ಬಿಎಸ್‌ವೈಗೆ ಕ್ಷೇತ್ರ ಬಿಡಲು ಪೈಪೋಟಿ


Team Udayavani, Sep 18, 2017, 6:00 AM IST

BSY-750.jpg

ಬೆಂಗಳೂರು: ಬಿಎಸ್‌ವೈ ಉತ್ತರ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ನಡುವೆಯೇ, ಆ ಭಾಗದ ಹಾಲಿ ಮತ್ತು ಮಾಜಿ ಶಾಸಕರು ಕ್ಷೇತ್ರ ಬಿಟ್ಟುಕೊಡಲು ಪೈಪೋಟಿಗಿಳಿದಿದ್ದಾರೆ.

ಭಾನುವಾರ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಭೇಟಿ ಮಾಡಿದ್ದ ಮುರುಗೇಶ್‌ ನಿರಾಣಿ ಸೇರಿದಂತೆ ಬಾಗಲಕೋಟೆ ಜಿಲ್ಲೆಯ ಬಿಜೆಪಿ ನಾಯಕರು, ತಮ್ಮ ಕ್ಷೇತ್ರದಲ್ಲೇ ಒಂದನ್ನು ಆಯ್ದುಕೊಳ್ಳಿ ಎಂದಿದ್ದಾರೆ. ನಿರಾಣಿ ಅವರು ತಮ್ಮ ಕ್ಷೇತ್ರ ಬೀಳಗಿ ಅಥವಾ ಹಿಂದೆ ಸ್ಪರ್ಧಿಸಿದ್ದ ಜಮಖಂಡಿ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಘೋಷಿಸಿದರು.

ಅಲ್ಲದೆ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಿದ್ದು ಮುಧೋಳ ಮೀಸಲು ಕ್ಷೇತ್ರವಾಗಿದೆ. ಉಳಿದ ಆರರಲ್ಲಿ ಯಾವುದನ್ನು ಬೇಕಾದರೂ ಆಯ್ದುಕೊಳ್ಳಬಹುದು ಎಂದು ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ವಿಜಯಪುರ, ಹಾವೇರಿ, ಗದಗ ಜಿಲ್ಲೆಗಳ ಕೆಲವು ಹಾಲಿ ಮತ್ತು ಮಾಜಿ ಶಾಸಕರೂ ತಮ್ಮ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ದೂರವಾಣಿ ಕರೆ ಮಾಡಿ ಹೇಳಿದ್ದಾರೆ ಎನ್ನಲಾಗಿದೆ.

ಬಿಎಸ್‌ವೈ ಎತ್ತ?
ಈ ಮಧ್ಯೆ ಬಿಎಸ್‌ವೈ ಅವರು ಹಾವೇರಿ, ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಗಳ ಪೈಕಿ ಒಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಚಿಂತನೆ ನಡೆಸಿದ್ದಾರೆ. ಅದರಲ್ಲೂ ಬಾಗಲಕೋಟೆ ಅಥವಾ ವಿಜಯಪುರದಲ್ಲಿ ಲಿಂಗಾಯಿತರೇ ಪ್ರಾಬಲ್ಯ ಹೊಂದಿದ್ದಾರೆ. ಇಲ್ಲಿ ಕಣಕ್ಕಿಳಿದರೆ ತಮಗೂ ಮತ್ತು ಪಕ್ಷಕ್ಕೂ ಲಾಭ ಎಂಬುದು ಬಿಎಸ್‌ವೈ ಅವರ ಚಿಂತನೆ.
ಇದಷ್ಟೇ ಅಲ್ಲ, ಪಕ್ಕದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಕ್ಷೇತ್ರದ ಬಗ್ಗೆಯೂ ಒಲವಿದೆ ಎಂದು ಹೇಳಲಾಗಿದ್ದು, ಇಲ್ಲಿಗೆ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಜಯಪುರದಿಂದ ಹೆಚ್ಚಿನ ಒತ್ತಡ
ಪಕ್ಷ ಮತ್ತು ಬಿಎಸ್‌ವೈಗೆ ಅನುಕೂಲವಾಗಬೇಕಾದರೆ ಬಾಗಲಕೋಟೆ ಅಥವಾ ವಿಜಯಪುರವೇ ಸೂಕ್ತ ಎಂಬ ಅಭಿಪ್ರಾಯ ಅವರ ಆಪ್ತ ವಲಯದಿಂದ ಕೇಳಿಬಂದಿದೆ. ಬಾಗಲಕೋಟೆಯ ತೇರದಾಳ (2008ರಲ್ಲಿ ಸಿದ್ದು ಸವದಿ ಗೆದ್ದಿದ್ದರೆ, ಕಳೆದ ಬಾರಿ ಉಮಾಶ್ರೀ ಜಯಗಳಿಸಿದ್ದರು), ವಿಜಯಪುರ ನಗರ ಅಥವಾ ಬಸವನ ಬಾಗೇವಾಡಿ ಕ್ಷೇತ್ರಗಳೂ ಸೂಕ್ತ ಎಂಬ ಒತ್ತಾಯ ಕೇಳಿಬಂದಿದೆ.

ಸದ್ಯ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸುತ್ತಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌ ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದವರು. ಈ ಹೋರಾಟದ ಮೂಲಕ ಜಿಲ್ಲೆ ಸೇರಿ ಸುತ್ತಮುತ್ತಲಿನ ಭಾಗದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಪಾಟೀಲರಿಗೆ ಪ್ರತ್ಯುತ್ತರ ನೀಡಲು ಯಡಿಯೂರಪ್ಪ ಅವರೇ ಸೂಕ್ತ ಎಂಬ ಅಭಿಪ್ರಾಯವಿದೆ. ಅಲ್ಲದೆ ಇಲ್ಲಿ ಲಿಂಗಾಯತರ ಪ್ರಾಬಲ್ಯವಿದ್ದು, ಪಕ್ಷಕ್ಕೂ ಅನುಕೂಲ ಎಂದು ಹೇಳಲಾಗುತ್ತಿದೆ.

ಬಾಗಲಕೋಟೆ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ನನ್ನ ಕ್ಷೇತ್ರ ಬೀಳಗಿ ಅಥವಾ ಹಿಂದಿನ ಕ್ಷೇತ್ರ ಜಮಖಂಡಿಯನ್ನು ಬಿಟ್ಟುಕೊಡಲು ಸಿದ್ಧನಿದ್ದೇನೆ. ಬಿಎಸ್‌ವೈ ಅವರು ಇನ್ನೂ ತೀರ್ಮಾನಿಸಿಲ್ಲ.
– ಮುರುಗೇಶ್‌ ನಿರಾಣಿ, ಮಾಜಿ ಸಚಿವ

ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಲ್ಲಿ ಸ್ಪರ್ಧೆ ಮಾಡಿದರೆ ಆ ಭಾಗದಲ್ಲಿ ರಾಜಕೀಯ ಸ್ವತ್ಛವಾಗುತ್ತದೆ. ಇದಕ್ಕಿಂತ ಹೆಚ್ಚೇನೂ ನಾನು ಹೇಳುವುದಿಲ್ಲ.
– ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಉತ್ತರಕ್ಕೆ ಸಿದ್ದು ಕರೆದ ತಿಮ್ಮಾಪುರ
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಹೆಸರು ಈಗ ಉತ್ತರದ ಕಡೆ ಕೇಳಿಬರುತ್ತಿದೆ. ಇದರ ಜತೆಯಲ್ಲೇ ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರು, ಸಿದ್ದರಾಮಯ್ಯ ಅವರಿಗೆ ನೇರ ಆಹ್ವಾನ ನೀಡಿದ್ದು, ಉತ್ತರಕ್ಕೇ ಬಂದು ಸ್ಪರ್ಧಿಸಿ ಎಂದು ಮನವಿ ಮಾಡಿದ್ದಾರೆ. ಇದು ಉತ್ತರ ಕರ್ನಾಟಕದ ಕಾರ್ಯಕರ್ತರ ಆಶಯವಾಗಿದೆ. 

ಬಾಗಲಕೋಟೆ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಬೇಕಾದರೂ ನಿಲ್ಲಲಿ, ಅತ್ಯಧಿಕ ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದರು. ಈ ಹಿಂದೆ ಕೂಡ ‌ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಪ್ಪಳ ಅಥವಾ ಬಾಗಲಕೋಟೆ ಜಿಲ್ಲೆಯಿಂದ ಸ್ಪರ್ಧಿಸುವಂತೆ  ಕಾಂಗ್ರೆಸ್‌ನ ಆ ಭಾಗದ ಮುಖಂಡರು ಒತ್ತಡ ಹೇರಿದ್ದರು. ಇದೇ ವೇಳೆ ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈ ಹಿಂದೆಯೇ ಹುಬ್ಬಳ್ಳಿಯಲ್ಲಿ ಮನೆ ಮಾಡಿ, ಪಕ್ಷಕ್ಕೆ ಭದ್ರ ಬುನಾದಿ ಹಾಕಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಆ ಭಾಗದಲ್ಲಿ ಸುತ್ತಾಟ ನಡೆಸಿ ಪಕ್ಷವನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.