ಪ್ರೇಯಸಿಗಾಗಿ 65 ಲಕ್ಷ ಕಳವು
Team Udayavani, Feb 10, 2021, 1:04 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಇತ್ತೀಚೆಗಷ್ಟೇ ಸುಬ್ರಹ್ಮಣ್ಯನಗರದಲ್ಲಿ ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನದ ಚಾಲಕನೇ ಹಣವಿರುವ ಬ್ಯಾಗ್ಗಳನ್ನು ಹೊತ್ತೂಯ್ದ ಪ್ರಕರಣ ಮತ್ತೂಂದು ತಿರುವು ಪಡೆದುಕೊಂಡಿದ್ದು, ಪ್ರೇಯಸಿ ಜತೆ ಹೊಸ ಜೀವನ ಆರಂಭಿಸಲು ಈ ಕೃತ್ಯ ಎಸಗಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯವಾಗಿದೆ.
ಒಂದು ವಾರದಿಂದ ತಲೆಮರೆಸಿಕೊಂಡಿರುವ ಹಾಸನ ಮೂಲದ ಯೋಗೇಶ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಯೋಗೇಶ್ ನಗರದ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಏಳು ದಿನಗಳ ಹಿಂದೆಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಬ್ಯಾಂಕ್ನಎಟಿಎಂ ಕೇಂದ್ರಕ್ಕೆ ಹಣ ತುಂಬಲು ಗನ್ ಮ್ಯಾನ್ ಮತ್ತು ಮ್ಯಾನೆಜರ್ ಜತೆ ಹೋಗಿದ್ದ. ಈ ವೇಳೆ ಗನ್ಮ್ಯಾನ್ ಮತ್ತು ಮ್ಯಾನೆಜರ್ ಎಟಿಎಂ ಕೇಂದ್ರಕ್ಕೆ ಹಣತುಂಬಲು ಒಳಗೆ ಹೋಗಿದ್ದರು. ಆಗ ಆರೋಪಿ ವಾಹ ನದಲ್ಲಿದ್ದ ಸುಮಾರು 65 ಲಕ್ಷ ರೂ. ಅನ್ನು ಬ್ಯಾಗ್ವೊಂದರಲ್ಲಿ ತುಂಬಿಕೊಂಡು ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಕೆಲ ಹೊತ್ತಿನ ಬಳಿಕ ಇಬ್ಬರು ಸಿಬ್ಬಂದಿ ವಾಹನದ ಬಳಿ ಬಂದಾಗ ಆರೋಪಿ ಮತ್ತು ಹಣವಿದ್ದ ಬ್ಯಾಗ್ಗಳು ನಾಪತ್ತೆಯಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ : ಕೆಂಪುಕೋಟೆ ಹಿಂಸಾಚಾರ ಕೇಸ್; ಮತ್ತೊಬ್ಬ ಮೋಸ್ಟ್ ವಾಂಟೆಡ್ ಇಕ್ಬಾಲ್ ಸಿಂಗ್ ಬಂಧನ
ಅತ್ತೆ ಮಗಳಿಗಾಗಿ ಪರಾರಿ?: ಯೋಗೇಶ್ಗೆ ಈಗಾಗಲೇ ಮದುವೆಯಾಗಿದ್ದು, ನಂದಿನಿ ಲೇಔಟ್ನಲ್ಲಿ ವಾಸವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆದರೂ ಯೋಗೇಶ್ ಅತ್ತೆ ಮಗಳನ್ನು ಪ್ರೀತಿಸುತ್ತಿದ್ದ. ಮತ್ತೂಂದೆಡೆ ಆತನ ಅತ್ತೆ ಮಗಳು ಕೂಡ ಪತಿಯಿಂದ ದೂರವಾಗಿದ್ದರು ಎನ್ನಲಾಗಿದೆ. ಹೀಗಾಗಿ 65 ಲಕ್ಷ ರೂ. ಕದ್ದು ಆಟೋದಲ್ಲಿ ಪರಾರಿಯಾದ ಯೋಗೇಶ್, ನೇರವಾಗಿ ಅತ್ತೆ ಮಗಳನ್ನು ಕರೆದುಕೊಂಡು ಉತ್ತರ ಭಾರತದ ಕಡೆ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ. ಯೋಗೇಶ್ ಮತ್ತು ಆತನ ಪ್ರೇಯಸಿಯ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?