ಮಳೆ ನಿಂತ್ರೂ ಸೇತುವೆ ನೀರು ನಿಲ್ಲಲ್ಲ!


Team Udayavani, Aug 16, 2019, 3:08 AM IST

male-nintru

ಬೆಂಗಳೂರು: ಸಂಚಾರ ದಟ್ಟಣೆ ನಿವಾರಣೆಗೆ ಬಿಡಿಎ, ಬಿಬಿಎಂಪಿ, ರೈಲ್ವೆ ಇಲಾಖೆ ಜತೆಗೂಡಿ ನಗರದ ಹಲವೆಡೆ ಮೇಲ್ಸೇತುವೆಗಳನ್ನು ನಿರ್ಮಿಸಿದ್ದು, ಸೂಕ್ತ ನಿರ್ವಹಣೆ ಇಲ್ಲದೇ ಈಗ ನೀರು ಸೋರುತ್ತಿದೆ! ಮೇಲ್ಸೇತುವೆಯಲ್ಲಿ ಸಂಗ್ರಹವಾಗುವ ನೀರು ಸರಾಗವಾಗಿ ಹರಿಯಲು ಅಳವಡಿಸಲಾಗಿದ್ದ ಪೈಪ್‌ಗ್ಳು ಒಡೆದಿದ್ದು, ಸಿಮೆಂಟ್‌ ಬಿರುಕು ಬಿಟ್ಟಿದೆ. ಮಳೆನೀರು ಹೋಗಬೇಕಾದ ಮಾರ್ಗದಲ್ಲಿ ಹೂಳು ತುಂಬಿದ್ದು, ಸೇತುವೆಯಿಂದ ನೀರು ಸೋರುತ್ತಿದೆ.

ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಕಿರಿ ಕಿರಿ ಉಂಟಾಗುತ್ತಿದ್ದು, ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ. 2003ರಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ರಿಚ್ಮಂಡ್‌ ವೃತ್ತದ ಬಳಿ ಮೇಲ್ಸೇತುವೆ ನಿರ್ಮಾಣವಾಗಿದ್ದು, 2016ರಲ್ಲಿ ಪಾಲಿಕೆ 1.53 ಕೋಟಿ ರೂ. ವೆಚ್ಚದಲ್ಲಿ ಅದರ ರಿಪೇರಿ ಮಾಡಿದೆ. ಆದರೆ, ಪ್ರಸ್ತುತ ನೀರು ಹರಿಯುವ ಪೈಪ್‌ಗ್ಳು ಒಡೆದಿದ್ದು, ಸಿಮೆಂಟ್‌ ಬಿರುಕು ಬಿಟ್ಟಿದೆ. ಸೇತುವೆ ಕೆಳ ಭಾಗದಲ್ಲಿ ಸಂಚರಿಸುವ ಬೈಕ್‌ ಸವಾರರು ಮಳೆ ನಿಂತರೂ ನೆನೆಯಬೇಕಿದೆ.

ನಾಯಂಡಹಳ್ಳಿ ಮೇಲ್ಸೇತುವೆಯನ್ನು ಬಿಡಿಎ 2010ರಲ್ಲಿ ನಿರ್ಮಿಸಿದ್ದು, 900 ಮೀ. ಉದ್ದವಿದೆ. ಒಟ್ಟು 86.75 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆದಿದೆ. ಪ್ರಸ್ತುತ ಈ ಸೇತುವೆ ನಿರ್ವಹಣೆ ಹೊಣೆ ಬಿಬಿಎಂಪಿ ಮೇಲಿದೆ. ನೀರು ಹೋಗುವ ಪೈಪ್‌ಗ್ಳಲ್ಲಿ ಹೂಳು ತುಂಬಿರುವ ಪರಿಣಾಮ, ಮಳೆ ನೀರು ಸೇತುವೆ ಮೇಲೆಯೇ ಸಂಗ್ರಹವಾಗಿ, ನಾಯಂಡಹಳ್ಳಿ ಜಂಕ್ಷನ್‌ ಬಳಿ ಭಾರೀ ಪ್ರಮಾಣದ ನೀರು ಸೇತುವೆ ಮೇಲಿಂದ ಸುರಿಯುತ್ತಿದೆ.

ನೀರು ಬೀಳುವ ಸ್ಥಳದಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದ ಅಪಘಾತ ಸಂಭವಿಸುವ ಆತಂಕದಲ್ಲಿ ಸಂಚರಿಸಬೇಕಾದ ಸ್ಥಿತಿ ಎದುರಾಗಿದೆ. ನಾಯಂಡಹಳ್ಳಿ ಮೇಲ್ಸೇತುವೆ ಡಿವೈಡರ್‌ನಲ್ಲಿ ಬೆಳೆದಿರುವ ಗಿಡಗಳನ್ನು ಸ್ವತ್ಛಗೊಳಿಸಿಲ್ಲ. ನೀರು ಹೋಗುವ ಪೈಪ್‌ಗ್ಳನ್ನು ರಿಪೇರಿ ಮಾಡದೆ ಮೇಲ್ಸೇತುವೆಗೆ ನಾಮಕೆವಾಸ್ತೆ ಬಣ್ಣ ಹಚ್ಚಲಾಗಿದೆ. ಇತ್ತೀಚೆಗೆ ಮೇಲ್ಸೇತುವೆ ಕೆಳಗೆ ಸಂಚರಿಸುವಾಗ ನನ್ನ ಮೇಲೂ ನೀರು ಬಿದ್ದಿತು ಎನ್ನುವವರು ಹಲವರು.

ಮೇಲ್ಸೇತುವೆಯಲ್ಲೂ ಗುಂಡಿ!: ಮಳೆಗಾಲದ ಆರಂಭಕ್ಕೂ ಮೊದಲು ಬಿಬಿಎಂಪಿ ವ್ಯಾಪ್ತಿಯ ರಸ್ತೆ ಮತ್ತು ಮೇಲ್ಸೇತುವೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಬೇಕು. ಆದರೆ, ಕೆ.ಆರ್‌. ಮಾರುಕಟ್ಟೆ, ನಾಯಂಡಹಳ್ಳಿ ಸೇರಿದಂತೆ ಹಲವು ಮೇಲ್ಸೇತುವೆ ಮೇಲೆ ಬಿದ್ದಿರುವ ಗುಂಡಿಗಳನ್ನು ಮುಚ್ಚಿಲ್ಲ. ನಾಯಂಡಹಳ್ಳಿಯ ಮೇಲ್ಸೇತುವೆ ಮೇಲೆ ಗಿಡಗಳು ಬೆಳೆದಿದ್ದು, ಡಿವೈಡರ್‌ಗಳಲ್ಲಿ ನೀರು ಹೋಗದಂತೆ ಹೂಳು ತುಂಬಿದೆ.ಬಾಲಗಂಗಾಧರನಾಥ ಮೇಲ್ಸೇತುವೆ ಮೇಲೆ ನೀರು ನಿಲ್ಲಲಿದ್ದು, ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ.

ಮೇಲ್ಸೇತುವೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಪಾಲಿಕೆಯ ವ್ಯಾಪ್ತಿಯ ಮೇಲ್ಸೇತುವೆಗಳ ನಿರ್ವಹಣೆಗೆ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ 50 ಕೋಟಿ ರೂ. ಮೀಸಲಿಟ್ಟಿದ್ದರೂ, ಮೇಲ್ಸೇತುವೆ ನಿರ್ವಹಣೆ ಮರೀಚಿಕೆಯಾಗಿದೆ. ಮಳೆ ಬಂದರೆ ಸಾಕು ಸೇತುವೆ ಮೇಲಿನ ನೀರು ಕೆಳಗೆ ಸುರಿಯುತ್ತಿದ್ದು, ಕೆಳ ಭಾಗದಲ್ಲಿ ಸಂಚರಿಸುವ ವಾಹನ ಸವಾರರ ಮೇಲೆ ಬೀಳುತ್ತಿದೆ. ಇದರಿಂದ ವಾಹನ ಸವಾರರು ಗೊಂದಲಕ್ಕೀಡಾಗಿ ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ.

ಪಾಲಿಕೆ ಅಧಿಕಾರಿಗಳು ಪ್ರತಿವರ್ಷವೂ ಮೇಲ್ಸೇತುವೆಗಳಿಗೆ ಬಣ್ಣ ಬಳಿಯುವುದು, ನೀರಿನ ಪೈಪ್‌ ದುರಸ್ತಿ, ಡಿವೈಡರ್‌ ಮೇಲೆ ಬೆಳೆದ ಕಸ ಸ್ವತ್ಛಗೊಳಿಸುವುದು ಸೇರಿದಂತೆ ವಿವಿಧ ಕಾರ್ಯ ನಿರ್ವಹಿಸಬೇಕು. ಆದರೆ, ನಾಯಂಡಹಳ್ಳಿ, ರಿಚ್‌ಮಂಡ್‌ ಸರ್ಕಲ್‌ ಮೇಲ್ಸೇತುವೆಯಲ್ಲಿ ಯಾವುದೇ ದುರಸ್ತಿ ಕಾರ್ಯ ನಡೆಸಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿರುವ ಯಾವ ಮೇಲ್ಸೇತುವೆ ದುರಸ್ತಿ ಮಾಡಬೇಕೆಂಬುದನ್ನು ಪಟ್ಟಿ ಮಾಡಲಾಗಿದೆ. ಪ್ರಸ್ತುತ ಟೆಂಡರ್‌ ಕರೆಯುವುದು ಮಾತ್ರ ಬಾಕಿ ಇದ್ದು, ಬಜೆಟ್‌ ತಡೆಯಿಂದ ವಿಳಂಬವಾಗಿದೆ ಎಂದು ಪಾಲಿಕೆ ಅಧಿಕಾರಿ ತಿಳಿಸಿದ್ದಾರೆ.

ನಗರದ ಮೇಲ್ಸೇತುವೆಗಳ ದುರಸ್ತಿ ಕಾರ್ಯಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಸೇತುವೆಗಳನ್ನು ಪರಿಶೀಲನೆ ಮಾಡಲಾಗುವುದು. ಆದ್ಯತೆ ಮೇರೆಗೆ ದುರಸ್ತಿ ಕಾರ್ಯ ನಡೆಸಲಾಗುವುದು.
-ಗಂಗಾಂಬಿಕೆ ಮಲ್ಲಿಕಾರ್ಜುನ್‌, ಮೇಯರ್‌

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.