ಬಿರು ಬೇಸಿಗೆಯಲ್ಲಿ ವರವಾದ ವರುಣ


Team Udayavani, Apr 22, 2018, 12:21 PM IST

biru-besige.jpg

ಬೆಂಗಳೂರು: ರಾಜ್ಯದ ಹಲವೆಡೆ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಬಿಸಿಲ ಬೇಗೆಯಿಂದ ಬಳಲಿದ್ದವರಿಗೆ ತುಸು ತಂಪೆರೆದಿದ್ದರೆ ಇನ್ನೊಂದೆಡೆ ವಿದ್ಯುತ್‌ ಬೇಡಿಕೆ 1200 ಮೆಗಾವ್ಯಾಟ್‌ನಷ್ಟು ತಗ್ಗಿದ್ದು, ಇಂಧನ ಇಲಾಖೆಗೆ ವರದಾನವಾಗಿ ಪರಿಣಮಿಸಿದೆ.

ಕಳೆದ ಬುಧವಾರದಿಂದ ನಾನಾ ಕಡೆ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಪಂಪ್‌ಸೆಟ್‌ ಬಳಕೆ ಇಳಿಕೆಯಾಗಿದೆ. ಬೆಂಗಳೂರು ಸೇರಿದಂತೆ ಇತರೆ ಕೆಲ ನಗರಗಳಲ್ಲೂ  ಮಳೆಯಿಂದಾಗಿ ವಾತಾವರಣ ತಂಪಾಗಿದ್ದು, ವಿದ್ಯುತ್‌ ಬಳಕೆ ಪ್ರಮಾಣ ಇಳಿಕೆಯಾಗಿದೆ. ರಾಜ್ಯಾದ್ಯಂತ ಇತ್ತೀಚಿನವರೆಗೂ ನಿತ್ಯ 10,300ರಿಂದ 10,700 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆ ಇತ್ತು.

ಕೆಲ ದಿನಗಳಿಂದ ಮಳೆಯಾಗುತ್ತಿರುವುದರಿಂದ ಬೇಡಿಕೆಯು 1000ದಿಂದ 1,200 ಮೆಗಾವ್ಯಾಟ್‌ನಷ್ಟು ಇಳಿಕೆಯಾಗಿದೆ. ಇದರಿಂದಾಗಿ ಸದ್ಯ 9,500ರಿಂದ 9,700 ಮೆಗಾವ್ಯಾಟ್‌ ವಿದ್ಯುತ್‌ಗೆ ಬೇಡಿಕೆಯಿದ್ದು, ಅಗತ್ಯವಿರುವಷ್ಟು ವಿದ್ಯುತ್‌ ಪೂರೈಸಲಾಗುತ್ತಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.

 ಇದುವೆಗೂ ರಾಜ್ಯದಲ್ಲಿ ತಾಪಮಾನ ಏರುಮುಖವಾಗಿದ್ದು, ಬಿಸಿಲ ಬೇಗೆಯೂ ಏರುತ್ತಿದೆ. ಪರಿಣಾಮವಾಗಿ ನಗರ ಪ್ರದೇಶಗಳಲ್ಲಿ ಹವಾನಿಯಂತ್ರಣ ಸಾಧನ, ಕೂಲರ್‌, ಫ್ಯಾನ್‌ ಸೇರಿದಂತೆ ಇತರೆ ವಿದ್ಯುತ್‌ ಉಪಕರಣಗಳ ಬಳಕೆ ಹೆಚ್ಚಾಗಿದ್ದು, ವಿದ್ಯುತ್‌ ಬೇಡಿಕೆ ಏರುತ್ತಲೇ ಇದೆ.

ಬೇಸಿಗೆಯಲ್ಲಿ ಬಹುತೇಕ ಕಡೆ ಕೃಷಿ ಚಟುವಟಿಕೆಗೆ ಕೊಳವೆ ಬಾವಿ ನೀರು  ಆಶ್ರಯಿಸಲಾಗುತ್ತಿತ್ತು. ಹೀಗಾಗಿ,  ಕೃಷಿ ವಲಯದಲ್ಲೂ ವಿದ್ಯುತ್‌ ಬೇಡಿಕೆ ಹೆಚ್ಚಾಗಿತ್ತು.. ಪರಿಣಾಮವಾಗಿ ರಾಜ್ಯಾದ್ಯಂತ ನಿತ್ಯ ಸರಾಸರಿ ವಿದ್ಯುತ್‌ ಬೇಡಿಕೆ 10,500 ಮೆಗಾವ್ಯಾಟ್‌ಗೆ ಏರಿಕೆಯಾಗಿತ್ತು.

ವರುಣನ ವರದಾನ: ಬುಧವಾರದಿಂದೀಚೆಗೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಎರಡು- ಮೂರು ದಿನ ಮಳೆಯಾದ ಕಾರಣ ವಾತಾವರಣ ತಂಪಾಗುವ ಜತೆಗೆ ಬೇಡಿಕೆಯಲ್ಲಿ ದಿಢೀರ್‌ ಇಳಿಕೆ ಕಂಡಿದೆ. ವಿದ್ಯುತ್‌ ಉತ್ಪಾದನೆ ಮೇಲಿನ ಒತ್ತಡ ತಾತ್ಕಾಲಿಕವಾಗಿ ತಗ್ಗಿದೆ. ಬೇಡಿಕೆಯಷ್ಟು ವಿದ್ಯುತ್‌ ಪೂರೈಸಲು ಹೆಣಗಾಡುತ್ತಿರುವ ಇಂಧನ ಇಲಾಖೆಗೆ ಇತ್ತೀಚೆಗೆ ಸುರಿದ ವರುಣ ವರದಾನದಂತಾಗಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಉಷ್ಣ ವಿದ್ಯುತ್‌ ಗರಿಷ್ಠ ಉತ್ಪಾದನೆ: ಜಲವಿದ್ಯುತ್‌ ಘಟಕಗಳಿಗಿರುವ ಜಲಾಶಯಗಳಲ್ಲಿ ಶೇ.25ರಷ್ಟು ನೀರಿನ ಸಂಗ್ರಹವಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯವಿದ್ದಷ್ಟು ವಿದ್ಯುತ್‌ ಮಾತ್ರ ಉತ್ಪಾದಿಸಲಾಗುತ್ತಿದೆ. ಉಷ್ಣ ವಿದ್ಯುತ್‌ ಘಟಕಗಳಿಂದ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ.

ಉಷ್ಣ ವಿದ್ಯುತ್‌ ಘಟಕಗಳಲ್ಲಿ ಒಂದೆರಡು ದಿನಕ್ಕಾಗುವಷ್ಟು ಕಲ್ಲಿದ್ದಲು ಸಂಗ್ರಹವಷ್ಟೇ ಇದ್ದು, ಬೇಡಿಕೆಗೆ ಅನುಗುಣವಾಗಿ ಉತ್ಪಾದಿಸಲಾಗುತ್ತಿದೆ. ಪರಿಸ್ಥಿತಿಗೆ ಅನುಗುಣವಾಗಿ ಮಧ್ಯರಾತ್ರಿ ಇಂಧನ ವಿನಿಮಯ ವ್ಯವಸ್ಥೆಯಡಿ ಅಗತ್ಯವಿರುವಷ್ಟು ವಿದ್ಯುತ್‌ ಪಡೆದು ಪೂರೈಸಲಾಗುತ್ತಿದೆ ಎಂದು ಹೇಳಿದರು.  

ಶೇ.48ರಷ್ಟು ಬೆಸ್ಕಾಂನಲ್ಲಿ ಬಳಕೆ: ರಾಜ್ಯಕ್ಕೆ ನಿತ್ಯ ಹಂಚಿಕೆಯಾಗುವ ವಿದ್ಯುತ್‌ನಲ್ಲಿ ಶೇ.48ರಷ್ಟು ಬೆಸ್ಕಾಂ ವ್ಯಾಪ್ತಿಯಲ್ಲೇ ಬಳಕೆಯಾಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲೇ ಬಳಕೆ ಹೆಚ್ಚಾಗಿದ್ದು, ಬೇಡಿಕೆಯೂ ತೀವ್ರವಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಸರಾಸರಿ 4,800 ಮೆಗಾವ್ಯಾಟ್‌ ಬಳಕೆಯಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಏರುತ್ತಲೇ ಇದ್ದು, ಬೇಡಿಕೆಯಷ್ಟು ವಿದ್ಯುತ್‌ ಪೂರೈಸುವುದು ಸವಾಲೆನಿಸಿದೆ.

ದಾಖಲೆ ಪ್ರಮಾಣದ ಬೇಡಿಕೆ: ಕಳೆದ ಮಾರ್ಚ್‌ನಲ್ಲಿ ದಿನದ ಗರಿಷ್ಠ ಬೇಡಿಕೆ 10,777 ಮೆಗಾವ್ಯಾಟ್‌ಗೆ ಏರಿಕೆಯಾಗುವ ಮೂಲಕ ದಾಖಲೆ ಸೃಷ್ಟಿಯಾಗಿದೆ. ಕಳೆದ ವರ್ಷ ಬೇಸಿಗೆಯಲ್ಲಿ 10,424 ಮೆಗಾವ್ಯಾಟ್‌ ಗರಿಷ್ಠ ಬೇಡಿಕೆಯಾಗಿತ್ತು (ಪೀಕ್‌ ಲೋಡ್‌).

ಸದ್ಯ ದಿನದ ಗರಿಷ್ಠ ವಿದ್ಯುತ್‌ ಬೇಡಿಕೆ ಸರಾಸರಿ 10,300 ಮೆಗಾವ್ಯಾಟ್‌ನಿಂದ 10,700 ಮೆಗಾವ್ಯಾಟ್‌ರಷ್ಟಿದೆ. ಕಳೆದ ಮಾರ್ಚ್‌ನಲ್ಲಿ ವಿದ್ಯುತ್‌ ಬೇಡಿಕೆಯು 10,777 ಮೆಗಾವ್ಯಾಟ್‌ಗೆ ಏರಿಕೆಯಾಗಿರುವುದು ಈವರೆಗಿನ ಗರಿಷ್ಠ ಬೇಡಿಕೆ ದಾಖಲೆ ಎಂದು  ಇಂಧನ ಮೂಲಗಳು ತಿಳಿಸಿವೆ.

* ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.