Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ


Team Udayavani, May 4, 2024, 10:57 AM IST

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

ಬೆಂಗಳೂರು: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜಪೇಟೆ ದಾಸಪ್ಪ ಗಾರ್ಡನ್‌ ನಿವಾಸಿ ಆನಂದ್‌ (34), ಶ್ರೀನಗರ ರಾಘವೇಂದ್ರ ಬ್ಲಾಕ್‌ ನಿವಾಸಿ ನಾರಾಯಣ (43) ಹಾಗೂ ಕುಮಾರಸ್ವಾಮಿ ಲೇಔಟ್‌ ನಿವಾಸಿ ಕಿರಣ್‌ (33) ಬಂಧಿತರು.

ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 3.70 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರೋಪಿಗಳ ಪೈಕಿ ಕಿರಣ್‌ ಸಲೂನ್‌ ನಡೆಸುತ್ತಿದ್ದ. ಆನಂದ್‌ ಲಿಫ್ಟ್ ಟೆಕ್ನಿಷಿಯನ್‌ ಹಾಗೂ ಕಬಾಬ್‌ ಅಂಗಡಿ ನಡೆಸುತ್ತಿದ್ದ. ನಾರಾಯಣ್‌ ಫ‌ುಡ್‌ ಡೆಲಿವರಿ ಬಾಯ್‌ ಆಗಿದ್ದ. ಮೂವರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ದೂರುದಾರೆ ಮತ್ತು ಆಕೆಯ ಕುಟುಂಬದ ಬಗ್ಗೆ ತಿಳಿದುಕೊಂಡಿದ್ದ ಕಿರಣ್‌, ತನ್ನ ಸ್ನೇಹಿತರ ಜತೆ ಸಂಚು ರೂಪಿಸಿ ಮನೆ ಕಳ್ಳತನ ಮಾಡಿ ದ್ದಾನೆ. ಕಿರಣ್‌ ನಡೆಸುತ್ತಿದ್ದ ಸಲೂನ್‌ ಮಳಿಗೆ ಮುಂಭಾಗವೇ ದೂರುದಾರೆಯ ತಂದೆ ಮೊಟ್ಟೆ ಮಾರಾಟ ಮಳಿಗೆ ನಡೆಸುತ್ತಿದ್ದರು. ಹೀಗಾಗಿ ದೂರು ದಾರೆ ಮತ್ತು ಆಕೆಯ ಕುಟುಂಬ ಸದಸ್ಯರ ಚಟು ವಟಿಕೆ ಗಳು ಹಾಗೂ ಆರ್ಥಿಕ ಸ್ಥಿತಿ ಬಗ್ಗೆ ತಿಳಿದುಕೊಂಡಿದ್ದ. ಮೊದಲೇ ಸಂಚು ರೂಪಿಸಿದಂತೆ ಆರೋಪಿ ಕಿರಣ್‌ ಉಚಿತ ಮೇಕಪ್‌ ಮಾಡಿಸುವುದಾಗಿ ಹೇಳಿ ನಾಲ್ವರು ಯುವತಿಯರನ್ನು ತನ್ನ ಮನೆಗೆ ಕರೆಸಿದ್ದ. ಮೇಕಪ್‌ ಮಾಡಬೇಕೆಂದು ಹೇಳಿ ದೂರುದಾರೆ ಬ್ಯೂಟಿಷಿಯನ್‌ ರನ್ನೂ ಮನೆಗೆ ಕರೆಸಲಾಗಿತ್ತು. ಮೇಕಪ್‌ ಮಾಡುವ ಸಂದರ್ಭದಲ್ಲಿ ಬ್ಯೂಟಿಷಿಯನ್‌ರ ಗಮನ ಬೇರೆಡೆ ಸೆಳೆದು ಆಕೆಯ ಪರ್ಸ್‌ನಲ್ಲಿದ್ದ ಮನೆ ಬೀಗದ ಕೀ ಕಳವು ಮಾಡಿದ್ದ. ಅದನ್ನು ತನ್ನ ಸಹಚರರಿಗೆ ಕೊಟ್ಟು ನಕಲಿ ಕೀ ಮಾಡಿಸಿಕೊಂಡಿದ್ದ.

ಬಳಿಕ ಅಸಲಿ ಕೀಯನ್ನು ಆಕೆಯ ಪರ್ಸ್‌ನಲ್ಲೇ ಇಟ್ಟಿದ್ದರು. ಕೆಲಸ ಮುಗಿಸಿ ಬ್ಯೂಟಿಷಿಯನ್‌ ಮನೆಗೆ ವಾಪಸ್‌ ಹೋಗಿದ್ದರು. ಕೆಲ ದಿನಗಳ ಬಳಿಕ ಮಾ. 29ರಂದು ಬ್ಯೂಟಿಷಿಯನ್‌ ಮನೆಯಲ್ಲಿ ಯಾರೂ ಇರಲಿಲ್ಲ. ಇದೇ ಸಂದರ್ಭದಲ್ಲಿ ನಕಲೀ ಕೀ ಬಳಸಿ ಒಳನುಗ್ಗಿದ್ದ ಆರೋಪಿಗಳು, ಚಿನ್ನಾಭರಣ ಹಾಗೂ ನಗದು ದೋಚಿ ಪರಾಗಿಯಾಗಿದ್ದರು. ಕಳವು ಚಿನ್ನಾ ಭರಣಗಳನ್ನು ಮಾರಾಟ ಮಾಡಿ, ತಮ್ಮ ಸಾಲ ಹಾಗೂ ಮೋಜಿನ ಜೀವನ ನಡೆಸಿದ್ದರು ಎಂದು ಹೇಳಿದರು.

ಆಟೋ ಕೊಟ್ಟ ಸುಳಿವು: ಬ್ಯೂಟಿಷಿಯನ್‌ ಮನೆ ಯಲ್ಲಿದ್ದ ಸಿಸಿ ಕ್ಯಾಮರಾಗಳು ನಿಷ್ಕ್ರಿಯ ಗೊಂಡಿತ್ತು. ಆರಂಭದಲ್ಲಿ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಮನೆ ಸಮೀಪದ ಬೇರೊಂದು ಕ್ಯಾಮರಾದಲ್ಲಿ ಆರೋಪಿ ಗಳು ಆಟೋದಲ್ಲಿ ಹೋಗಿದ್ದು ಗೊತ್ತಾಗಿತ್ತು. ಅದರ ನೋಂದಣಿ ಸಂಖ್ಯೆ ಆಧರಿಸಿ, ಆಟೋ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳ ಸುಳಿವು ಪತ್ತೆಯಾಯಿತು. ಈ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.