ಕೇಂದ್ರ ಆಯೋಗಕ್ಕೆ ಬಿಎಸ್ವೈ ಪತ್ರ
Team Udayavani, Apr 26, 2019, 11:20 AM IST
ಬೆಂಗಳೂರು: ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ಮುಗಿದ ನಂತರ ಮಾದರಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ ಎಂದು ಹೇಳಿಕೊಂಡು ರಾಜ್ಯ ಸರ್ಕಾರ ಕೆಲ ಯೋಜನೆಗೆ ಚಾಲನೆ ನೀಡಿದೆ. ಇದರಿಂದ ಚುನಾವಣಾ ನೀತಿ ಸಂಹಿತಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಕೇಂದ್ರ ಚುನಾವಣಾ ಆಯೋಗ ಸಡಿಲಗೊಳಿಸಿರುವುದಾಗಿ ಹೇಳಿ ರಾಜ್ಯ ಸರ್ಕಾರ ಮೂಲಸೌಕರ್ಯ ಯೋಜನೆಗಳು, ಖರೀದಿ ಹಾಗೂ ಮತ್ತಿತರ ಸೇವೆಗಳ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಕೂಡಲೇ ತಡೆ ಹಿಡಿಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ವಿಧಿಸಿದ್ದ ನೀತಿ ಸಂಹಿತೆಯನ್ನು ವಾಪಸ್ ಪಡೆದಿರುವುದಾಗಿ ಹೇಳಿ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಂಬಂಧಿಸಿದ ಖರೀದಿ ಮತ್ತು ಸೇವೆಗಳ ಟೆಂಡರ್ಗಳಿಗೆ ಬುಧವಾರದಿಂದ ಚಾಲನೆ ನೀಡಿದೆ. ಚುನಾ ವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಚುನಾವಣಾ ಅಧಿಸೂಚನೆ ಅನ್ವಯ ಫಲಿತಾಂಶ ಘೋಷಣೆ ಆಗುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಬರ ನಿರ್ವಹಣೆ, ಪ್ರಕೃತಿ ವಿಕೋಪ ಪರಿಹಾರದಂತಹ ತುರ್ತು ಪರಿಸ್ಥಿತಿ ಹೊರತುಪಡಿಸಿ ಬೇರೆ ಯಾವುದೇ ಕೆಲಸಕ್ಕೆ ವಿನಾಯ್ತಿ ನೀಡಲು ಅವಕಾಶ ಇಲ್ಲ. ಆದರೆ ರಾಜ್ಯ ಸರ್ಕಾರ ಎರಡು ದಿನಗಳಿಂದ ಆಯೋಗವೇ ವಿನಾಯಿತಿ ನೀಡಿದೆ ಎಂದು ಹೇಳಿಕೊಂಡು ಹಲವಾರು ಟೆಂಡರ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ