ಆದಾಯವಿಲ್ಲದಿದ್ದರೂ ಅಬ್ಬರದ ಬಜೆಟ್‌


Team Udayavani, Feb 21, 2019, 6:27 AM IST

blore-1.jpg

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಆಡಳಿತ ಮಂಡಿಸಿದ 2019-20ನೇ ಸಾಲಿನ ಬಿಬಿಎಂಪಿ ಬಜೆಟ್‌ ಅವಾಸ್ತವಿಕ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ.

ಬುಧವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಬಜೆಟ್‌ ಮಂಡನೆ ದಿನ ರಾಜ್ಯ ಸರ್ಕಾರದಿಂದ ಪತ್ರ ಬಂದಿದ್ದು, ಆದಾಯಕ್ಕೆ ತಕ್ಕಂತೆ ಬಜೆಟ್‌ ಮಂಡಿಸುವಂತೆ ಪತ್ರದಲ್ಲಿ ತಿಳಿಸಲಾಗಿದೆ. ಆದರೆ, ನೀವು 5 ಸಾವಿರ ಕೋಟಿ ರೂ. ಆದಾಯ ಇಟ್ಟುಕೊಂಡು 10,688 ಕೋಟಿ ರೂ. ಬಜೆಟ್‌
ಮಂಡಿಸಿದ್ದೀರಿ. ಹೀಗಾಗಿ, ಇದು ಅವಾಸ್ತವಿಕ ಬಜೆಟ್‌ ಎಂಬುದು ಸಾಬೀತಾಗಿದೆ ಎಂದು ಟೀಕಿಸಿದರು.

2018-19ನೇ ಸಾಲಿನ ಆಯವ್ಯಯ ಕಾರ್ಯ ನಿರ್ವಹಣಾ ವರದಿಯಂತೆ ಬಜೆಟ್‌ ಕಾರ್ಯಕ್ರಮಗಳು ಶೇ.10ರಷ್ಟೂ ಅನುಷ್ಠಾನಗೊಂಡಿಲ್ಲ. ಆದರೆ, ಜಾರಿಯಾಗದ ಯೋಜನೆಗಳನ್ನು ಜಾರಿಯಾಗಿವೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿದರು.

 ಜಾಬ್‌ಕೋಡ್‌ ಬಜೆಟ್‌: ಕಳೆದ ಸಾಲಿನ ಬಜೆಟ್‌ನ ಯಾವುದೇ ಯೋಜನೆ ಅನುಷ್ಠಾನಗೊಳಿಸಿದೆ ಕೇವಲ ಜಾಬ್‌ ಸಂಖ್ಯೆ ನೀಡುವ ಮೂಲಕ 2018-19ನೇ ಸಾಲಿನ ಬಜೆಟ್‌ನ್ನು “ಜಾಬ್‌ಕೋಡ್‌ ಬಜೆಟ್‌’ ಮಾಡಿದ್ದಾರೆ. ಜತೆಗೆ ಸೈನಿಕರಿಗೆ ಆಸ್ತಿ ತೆರಿಗೆ ವಿನಾಯಿತಿ, ಟೋಟಲ್‌ ಸ್ಟೇಷನ್‌ ಸರ್ವೆ, ಸ್ಯಾನಿಟರಿ ಇನ್ಸಿನೇಟರ್‌ ನಂತಹ ಸಣ್ಣ ಯೋಜನೆಗಳನ್ನು ಜಾರಿಗೊಳಿಸಲೂ ಮೈತ್ರಿ ಆಡಳಿತಕ್ಕೆ ಸಾಧ್ಯವಾಗಿಲ್ಲ ಎಂದು ಪದ್ಮನಾಭರೆಡ್ಡಿ, ತರಾಟೆಗೆ ತೆಗೆದುಕೊಂಡರು. ಬರುವ ಅನುದಾನದ ಮೇಲೆ 10,688 ಕೋಟಿ ರೂ. ಬಜೆಟ್‌ ಮಂಡಿಸಲಾಗಿದೆ. ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳಿಗೆ 2,954 ಕೋಟಿ ರೂ. ಚಾಲ್ತಿ ಕಾಮಗಾರಿಗಳಿಗೆ 4,167.87 ಕೋಟಿ ರೂ., ಕಾರ್ಯಾದೇಶ ನೀಡಿ ಕಾಮಗಾರಿ ಆರಂಭಿಸಬೇಕಿರುವ ಯೋಜನೆಗಳಿಗೆ 728.10 ಕೋಟಿ ರೂ., ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ 1,996.08 ಕೋಟಿ ರೂ. ಮೀಸಲಿಡಲಾಗಿದೆ.

ಇದರೊಂದಿಗೆ ಕಾಮಗಾರಿ ಸಂಖ್ಯೆ ನೀಡಿ ಟೆಂಡರ್‌ ಕರೆಯಬೇಕಿರುವ ಕಾಮಗಾರಿಗಳಿಗೆ 1,801.28 ಕೋಟಿ, ಆಡಳಿತಾತ್ಮಕ ಆದೇಶ ನೀಡಿ ಕಾಮಗಾರಿ ಸಂಖ್ಯೆ ನೀಡಬೇಕಿರುವ ಯೋಜನೆಗಳಿಗೆ 1,193.66 ಕೋಟಿ ರೂ. ಹಾಗೂ 2019-20ನೇ ಸಾಲಿಗೆ ಹೊಸ ಕಾಮಗಾರಿಗಳಿಗೆ 6886.75 ಕೋಟಿ ರೂ. ಸೇರಿ ಒಟ್ಟಾರೆ 19,728.57 ಕೋಟಿ ರೂ. ಅಗತ್ಯವಿರುವಾಗ 10,688 ಕೋಟಿ ರೂ.ಗಳ ಬಜೆಟ್‌ ಮಂಡಿಸಿರುವುದು ಅವಾಸ್ತವ ಎಂದು ಹೇಳಿದರು.

ಅವರದು ಮನ್‌ ಕೀ ಬಾತ್‌, ನಮ್ಮದು ಕಾಮ್‌ ಕೀ ಬಾತ್‌ ಬಜೆಟ್‌ ಮೇಲಿನ ಚರ್ಚೆಯ ಸಭೆಯಲ್ಲಿ ವಿಷಯ ಮಂಡಿಸಿದ ಆಡಳಿತ ಪಕ್ಷ ನಾಯಕ ಅಬ್ದುಲ್‌ ವಾಜಿದ್‌, 2019-20ನೇ ಸಾಲಿನ ಬಜೆಟ್‌ ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಜತೆಗೆ ಕಳೆದ ಸಾಲಿನಲ್ಲಿ ನಾವು ಘೋಷಿಸಿದ ಯೋಜನೆಗಳ ಪೈಕಿ ಶೇ.73ರಷ್ಟು ಅನುಷ್ಠಾನಗೊಂಡಿವೆ. ಕಾಂಗ್ರೆಸ್‌-ಜೆಡಿಎಸ್‌ ಆಡಳಿತ ಬರುವ ಮೊದಲು ಶೇ.39-40ರಷ್ಟು ಮಾತ್ರ ಬಜೆಟ್‌ ಜಾರಿಯಾಗುತ್ತಿತ್ತು ಎಂದು ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿದರು. ಬಜೆಟ್‌ನಲ್ಲಿ ಮಹಾಲಕ್ಷ್ಮೀ, ಅನ್ನಪೂರ್ಣೇಶ್ವರೀ, ಆರೋಗ್ಯ ಕವಚ ಸೇರಿದಂತೆ ಹತ್ತಾರು ಯೋಜನೆಗಳನ್ನು ಮಹಿಳೆಯರಿಗಾಗಿ ಘೋಷಿಸಿದ್ದೇವೆ. ಆದರೆ, ಮಹಿಳೆಯೊಬ್ಬರು ಮಂಡಿಸುತ್ತಿದ್ದ ಬಜೆಟ್‌ಗೆ ಅಡ್ಡಿಪಡಿಸುವ ಮೂಲಕ ಮಹಿಳೆಯರ ಬಗ್ಗೆ  ನಗೆಷ್ಟು ಗೌರವವಿದೆ ಎಂದು ಬಿಜೆಪಿ ಸಾಬೀತುಪಡಿಸಿದೆ. ಕೆಲವರು ಬೇಟಿ ಪಡಾವೋ, ಬೇಟಿ ಬಚಾವೋ ಎಂದು ಹೇಳಿಕೊಂಡು ಪ್ರಚಾರ ಪಡೆಯುತ್ತಾರೆ. ಆದರೆ, ನಾವು ಬಜೆಟ್‌ನಲ್ಲಿ ಯೋಜನೆಗಳನ್ನು ಘೋಷಿಸಿದ್ದೇವೆ. ಅವರದು “ಮನ್‌ ಕೀ ಬಾತ್‌’, ನಮ್ಮದು “ಕಾಮ್‌ ಕೀ ಬಾತ್‌’ ಎಂದು ಪ್ರತಿಪಕ್ಷದ ಸದಸ್ಯರಿಗೆ ಟಾಂಗ್‌ ನೀಡಿದರು.

ಅವರ ಶಾಪ ತಟ್ಟುತ್ತೆ
ಕಳೆದ ವರ್ಷ ಕಾರ್ಯ ನಿರ್ವಹಣಾ ವರದಿಯ ಕುರಿತು ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಬಜೆಟ್‌ನಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಿಡಲಾಗಿದ್ದ 1 ಕೋಟಿ ರೂ.ಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಬಳಸಿಲ್ಲ ಎಂದು ದೂರಿ ಆಡಳಿತ ಪಕ್ಷದ ಕಡೆಗೆ ತಿರುಗಿ ಚಪ್ಪಾಳೆ
ಹೊಡೆದು, ಅವರ ಶಾಪ ನಿಮಗೆ ತಟ್ಟುತ್ತದೆ ಎಂದಾಗ ಸಭೆ ನಗೆಗಡಲಲ್ಲಿ ತೇಲಿತು. 

ಚರ್ಚೆಗೆ ನಿರಾಸಕ್ತಿ
ಪಾಲಿಕೆ ಬಜೆಟ್‌ ಮೇಲಿನ ಚರ್ಚೆಯ ಮೊದಲ ದಿನ ಬಹುತೇಕ ಪಾಲಿಕೆ ಸದಸ್ಯರು ಸಭೆಗೆ ಗೈರಾಗಿದ್ದರು. ಮೇಯರ್‌ ಗಂಗಾಂಬಿಕೆ, ಏರೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಸಭೆ ಬೆಳಗ್ಗೆ 10.30ರ ಬದಲು 11.45ಕ್ಕೆ ಶುರುವಾಯಿತು. ಈ ವೇಳೆ ಮೇಯರ್‌, ಉಪ ಮೇಯರ್‌
ಹೊರತುಪಡಿಸಿ ಕೇವಲ 40 ಸದಸ್ಯರು ಹಾಜರಿದ್ದರು. ಇನ್ನು ಮಧ್ಯಾಹ್ನದ ನಂತರ ಕಾಂಗ್ರೆಸ್‌ನ 15, ಬಿಜೆಪಿಯ 9 ಹಾಗೂ ಜೆಡಿಎಸ್‌ನ 4 ಸದಸ್ಯರು ಮಾತ್ರ ಹಾಜರಿದ್ದರು.

ರುಚಿಸದ ಇಂದಿರಾ ಕ್ಯಾಂಟೀನ್‌ ಊಟ
ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಆಹಾರ ಗುಣಮಟ್ಟದಿಂದ ಕೂಡಿದೆ ಎಂಬುದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕಳೆದ ನಾಲ್ಕು ತಿಂಗಳಿಂದ ಬಿಬಿಎಂಪಿ ಸಾಮಾನ್ಯ ಸಭೆಗೆ ಪೂರೈಕೆಯಾಗುತ್ತಿದ್ದ ಕ್ಯಾಂಟೀನ್‌ ಊಟ ಸ್ಥಗಿತಗೊಂಡಿದ್ದು, ಬೇರೆಡೆಯಿಂದ ಸಸ್ಯಹಾರ, ಮಾಂಸಹಾರ ಪೂರೈಕೆಯಾಗಿದೆ. ಪಾಲಿಕೆ ಬಜೆಟ್‌ ಮೇಲೆ ಬುಧವಾರದಿಂದ ಚರ್ಚೆ ಆರಂಭವಾಗಿದ್ದು, ಮಧ್ಯಾಹ್ನದ ಊಟಕ್ಕೆ ಇಂದಿರಾ
ಕ್ಯಾಂಟೀನ್‌ ಊಟದ ಬದಲಿಗೆ ಈ ಹಿಂದಿನಂತೆ ಬೇರೆಡೆಯಿಂದ ಊಟ ತರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಇಷ್ಟು ದಿನ ಖಾಲಿ ಹೊಡೆಯುತ್ತಿದ್ದ ಕೌನ್ಸಿಲ್‌ ಕ್ಯಾಂಟೀನ್‌ ಬುಧವಾರ ತುಂಬಿತ್ತು. 2018ರ ಅಕ್ಟೋಬರ್‌ನಿಂದ ಕೌನ್ಸಿಲ್‌ಗೆ ಇಂದಿರಾ ಕ್ಯಾಂಟೀನ್‌ ನಿಂದ ಆಹಾರ ಪೂರೈಕೆಯಾಗುತ್ತಿತ್ತು. ಅದರೆ,
ಮೇಯರ್‌, ಆಡಳಿತ ಪಕ್ಷ ನಾಯಕ ಹಾಗೂ ಆಯುಕ್ತರನ್ನು ಹೊರತುಪಡಿಸಿ ಯಾರೂ ಆ ಊಟ ಸೇವಿಸುತ್ತಿರಲಿಲ್ಲ.

ಮೇಯರ್‌ಗೇ ಮಾಹಿತಿ ಇಲ್ಲ: ಬುಧವಾರ ಮೇಯರ್‌ ಗಮನಕ್ಕೂ ಬಾರದೆ ಏಕಾಏಕಿ ಬೇರೆಡೆ ಯಿಂದ ಕ್ಯಾಂಟೀನ್‌ಗೆ ಆಹಾರ ಪೂರೈಕೆಯಾಗಿದೆ.  

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.