ಬಿಜೆಪಿಯಿಂದ ಯುವಕರ ಬ್ರೇನ್‌ ವಾಶ್‌


Team Udayavani, Oct 24, 2019, 3:06 AM IST

bjpinda-yu

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ವತಿಯಿಂದ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜಭವನ ಮುತ್ತಿಗೆ ಹಾಕಲು ಪ್ರಯತ್ನಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾ ಸಭೆ ನಡೆಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು, ನಂತರ ರಾಜಭವನ ಮುತ್ತಿಗೆ ರ್ಯಾಲಿ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಬಿಜೆಪಿಯವರು ಯುವಕರ ಬ್ರೇನ್‌ ವಾಶ್‌ ಮಾಡುತ್ತಿದ್ದಾರೆ. ದೇಶದಲ್ಲಿ 70 ವರ್ಷ ಕಾಂಗ್ರೆಸ್‌ ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ.

ಜವಾಹರಲಾಲ್‌ ನೆಹರೂ ದೇಶವನ್ನು ಸರಿಯಾಗಿ ಆಳ್ವಿಕೆ ಮಾಡದಿದ್ದರೆ, ಈಗ ನೀವು ಅಧಿಕಾರದಲ್ಲಿ ಇರುತ್ತಿರಲಿಲ್ಲ. ಕಾಂಗ್ರೆಸ್‌ನವರ ತ್ಯಾಗ ಬಲಿದಾನದಿಂದಲೇ ಬಿಜೆಪಿ ಅಧಿಕಾರದಲ್ಲಿರುವುದು ಎಂದು ಹೇಳಿದರು. ಕಾಂಗ್ರೆಸ್‌ನವರು ಸಮಾಜದ ಎಲ್ಲ ಜನರ ಬಗ್ಗೆ ಮಾತನಾಡುತ್ತೇವೆ. ಆದರೆ, ಬಿಜೆಪಿಯವರು ಜಾತಿ ಮೇಲೆ ರಾಜಕಾರಣ ಮಾಡುತ್ತಾರೆ. ದೇಶದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿವೆ. ಆರ್ಥಿಕ ಪರಿಸ್ಥಿತಿ ಕುಸಿತಗೊಂಡಿದೆ.

ಕಾರ್ಖಾನೆಗಳು ಮುಚ್ಚಿ ಹೋಗುತ್ತಿವೆ. ಆರ್ಥಿಕ ಹಿಂಜರಿತ ಜನರ ಸಮಸ್ಯೆಯ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ. ಟಿಪ್ಪು, ಸಾವರ್ಕರ್‌, ಆರ್ಟಿಕಲ್‌ 370 ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸತತ ನೆರೆಯಿಂದ ಲಕ್ಷಾಂತರ ಮನೆಗಳು ಬಿದ್ದಿವೆ. ಈಗ ಸುರಿಯುತ್ತಿರುವ ಮಳೆಯಿಂದ ಮತ್ತೆ ಮನೆಗಳು ನೆಲಸಮಗೊಂಡಿದ್ದು, 12 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಆದರೆ, ಸರ್ಕಾರ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವುದಕ್ಕೆ ಗಮನ ಹರಿಸದೇ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಹುಡುಕುವುದರಲ್ಲಿ ಸಕ್ರೀಯರಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಜಾನೆಯಲ್ಲಿ ಹಣ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಹೇಳಬೇಕಿತ್ತು. ಆದರೆ, ಅಂತಹ ಧೈರ್ಯವನ್ನು ಮೋದಿ ಮಾಡಲಿಲ್ಲ.

ಪ್ರಧಾನಿಗೆ ವಿದೇಶ ಪ್ರವಾಸ ಮಾಡಲು ಪಕ್ಕದ ತಮಿಳುನಾಡಿನ ಮಹಾಬಲಿಪುರಂನಲಿ ಕೂರಲು ಸಮಯ ಇದೆ. ಆದರೆ, ಕರ್ನಾಟಕದ ಬಡವರ ಸಮಸ್ಯೆ ಆಲಿಸಲು ಸಮಯವಿಲ್ಲ ಎಂದು ವಾಗ್ಧಾಳಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಾತನಾಡಿ, ಉತ್ತರ ಕರ್ನಾಟಕದ ಜನರು ಪ್ರವಾಹದಲ್ಲಿ ಮುಳುಗಿದರೂ ಪ್ರಧಾನಿ ತಿರುಗಿ ನೋಡುತ್ತಿಲ್ಲ. ಚಂದ್ರಯಾನ ಕಾರ್ಯಕ್ರಮಕ್ಕೆ ಬರುತ್ತಾರೆ. ಜನರ ಕಷ್ಟ ಕೇಳಲು ಬರುತ್ತಿಲ್ಲ. ಪರಿಹಾರವನ್ನೂ ನೀಡುತ್ತಿಲ್ಲ ಎಂದು ಆರೋಪಿಸಿದರು.

ಮನಮೋಹನ್‌ ಸಿಂಗ್‌ರಿಂದ ತರಬೇತಿ ಪಡೆಯಿರಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಂದ ಟ್ಯೂಶನ್‌ ಹೇಳಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುತ್ತೇನೆ ಎಂದು ಎಐಸಿಸಿ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ವ್ಯಂಗ್ಯವಾಡಿದ್ದಾರೆ.

ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಯಕ್ಕೆ ಮೊದಲ ಬಾರಿ ಭೇಟಿ ನೀಡಿ, ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದ ಅವರು, ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕದಿಂದ ಆಯ್ಕೆಯಾಗಿ ರಾಜ್ಯಕ್ಕೆ ಪ್ರವಾಹ ಪರಿಹಾರ ಕೊಡಿಸದೇ ಅನ್ಯಾಯ ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಬಳಿ ಟ್ಯೂಶನ್‌ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿಕೊಡುತ್ತೇನೆ. ಅವರು ಕರ್ನಾಟಕಕ್ಕೆ ಬಂದರೆ, ವಾಪಸ್‌ ಜಾವೊ ಚಳವಳಿ ನಡೆಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.