆಯುವ ಜಲಮಂಡಳಿ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಇನ್ನೂ ಕಾವೇರಿ ನೀರು ಸಂಪರ್ಕ ಸಿಗದ ಪ್ರದೇಶಗಳಿಗೆ ಕೊಳವೆಬಾವಿಯಿಂದ ಟ್ಯಾಂಕರ್‌ಗೆ ನೀರು ತುಂಬಿಸಿ ಪೂರೈಸಲಿದೆ. ಅದರಲ್ಲೂ 110 ಹಳ್ಳಿ ವ್ಯಾಪ್ತಿ ಯಲ್ಲಿ ಅಗತ್ಯವಿರುವಲ್ಲಿ ಉಚಿತವಾಗಿ ನೀರು ಸರಬ ರಾಜು ಮಾಡಬೇಕಿದೆ. ಹಾಗೆಯೇ, ಬಿಬಿಎಂಪಿ ಉದ್ಯಾನ ಸೇರಿ ಇನ್ನಿತರ ಕಡೆಗಳಿಗೆ ನೀರು ಪೂರೈಸಬೇಕಿದೆ.

ಹೆಚ್ಚುವರಿ ಕೆಲಸದಿಂದ ಮುಕ್ತಿ : ನಗರದಲ್ಲಿ ಮೂಲಸೌಕರ್ಯ ಒದಗಿಸುತ್ತಿರುವ ಬಿಬಿಎಂಪಿ ಕೊಳವೆಬಾವಿ ನಿರ್ವಹಣೆ ಹೆಚ್ಚುವರಿ ಕೆಲಸವಾಗಿತ್ತು. ಕೊಳವೆಬಾವಿಗಳ ಮೋಟಾರನ್ನು ಕಾಲಕಾಲಕ್ಕೆ ಪರಿಶೀಲಿಸುವುದು, ನೀರು ಪೂರೈಕೆಗಾಗಿ ಬೇಡಿಕೆ ಬರುವಲ್ಲಿಗೆ ನೀರು ಪೂರೈಸುವ ಕೆಲಸ ಮಾಡಬೇಕಿತ್ತು. ಆದರೆ, ಕೊಳವೆಬಾವಿಗಳನ್ನೆಲ್ಲ ಜಲಮಂಡಳಿಗೆ ವಹಿಸುತ್ತಿರುವುದರಿಂದ ಆ ಕೆಲಸಗಳು ಜಲಮಂಡಳಿ ಹೆಗಲಿಗೆ ಬಿದ್ದಂತಾಗಿದೆ.

ನಿರ್ವಹಣೆ ಸೇರಿ ಇನ್ನಿತರ ಕಾರ್ಯಕ್ಕಾಗಿ ಬಿಬಿಎಂಪಿ ಸುಪರ್ದಿಯಲ್ಲಿದ್ದ ಕೊಳವೆಬಾವಿಗಳನ್ನು ಜಲಮಂಡಳಿಗೆ ವಹಿಸಲಾಗುತ್ತಿದೆ. ಅಲ್ಲದೆ ಕೊಳವೆಬಾವಿಗಳ ನಿರ್ವಹಣೆಗಾಗಿ ಬಿಬಿಎಂಪಿಯಿಂದ ಜಲಮಂಡಳಿಗೆ 40 ಕೋಟಿ ರೂ. ನೀಡಲಾಗಿದೆ. ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

 

ಗಿರೀಶ್‌ ಗರಗ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.