ಬೋರ್‌ವೆಲ್‌ ನೀರು ಕುಡಿಯಲು ಯೋಗ್ಯವಲ್ಲ  


Team Udayavani, Nov 30, 2022, 11:36 AM IST

ಬೋರ್‌ವೆಲ್‌ ನೀರು ಕುಡಿಯಲು ಯೋಗ್ಯವಲ್ಲ  

ಬೆಂಗಳೂರು: ರಾಜಧಾನಿಯ ವ್ಯಾಪ್ತಿಯಲ್ಲಿರುವ ಕಾರ್ಖಾನೆಗಳ ಕೊಳಚೆ ನೀರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಘನತಾಜ್ಯವು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಬೆಂಗಳೂರು ಉತ್ತರ ತಾಲೂಕಿನ ಕೆಲವು ಕೆರೆಗಳನ್ನು ಸೇರುತ್ತಿದ್ದು, ಕೊಳವೆಬಾವಿಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಬರುತ್ತಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ 11 ಗ್ರಾಮಪಂಚಾಯ್ತಿಗಳಿವೆ. ಅವುಗಳಲ್ಲಿ ಕಾಚೋಹಳ್ಳಿ, ಮಚೋಹಳ್ಳಿ, ಕೊಡಿಗೆಹಳ್ಳಿ ಸೇರಿದಂತೆ ಮತ್ತಿತರರಗ್ರಾಮ ಪಂಚಾಯ್ತಿಗಳು ಬೃಹತ್‌ ಬೆಂಗಳೂರುಮಹಾನಗರಕ್ಕೆ ತಾಕಿಕೊಂಡಿವೆ. ಈ ಭಾಗದಲ್ಲಿಹಲವು ಸಂಖ್ಯೆಗಳಲ್ಲಿ ಕಾರ್ಖಾನೆಗಳು ತಲೆಎತ್ತಿದ್ದು, ಕಾರ್ಖಾನೆಯ ಕಲುಷಿತ ನೀರು ಆಗ್ರಾಮ ಗಳು ಕೆರೆಗಳನ್ನು ಸೇರಿ ಮಾಲಿನ್ಯ ಉಂಟಾಗಿದೆ. ಹೀಗಾಗಿ ಕೆಲವು ಕೆರೆಗಳು ನೊರೆಯಿಂದ ಉಕ್ಕಿ ಹರಿಯುತ್ತಿವೆ.

ಮಚೋಹಳ್ಳಿಯಲ್ಲಿ ಎರಡು, ಕಾಚೋಹಳ್ಳಿಹಾಗೂ ಕೊಡಿಗೆಹಳ್ಳಿಯಲ್ಲಿ ಒಂದು ಕೆರೆಗಳಿದ್ದು, ಈ ಕೆರೆಗಳ ನೀರು ಪೀಣ್ಯ ಸೇರಿದಂತೆ ಮತ್ತಿತರರ ಭಾಗದಿಂದ ಬರುವ ಕಾರ್ಖಾನೆಗಳ ಕಲುಷಿತ ನೀರು ಸೇರಿ ಮಲಿನಗೊಂಡಿದ್ದು ಪ್ರತಿದಿನ ನೊರೆಯಿಂದ ಉಕ್ಕುತ್ತಿವೆ. ಜತೆಗೆ ಆ ಭಾಗದಕೆರೆಗಳಲ್ಲಿ ಸಂಗ್ರಹವಾದ ನೀರಿನಿಂದ ಗಬ್ಬು ವಾಸನೆಬರುತ್ತಿದ್ದು ಸ್ಥಳೀಯರು ಆರೋಗ್ಯದ ಬಗ್ಗೆ ಆತಂಕಗೊಂಡಿದ್ದಾರೆ.

ಗಂಗೊಂಡನಹಳ್ಳಿ ಕೆರೆಯ ಮಲಿನ ನೀರು ಲಕ್ಕೇನಹಳ್ಳಿ ಕೆರೆಗೆ, ಲಕ್ಕೇ ನಹಳ್ಳಿ ಕೆರೆ ನೀರು ಮಾಚೋಹಳ್ಳಿ ಕೆರೆಗೆ ಹರಿಯುತ್ತದೆ. ಕಾಚೋಹಳ್ಳಿ ಗ್ರಾಮದ ಕೆರೆಯಲ್ಲಿ ಅಂತರಗಂಗೆ ಸಸಿ ಬೆಳೆದಿದ್ದು ನೀರು ಕಲುಷಿತಗೊಂಡಿದೆ. ಆ ಕೆರೆಯ ನೀರು ಕೂಡ ಮಾಚೋಹಳ್ಳಿ ಕೆರೆಗೆ ಬಂದು ಸೇರುತ್ತದೆ. ಮೂರು ಕೆರೆಗಳ ಕಲುಷಿತ ನೀರು ಮಾಚೋಹಳ್ಳಿಕೆರೆಗೆ ಬಂದು ಸೇರುತ್ತಿರುವುದರಿಂದ ಕೃಷಿ ಭೂಮಿಯ ಫಲವತ್ತತೆ ಹಾಳಾಗಿದೆ ಎಂದು ರೈತರ ಆಳಲು ತೋಡಿಕೊಳ್ಳುತ್ತಾರೆ.

ಮಾಚೋಹಳ್ಳಿ ಕೆರೆಯ ಆಸುಪಾಸಿನಲ್ಲಿ ಮೆಕ್ಕೆಜೋಳ, ಅವರೆ, ಟೊಮೆಟೋ ಬೆಳೆಯಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯತ್ತಿನ ಈ ಭಾಗದ ಅವರೆ, ಟೊಮೆ ಟೋಬೆಳೆಗಳನ್ನು ಜನರು ಖರೀದಿಸಲು ಹಿಂದೇಟು ಹಾಕಬಹುದು ಎಂದು ಹೇಳುತ್ತಾರೆ.

ಬೋರ್‌ವೆಲ್‌ನಲ್ಲಿ ಕಲುಷಿತ ನೀರು: ಕಾಚೋಹಳ್ಳಿ ವ್ಯಾಪ್ತಿಯಲ್ಲಿ 15 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಜನರು ನೆಲೆಸಿದ್ದಾರೆ. ಕುಡಿಯುವ ನೀರಿಗಾಗಿ ಕೊರೆದ ಬೋರ್‌ವೆಲ್‌ ನಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಬಂದ ಹಿನ್ನೆಲೆಯಲ್ಲಿ ಆ ಬೋರ್‌ವೆಲ್‌ ಸ್ಥಗಿತಗೊಳಿಸಿಲಾಗಿದೆ. ಉತ್ತರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಕೊರೆದ ಬೋರ್‌ವೆಲ್‌ಗಳಲ್ಲಿ ಕಲುಷಿತ ನೀರು ಬಂದಿರುವುದು ಇದೆ ಎಂದು ಬೆಂಗಳೂರು ಉತ್ತರ ತಾಲೂಕಿನ ಅಧಿಕಾರಿಗಳು ಹೇಳುತ್ತಾರೆ.

ಕೊಡಿಗೆಹಳ್ಳಿಯಲ್ಲಿ ಬಿಬಿಎಂಪಿಯ ಘನತ್ಯಾಜ್ಯ ವಿಲೇವಾರಿ ಘಟಕವಿದೆ. ಅಲ್ಲಿ ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಆ ಭಾಗದ ವ್ಯಾಪ್ತಿಯಲ್ಲಿ ನೊಣಗಳು ಸಂಖ್ಯೆ ಅಧಿಕವಿರುವುದರ ಜತೆ ಘನತಾಜ್ಯ ಕೂಡ ನಾರುತ್ತಿದೆ. ಪಾಲಿಕೆಯ ಗಮನಕ್ಕೆ ತರಲಾಗಿದೆ. ಆದರೆ ಈ ಬಗ್ಗೆ ಅಧಿಕಾರಿಗಳು ಯಾವುದೇ ರೀತಿಯ ಗಮನ ನೀಡುತ್ತಿಲ್ಲ ಎಂದು ಸ್ಥಳೀಯರು ದೂರುತ್ತಾರೆ.

ಸ್ಪಂದಿಸದ ಮಾಲಿನ್ಯ ಇಲಾಖೆ, ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಮೊರೆ :

ಈ ಸಂಬಂಧ ಕೆಲವು ಗ್ರಾಮ ಪಂಚಾಯ್ತಿಗಳೂ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಗೂ ಪತ್ರ ಬರೆಯಲಾಗಿದೆ. ಆದರೆ ಯಾವುದೇ ರೀತಿಯ ಪ್ರಯೋಜನ ವಾಗಿಲ್ಲ. ಹೀಗಾಗಿ, ಬೆಂಗಳೂರು ನಗರ ಉತ್ತರ ತಾಲೂಕಿನ ಹಿರಿಯ ಅಧಿಕಾರಿಗಳು ಈ ಬಗ್ಗೆ ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅವರ ಸಲಹೆ

ಮೊರೆ ಹೋಗಿದ್ದಾರೆ. ಶೀಘ್ರದಲ್ಲಿ ಯಲ್ಲಪ್ಪ ರೆಡ್ಡಿ ಅವರಿಂದ ಸ್ಥಳ ಪರಿಶೀಲನೆ ನಡೆಸಿ ಈ ಬಗ್ಗೆ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡುವ ಆಲೋಚನೆ ನಡೆಸಿದ್ದಾರೆ. ಇತ್ತೀಚಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ದಿಶಾ ಸಭೆಯಲ್ಲೂ ಕೂಡ ಈ ಬಗ್ಗೆ ಬೆಳಕು ಚೆಲ್ಲಲಾಯಿತು

ಕೆಲವು ಗ್ರಾಮ ಪಂಚಾಯ್ತಿಯ ಬೋರ್‌ವೆಲ್‌ಗ‌ಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಬರುತ್ತಿವೆ ಎಂಬ ಮಾಹಿತಿ ಜಿಪಂ ಗಮನಕ್ಕೆ ಬಂದಿದೆ. ಜತೆಗೆಕಾರ್ಖಾನೆ ಯಿಂದ ಹೊರಹೋಗುವ ಮಲಿನ ನೀರು ಕೂಡ ಗ್ರಾಮಗಳ ಕೆರೆಗಳನ್ನು ಸೇರುತ್ತಿದೆ ಎಂಬ ದೂರು ಇದೆ. ಆ ಹಿನ್ನೆಲೆಯಲ್ಲಿ ಪಾಲಿಕೆ ಹಾಗೂ ಮಾಲಿನ್ಯ ಮಂಡಳಿಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.-ಸಂಗಪ್ಪ ಸಿಇಒ, ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.