ವಿಕಾಸಸೌಧದಲ್ಲಿಯೇ ಲಂಚದ ಡೀಲ್‌: ಆರೋಪಿಗಳ ಬಂಧನ


Team Udayavani, Jan 16, 2019, 6:25 AM IST

vikasasowda.jpg

ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿರುವ ಸಂಬಂಧ ವಿಧಾನಸೌಧ ಪೊಲೀಸರು ಬಂಧಿಸಲಾಗಿರುವ ಮೂವರು ಆರೋಪಿಗಳು ವಿಕಾಸಸೌಧದಲ್ಲಿಯೇ ಡೀಲ್‌ ಕುದುರಿಸುತ್ತಿದ್ದರು ಎಂಬುದು ವಿಚಾರಣೆಯಲ್ಲಿ ತಿಳಿದು ಬಂದಿದೆ.

ಬಂಧನಕ್ಕೊಳಗಾಗಿರುವ ಆರೋಗ್ಯ ಇಲಾಖೆ ಉಪಕಾರ್ಯದರ್ಶಿ ರಾಮಚಂದ್ರಯ್ಯ, ಅನುದಾನಿತ ಪಿಯು ಕಾಲೇಜಿನ ಉಪನ್ಯಾಸಕ ದೇವರಾಜ್‌, ಖಾಸಗಿ ಶಾಲಾ ಶಿಕ್ಷಕ ಲಕ್ಷ್ಮೀನಾರಾಯಣ, ಚನ್ನಪಟ್ಟಣದ ಶ್ರೀಕಂಠಯ್ಯ ಸೇರಿ ನಾಲ್ವರಿಗೆ ವಂಚಿಸಿದ್ದಾರೆ.

ದೂರುದಾರ ಶ್ರೀಕಂಠಯ್ಯ ಅವರಿಗೆ 2016ರಲ್ಲಿ ಸ್ನೇಹಿತರೊಬ್ಬರ ಮೂಲಕ ಲಕ್ಷ್ಮೀನಾರಾಯಣ್‌ ಪರಿಚಯವಾಗಿದೆ. ಪದವಿ ಪೂರೈಸಿದ್ದ ಶ್ರೀಕಂಠಯ್ಯ ಅವರ ಸಹೋದರಿ ಅಂಜನಾ ಅವರು ಸರ್ಕಾರಿ ಹುದ್ದೆ ಆಕಾಂಕ್ಷಿಯಾಗಿದ್ದು, ಸ್ಫರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.

ಈ ಮಾಹಿತಿ ತಿಳಿದುಕೊಂಡಿದ್ದ ಲಕ್ಷ್ಮೀನಾರಾಯಣ್‌, ಆರೋಗ್ಯ ಇಲಾಖೆ ಉಪಕಾರ್ಯದರ್ಶಿ ರಾಮಚಂದ್ರಯ್ಯ ಅವರ ಮೂಲಕ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಹಾಗೂ ದೇವರಾಜು ಅರಸು ನಿಗಮದಲ್ಲಿ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆ ಕೊಡಿಸುವುದಾಗಿ ಹೇಳಿದ್ದರು. ಇದೇ ವಿಚಾರಕ್ಕೆ ರಾಮಚಂದ್ರಯ್ಯ, ದೇವರಾಜ್‌ ಹಾಗೂ ಲಕ್ಷ್ಮೀನಾರಾಯಣ್‌ ಜತೆ ವಿಧಾನಸೌಧದಲ್ಲಿ ಮಾತುಕತೆ ನಡೆದು 12 ಲಕ್ಷ ರೂ. ನೀಡಿದರೆ ಆರು ತಿಂಗಳಲ್ಲಿ ಹುದ್ದೆ ಕೊಡಿಸುವುದಾಗಿ ಭರವಸೆ ನೀಡಿದ್ದರು.

ಕರಾರು: ಮೊದಲಹಂತದ ಅಡ್ವಾನ್ಸ್‌ ರೂಪದಲ್ಲಿ 2016ರ ಅ. 10ರಂದು ವಿಕಾಸಸೌಧದ ಕೆಳಮಹಡಿಯಲ್ಲಿ ಶ್ರೀಕಂಠಯ್ಯ ಅವರಿಂದ ಆರೋಪಿಗಳು 6 ಲಕ್ಷ ರೂ. ಪಡೆದಿದ್ದರು. ಬಳಿಕ ಅದೇ ರೀತಿ ಸತೀಶ್‌, ಪುಟ್ಟತಾಯಮ್ಮ, ಅಭಿಷೇಕ್‌ ಅವರಿಂದಲೂ ತಲಾ ಆರು ಲಕ್ಷ ರೂ. (18 ಲಕ್ಷ ರೂ.) ಪಡೆದುಕೊಂಡಿದ್ದರು.

ಉದ್ಯೋಗ ಕೊಡಿಸದಿದ್ದರೆ ಹಣ ವಾಪಸ್‌ ಕೊಡುವುದಾಗಿ ಆರೋಪಿಗಳು ಕರಾರು ಮಾಡಿಕೊಂಡಿದ್ದರು. ಆದರೆ,ಆರು ತಿಂಗಳಾದರೂ ಹುದ್ದೆ ಕೊಡಿಸದೆ ಸಬೂಬು ಹೇಳುತ್ತಿದ್ದರು. ಕಡೆಗೆ ಹುದ್ದೆಯೂ ಕೊಡಿಸದೇ ಹಣವೂ ವಾಪಸ್‌ ನೀಡದೆ ವಂಚಿಸಿರುವುದಾಗಿ ದೂರುದಾರರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಹಣ ಪಡೆದಿರುವುದು ಸಾಬೀತು: 24 ಲಕ್ಷ ರೂ.ಹಣದಲ್ಲಿ ರಾಮಚಂದ್ರಯ್ಯ 10 ಲಕ್ಷ ರೂ, ಲಕ್ಷ್ಮೀನಾರಾಯಣ 6 ಲಕ್ಷ ರೂ, ದೇವರಾಜು 8 ಲಕ್ಷ ರೂ. ಪಡೆದುಕೊಂಡಿರುವುದು ತನಿಖೆಯಿಂದ ಸಾಬೀತಾಗಿದೆ. ಸದ್ಯ ಲಕ್ಷ್ಮೀನಾರಾಯಣ ಹಾಗೂ ದೇವರಾಜು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು.

ಪ್ರಮುಖ ಆರೋಪಿ ರಾಮಚಂದ್ರಯ್ಯ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದಿಂದ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಈ ಹಿಂದೆಯೂ ಹಲವರಿಗೆ ಸರ್ಕಾರಿ ಹುದ್ದೆ ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚಿಸಿರುವ ಆರೋಪ ಪ್ರಕರಣದಲ್ಲಿ ಉಪ್ಪಾರಪೇಟೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 

ಮನವಿಗೆ ಸ್ಪಂದಿಸಿದ ಸಿಎಂ: 24 ಲಕ್ಷ ರೂ. ಕಳೆದುಕೊಂಡು ಕಂಗಾಲಾಗಿದ್ದ ಶ್ರೀಕಂಠಯ್ಯ ಹಾಗೂ ಮತ್ತಿತರರು ಈ ಕುರಿತು ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಜೆ.ಪಿ ನಗರದ ನಿವಾಸದಲ್ಲಿ ಜ.11ರಂದು ಬೆಳಗ್ಗೆ ಭೇಟಿಯಾಗಿ ಮನವಿಪತ್ರ ಸಲ್ಲಿಸಿದ್ದು, ಅಳಲು ತೋಡಿಕೊಂಡಿದ್ದಾರೆ. ಮನವಿ ಸ್ವೀಕರಿಸಿದ ಸಿಎಂ ಕೂಡಲೇ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ದೂರುದಾರರು ತಿಳಿಸಿದರು.

ಕುದುರೆ ರೇಸ್‌ನಲ್ಲಿ ಹಣ ಕಳೆದರು?: ಆರೋಪಿ ರಾಮಚಂದ್ರ, ಕುದುರೆ ರೇಸ್‌ ಹಾಗೂ ಜೂಜು ಪ್ರಿಯನಾಗಿದ್ದು, ವಂಚಿಸಿದ ಹಣವನ್ನೂ ಕುದುರೆ ರೇಸ್‌ನಲ್ಲಿ ಕಳೆದಿರುವುದಾಗಿ ಹೇಳುತ್ತಿದ್ದಾನೆ. ವಂಚನೆ ಹಣ ಏನು ಮಾಡಿದ ಎಂಬುದು ಖಚಿತವಾಗಿ ಹೇಳುತ್ತಿಲ್ಲ, ಆತನ ಪೂರ್ವಾಪರ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.